AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ಈ ಸಿನಿಮಾದಲ್ಲಿ ಇರಲಿದೆ.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​
‘ಕರಾವಳಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jan 02, 2024 | 12:56 PM

Share

ಕನ್ನಡ ಚಿತ್ರರಂಗದಲ್ಲಿ ಕರಾವಳಿ ಭಾಗದ ಕಥೆಗಳು ಜನರಿಗೆ ಮೆಚ್ಚುಗೆ ಆಗುತ್ತಿವೆ. ಅದರಲ್ಲೂ ಗುರುದತ್​ ಗಾಣಿಗ ನಿರ್ದೇಶನದ ಕರಾವಳಿ’ ಸಿನಿಮಾ (Karavali Movie) ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ‘ಡೈನಾಮಿಕ್​ ಪ್ರಿನ್ಸ್​’ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿತ್ತು. ಅದನ್ನು ಕಂಡು ಫ್ಯಾನ್ಸ್​ ವಾವ್​ ಎಂದಿದ್ದರು. ಈಗ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ನ್ಯೂ ಇಯರ್​ ಸೆಲೆಬ್ರೇಷನ್​ ಸಂದರ್ಭದಲ್ಲಿ ಈ ಪೋಸ್ಟರ್​ ಹೊರಬಂದಿದೆ.

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಈ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ‘ಕರಾವಳಿ’ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ: ‘ಸೋನಾ ಬೇಬಿ’ ಜೊತೆ ಬಿಂದಾಸ್ ಆಗಿ ಕುಣಿದ ಪ್ರಜ್ವಲ್ ದೇವರಾಜ್

ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲೂ ‘ಕರಾವಳಿ’ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಟೀಸರ್ ವೀಕ್ಷಿಸಿದ ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇದರಿಂದಾಗಿ ಸಿನಿಮಾದ ಬೇಡಿಕೆ ಹೆಚ್ಚಾಗಿದೆ. ಪರಭಾಷೆಯಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಿ ಎಂದು ಬೇಡಿಕೆ ಬಂದಿದೆ. ಚಿತ್ರೀಕರಣ ಶುರುವಾಗುವುದಕ್ಕೂ ಮುನ್ನವೇ ಈ ರೀತಿ ಡಿಮ್ಯಾಂಟ್​ ಸೃಷ್ಟಿ ಆಗಿರುವುದು ತಂಡದ ಖುಷಿಗೆ ಕಾರಣ ಆಗಿದೆ.

ಸಚಿನ್ ಬಸ್ರೂರು ಅವರು ‘ಕರಾವಳಿ ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿಮನ್ಯು ಸದಾನಂದನ್ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ‘ಕರಾವಳಿ’ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ಟೀಸರ್ ಹಾಗೂ ಪೋಸ್ಟರ್​ಗೆ ಮೆಚ್ಚುಗೆ ಸಿಕ್ಕಿರುವುದರಿಂದ ಚಿತ್ರತಂಡದ ಜವಾಬ್ದಾರಿ ಹೆಚ್ಚಾಗಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ