AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ಈ ಸಿನಿಮಾದಲ್ಲಿ ಇರಲಿದೆ.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​
‘ಕರಾವಳಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jan 02, 2024 | 12:56 PM

Share

ಕನ್ನಡ ಚಿತ್ರರಂಗದಲ್ಲಿ ಕರಾವಳಿ ಭಾಗದ ಕಥೆಗಳು ಜನರಿಗೆ ಮೆಚ್ಚುಗೆ ಆಗುತ್ತಿವೆ. ಅದರಲ್ಲೂ ಗುರುದತ್​ ಗಾಣಿಗ ನಿರ್ದೇಶನದ ಕರಾವಳಿ’ ಸಿನಿಮಾ (Karavali Movie) ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ‘ಡೈನಾಮಿಕ್​ ಪ್ರಿನ್ಸ್​’ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿತ್ತು. ಅದನ್ನು ಕಂಡು ಫ್ಯಾನ್ಸ್​ ವಾವ್​ ಎಂದಿದ್ದರು. ಈಗ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ನ್ಯೂ ಇಯರ್​ ಸೆಲೆಬ್ರೇಷನ್​ ಸಂದರ್ಭದಲ್ಲಿ ಈ ಪೋಸ್ಟರ್​ ಹೊರಬಂದಿದೆ.

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಈ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ‘ಕರಾವಳಿ’ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ: ‘ಸೋನಾ ಬೇಬಿ’ ಜೊತೆ ಬಿಂದಾಸ್ ಆಗಿ ಕುಣಿದ ಪ್ರಜ್ವಲ್ ದೇವರಾಜ್

ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲೂ ‘ಕರಾವಳಿ’ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಟೀಸರ್ ವೀಕ್ಷಿಸಿದ ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇದರಿಂದಾಗಿ ಸಿನಿಮಾದ ಬೇಡಿಕೆ ಹೆಚ್ಚಾಗಿದೆ. ಪರಭಾಷೆಯಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಿ ಎಂದು ಬೇಡಿಕೆ ಬಂದಿದೆ. ಚಿತ್ರೀಕರಣ ಶುರುವಾಗುವುದಕ್ಕೂ ಮುನ್ನವೇ ಈ ರೀತಿ ಡಿಮ್ಯಾಂಟ್​ ಸೃಷ್ಟಿ ಆಗಿರುವುದು ತಂಡದ ಖುಷಿಗೆ ಕಾರಣ ಆಗಿದೆ.

ಸಚಿನ್ ಬಸ್ರೂರು ಅವರು ‘ಕರಾವಳಿ ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿಮನ್ಯು ಸದಾನಂದನ್ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ‘ಕರಾವಳಿ’ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ಟೀಸರ್ ಹಾಗೂ ಪೋಸ್ಟರ್​ಗೆ ಮೆಚ್ಚುಗೆ ಸಿಕ್ಕಿರುವುದರಿಂದ ಚಿತ್ರತಂಡದ ಜವಾಬ್ದಾರಿ ಹೆಚ್ಚಾಗಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್