AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ಈ ಸಿನಿಮಾದಲ್ಲಿ ಇರಲಿದೆ.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​
‘ಕರಾವಳಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jan 02, 2024 | 12:56 PM

Share

ಕನ್ನಡ ಚಿತ್ರರಂಗದಲ್ಲಿ ಕರಾವಳಿ ಭಾಗದ ಕಥೆಗಳು ಜನರಿಗೆ ಮೆಚ್ಚುಗೆ ಆಗುತ್ತಿವೆ. ಅದರಲ್ಲೂ ಗುರುದತ್​ ಗಾಣಿಗ ನಿರ್ದೇಶನದ ಕರಾವಳಿ’ ಸಿನಿಮಾ (Karavali Movie) ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ‘ಡೈನಾಮಿಕ್​ ಪ್ರಿನ್ಸ್​’ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿತ್ತು. ಅದನ್ನು ಕಂಡು ಫ್ಯಾನ್ಸ್​ ವಾವ್​ ಎಂದಿದ್ದರು. ಈಗ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ನ್ಯೂ ಇಯರ್​ ಸೆಲೆಬ್ರೇಷನ್​ ಸಂದರ್ಭದಲ್ಲಿ ಈ ಪೋಸ್ಟರ್​ ಹೊರಬಂದಿದೆ.

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಈ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ‘ಕರಾವಳಿ’ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ: ‘ಸೋನಾ ಬೇಬಿ’ ಜೊತೆ ಬಿಂದಾಸ್ ಆಗಿ ಕುಣಿದ ಪ್ರಜ್ವಲ್ ದೇವರಾಜ್

ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲೂ ‘ಕರಾವಳಿ’ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಟೀಸರ್ ವೀಕ್ಷಿಸಿದ ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇದರಿಂದಾಗಿ ಸಿನಿಮಾದ ಬೇಡಿಕೆ ಹೆಚ್ಚಾಗಿದೆ. ಪರಭಾಷೆಯಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಿ ಎಂದು ಬೇಡಿಕೆ ಬಂದಿದೆ. ಚಿತ್ರೀಕರಣ ಶುರುವಾಗುವುದಕ್ಕೂ ಮುನ್ನವೇ ಈ ರೀತಿ ಡಿಮ್ಯಾಂಟ್​ ಸೃಷ್ಟಿ ಆಗಿರುವುದು ತಂಡದ ಖುಷಿಗೆ ಕಾರಣ ಆಗಿದೆ.

ಸಚಿನ್ ಬಸ್ರೂರು ಅವರು ‘ಕರಾವಳಿ ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿಮನ್ಯು ಸದಾನಂದನ್ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ‘ಕರಾವಳಿ’ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ಟೀಸರ್ ಹಾಗೂ ಪೋಸ್ಟರ್​ಗೆ ಮೆಚ್ಚುಗೆ ಸಿಕ್ಕಿರುವುದರಿಂದ ಚಿತ್ರತಂಡದ ಜವಾಬ್ದಾರಿ ಹೆಚ್ಚಾಗಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್