AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಪ್ರಜ್ವಲ್​ ದೇವರಾಜ್​ ಹೊಸ ಸಿನಿಮಾಗೆ ಪನ್ನಗ ಭರಣ ನಿರ್ದೇಶನ

ಇದೇ ಮೊದಲ ಬಾರಿಗೆ ಪ್ರಜ್ವಲ್​ ಹಾಗೂ ಪನ್ನಗ ಭರಣ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ವಿರಾಜ್‌ ಸಿಂಗ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ನಟ ಪ್ರಜ್ವಲ್​ ದೇವರಾಜ್​ ಹೊಸ ಸಿನಿಮಾಗೆ ಪನ್ನಗ ಭರಣ ನಿರ್ದೇಶನ
ಪನ್ನಗ ಭರಣ- ಪ್ರಜ್ವಲ್​ ದೇವರಾಜ್​
TV9 Web
| Edited By: |

Updated on: Jan 18, 2022 | 4:30 PM

Share

ಪ್ರಜ್ವಲ್​ ದೇವರಾಜ್​ (Prajwal Devaraj) ಅವರು ಸ್ಯಾಂಡಲ್​ವುಡ್​ನಲ್ಲಿ ಸಖತ್​ ಬ್ಯುಸಿ ಆಗಿದ್ದಾರೆ. ಒಂದರಮೇಲೆ ಒಂದರಂತೆ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಚಿತ್ರರಂಗದಲ್ಲಿ ಹೆಚ್ಚು ತೊಡಗಿಕೊಂಡಿದ್ದಾರೆ. ಈಗ ಹೊಸ ಸಿನಿಮಾಗೆ ಪ್ರಜ್ವಲ್​ ಸಹಿ ಹಾಕಿದ್ದಾರೆ. ಪನ್ನಗ ಭರಣ (Pannaga Bharana) ಅವರ ನಿರ್ದೇಶನದ ಮುಂದಿನ ಚಿತ್ರಕ್ಕೆ ಪ್ರಜ್ವಲ್​ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಶೀಘ್ರದಲ್ಲೇ ಸಿನಿಮಾದ ಶೂಟಿಂಗ್​ ಶುರುವಾಗುವ ನಿರೀಕ್ಷೆ ಇದೆ.

ಮಂಗಳವಾರ (ಜನವರಿ 18) ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆದಿದೆ. ಈ ಚಿತ್ರವನ್ನು ‘ಫಿಲ್ಮಿ ಫೆಲೋ ಸ್ಟುಡಿಯೋಸ್’ ಅರ್ಪಿಸುತ್ತಿದ್ದು, ಆಲ್ ಓಶನ್ ಮೀಡಿಯಾ ಪ್ರೈ.ಲಿಮಿಟೆಡ್ ಮತ್ತು ಮಾತ ಭಗವತಿ ಪಿಕ್ಚರ‍್ಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಪನ್ನಗ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿಬರಲಿದೆ. ಚಿತ್ರಕ್ಕೆ ಇನ್ನೂ ಶೀರ್ಷಿಕೆ ಇನ್ನೂ ಫೈನಲ್​ ಆಗಿಲ್ಲ.

ಬಾಲಿವುಡ್‌ನ ಅಧಿರ್‌ ಭಟ್ ಅವರು ಸಿನಿಮಾಗೆ ಕಥೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ಕಮರ್ಷಿಯಲ್​ ಅಂಶಗಳು ಹೆಚ್ಚಿರಲಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇದೇ ಮೊದಲ ಬಾರಿಗೆ ಪ್ರಜ್ವಲ್​ ಹಾಗೂ ಪನ್ನಗ ಭರಣ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ವಿರಾಜ್‌ ಸಿಂಗ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಪ್ರವೀಣ್‌ ಯಾದವ್ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ತಾರಾ ಬಳಗದ ಆಯ್ಕೆ ಪ್ರಗತಿಯಲ್ಲಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಘೋಷಣೆ ಆಗಲಿದೆ.

ಪ್ರಜ್ವಲ್ ದೇವರಾಜ್​ ಸದ್ಯ ಕೆಲ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಮಾಫಿಯಾ’, ‘ಗಣ’ ಚಿತ್ರದ ಶೂಟಿಂಗ್​ನಲ್ಲಿ ಅವರು ತೊಡಗಿಕೊಂಡಿದ್ದಾರೆ. ಇವುಗಳ ಕೆಲಸ ಮುಗಿದ ನಂತರ ಅವರು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ. ಪನ್ನಗ ಅವರು ನಿರ್ಮಾಣದಲ್ಲಿ ಬ್ಯುಸಿ ಆಗಿದ್ದಾರೆ. ಮೇಘನಾ ಹೊಸ ಸಿನಿಮಾವನ್ನು ಪನ್ನಗ ನಿರ್ಮಾಣ ಮಾಡುತ್ತಿದ್ದಾರೆ. ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ. ಆದರೆ ಕಾರಣಾಂತರಗಳಿಂದ ನಟನೆಯಿಂದ ದೂರ ಉಳಿಯುವ ಪರಿಸ್ಥಿತಿ ಬಂದೊದಗಿತ್ತು. ಈಗ ಅವರು ಮತ್ತೆ ಕಂಬ್ಯಾಕ್ ಮಾಡುತ್ತಿದ್ದಾರೆ. ಪನ್ನಗ ಭರಣ ನಿರ್ಮಾಣದ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಡಾನ್ಸಿಂಗ್​ ಚಾಂಪಿಯನ್​ ಶೋನಲ್ಲಿ ಚಿರು-ರಾಯನ್​ ಬಗ್ಗೆ ಮೇಘನಾ ರಾಜ್​ ಸರ್ಜಾ ಹೃದಯಸ್ಪರ್ಶಿ ಮಾತು

 ಚಿರಂಜೀವಿ ಸರ್ಜಾ ಜತೆಗಿನ ಅಪರೂಪದ ಫೋಟೋ ಹಂಚಿಕೊಂಡ ಗೆಳೆಯ ಪನ್ನಗ ಭರಣ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ