AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ಹುಟ್ಟುಹಬ್ಬದಂದೇ ಹೊರಬಿತ್ತು ‘ಮಾಫಿಯಾ’ ವಿಷಯ; ಡೈನಾಮಿಕ್​ ಪ್ರಿನ್ಸ್​ ಕೈಗೆ ಬೇಡಿ

Prajwal Devaraj Birthday: ದಕ್ಷಿಣ ಭಾರತದ ಸ್ಟಾರ್​ ನಟರು ‘ಮಾಫಿಯಾ’ ಚಿತ್ರಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಪ್ರಜ್ವಲ್ ದೇವರಾಜ್​​ಗೆ ಶುಭ ಹಾರೈಸಿದ್ದಾರೆ.

ಪ್ರಜ್ವಲ್​ ಹುಟ್ಟುಹಬ್ಬದಂದೇ ಹೊರಬಿತ್ತು ‘ಮಾಫಿಯಾ’ ವಿಷಯ; ಡೈನಾಮಿಕ್​ ಪ್ರಿನ್ಸ್​ ಕೈಗೆ ಬೇಡಿ
ಮಾಫಿಯಾ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Jul 04, 2021 | 12:12 PM

Share

‘ಡೈನಾಮಿಕ್​ ಪ್ರಿನ್ಸ್​’ ಪ್ರಜ್ವಲ್​ ದೇವರಾಜ್​ ಅವರಿಗೆ ಇಂದು (ಜು.4) ಜನ್ಮದಿನ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಈ ಖುಷಿಯನ್ನು ಹೆಚ್ಚಿಸಲು ಅವರ ಹೊಸ ಸಿನಿಮಾದ ಶೀರ್ಷಿಕೆ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಪ್ರಜ್ವಲ್​ ನಟನೆಯ 35ನೇ ಸಿನಿಮಾ ಇದಾಗಿದ್ದು, ‘ಮಾಫಿಯಾ’ ಎಂದು ಟೈಟಲ್​ ಇಡಲಾಗಿದೆ. ಈ ಚಿತ್ರಕ್ಕೆ ಗುರುದತ್​ ಗಾಣಿಗ ನಿರ್ದೇಶನ ಮಾಡಲಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ನಿರ್ಮಿಸುತ್ತಿರುವ ಈ‌ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ‘ಮಾಫಿಯಾ’ ಚಿತ್ರತಂಡದ ಜೊತೆ ಪ್ರಜ್ವಲ್​ ಅವರು ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ದಕ್ಷಿಣ ಭಾರತದ ಸ್ಟಾರ್​ ನಟರು ‘ಮಾಫಿಯಾ’ ಚಿತ್ರಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಪ್ರಜ್ವಲ್​ಗೆ ಶುಭ ಹಾರೈಸಿದ್ದಾರೆ. ವಿಜಯ್​ ಸೇತುಪತಿ, ಆರ್ಯ ಮುಂತಾದ ನಟರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ‘ಮಾಫಿಯಾ’ದ ಮೋಷನ್​ ಪೋಸ್ಟರ್ ಹಂಚಿಕೊಂಡಿದ್ದಾರೆ.

‘ಹ್ಯಾಪಿ ಬರ್ತ್​ಡೇ ಪ್ರಜ್ವಲ್​. ನೀವು ತುಂಬ ಲಕ್ಕಿ. ಯಾಕೆಂದರೆ, ನಿಮ್ಮ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್​ ಆಗಿದೆ. ಮಾಫಿಯಾ ಟೈಟಲ್​ ಕೇಳಿ ಖುಷಿ ಆಯಿತು. ನಿರ್ದೇಶಕ ಗುರುದತ್​ ಗಾಣಿಗ ಅವರಿಗೆ ಗುಡ್​ಲಕ್​. ಎಲ್ಲರಿಗೂ ಒಳ್ಳೆಯದಾಗಲಿ. ನನ್ನ ಮೂಲಕ ಇದು ಲಾಂಚ್​ ಆಗುತ್ತಿರುವುದು ಬಹಳ ಖುಷಿಯ ವಿಚಾರ’ ಎಂದು ಶಿವರಾಜ್​ಕುಮಾರ್​ ಶುಭ ಹಾರೈಸಿದ್ದಾರೆ.

(ಚಿತ್ರತಂಡಕ್ಕೆ ಶುಭ ಹಾರೈಸಿದ ಶಿವರಾಜ್​ಕುಮಾರ್​)

ಈ ಹಿಂದೆ ಅಂಬರೀಷ್​, ಕಿಚ್ಚ ಸುದೀಪ್​, ಶ್ರುತಿ ಹರಿಹರನ್​, ಸುಹಾಸಿನಿ ನಟನೆಯ ‘ಅಂಬಿ ನಿಂಗ್​ ವಯಸ್ಸಾಯ್ತೋ’ ಚಿತ್ರಕ್ಕೆ ಗುರುದತ್​ ಗಾಣಿಗ ನಿರ್ದೇಶನ ಮಾಡಿದ್ದರು. ಈಗ ಅವರು ‘ಮಾಫಿಯಾ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲು ಸಜ್ಜಾಗಿದ್ದು, ಪೋಸ್ಟರ್​ ಮೂಲಕ ನಿರೀಕ್ಷೆ ಮೂಡಿಸಿದ್ದಾರೆ. ಈ ಪೋಸ್ಟರ್​ನಲ್ಲಿ ಪ್ರಜ್ವಲ್​ ಅವರು ಪೊಲೀಸ್​ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಅವರ ಕೈಗೆ ಬೇಡಿ ತೊಡಿಸಲಾಗಿರುವುದರಿಂದ ಚಿತ್ರದ ಕಥೆ ಬಗ್ಗೆ ಕೌತುಕ ಹೆಚ್ಚುವಂತಾಗಿದೆ.

ಇದನ್ನೂ ಓದಿ:

ಗೋಲ್ಡನ್ ಸ್ಟಾರ್​ ಗಣೇಶ್​ ಜನ್ಮದಿನ; ‘ಸಖತ್​’, ‘ಗಾಳಿಪಟ 2’ ಚಿತ್ರಗಳಿಂದ ಸಿಕ್ಕ ಗಿಫ್ಟ್​ಗಳೇನು?

ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು