AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ಈ ಸಿನಿಮಾದಲ್ಲಿ ಇರಲಿದೆ.

ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​
‘ಕರಾವಳಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jan 02, 2024 | 12:56 PM

Share

ಕನ್ನಡ ಚಿತ್ರರಂಗದಲ್ಲಿ ಕರಾವಳಿ ಭಾಗದ ಕಥೆಗಳು ಜನರಿಗೆ ಮೆಚ್ಚುಗೆ ಆಗುತ್ತಿವೆ. ಅದರಲ್ಲೂ ಗುರುದತ್​ ಗಾಣಿಗ ನಿರ್ದೇಶನದ ಕರಾವಳಿ’ ಸಿನಿಮಾ (Karavali Movie) ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ‘ಡೈನಾಮಿಕ್​ ಪ್ರಿನ್ಸ್​’ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿತ್ತು. ಅದನ್ನು ಕಂಡು ಫ್ಯಾನ್ಸ್​ ವಾವ್​ ಎಂದಿದ್ದರು. ಈಗ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ನ್ಯೂ ಇಯರ್​ ಸೆಲೆಬ್ರೇಷನ್​ ಸಂದರ್ಭದಲ್ಲಿ ಈ ಪೋಸ್ಟರ್​ ಹೊರಬಂದಿದೆ.

‘ಕರಾವಳಿ’ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸುವ ರೀತಿಯಲ್ಲಿ ಈ ಹೊಸ ಪೋಸ್ಟರ್​ ಮೂಡಿಬಂದಿದೆ. ಒಂದಷ್ಟು ಕಾರಣಗಳಿಂದಾಗಿ ಇದು ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಅವರು ಕೋಣದ ಮೇಲೆ ಕುಳಿತು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ‘ಕರಾವಳಿ’ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ: ‘ಸೋನಾ ಬೇಬಿ’ ಜೊತೆ ಬಿಂದಾಸ್ ಆಗಿ ಕುಣಿದ ಪ್ರಜ್ವಲ್ ದೇವರಾಜ್

ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲೂ ‘ಕರಾವಳಿ’ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಟೀಸರ್ ವೀಕ್ಷಿಸಿದ ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇದರಿಂದಾಗಿ ಸಿನಿಮಾದ ಬೇಡಿಕೆ ಹೆಚ್ಚಾಗಿದೆ. ಪರಭಾಷೆಯಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಿ ಎಂದು ಬೇಡಿಕೆ ಬಂದಿದೆ. ಚಿತ್ರೀಕರಣ ಶುರುವಾಗುವುದಕ್ಕೂ ಮುನ್ನವೇ ಈ ರೀತಿ ಡಿಮ್ಯಾಂಟ್​ ಸೃಷ್ಟಿ ಆಗಿರುವುದು ತಂಡದ ಖುಷಿಗೆ ಕಾರಣ ಆಗಿದೆ.

ಸಚಿನ್ ಬಸ್ರೂರು ಅವರು ‘ಕರಾವಳಿ ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿಮನ್ಯು ಸದಾನಂದನ್ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ‘ಕರಾವಳಿ’ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ಟೀಸರ್ ಹಾಗೂ ಪೋಸ್ಟರ್​ಗೆ ಮೆಚ್ಚುಗೆ ಸಿಕ್ಕಿರುವುದರಿಂದ ಚಿತ್ರತಂಡದ ಜವಾಬ್ದಾರಿ ಹೆಚ್ಚಾಗಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?