AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ಹುಟ್ಟುಹಬ್ಬದಂದೇ ಹೊರಬಿತ್ತು ‘ಮಾಫಿಯಾ’ ವಿಷಯ; ಡೈನಾಮಿಕ್​ ಪ್ರಿನ್ಸ್​ ಕೈಗೆ ಬೇಡಿ

Prajwal Devaraj Birthday: ದಕ್ಷಿಣ ಭಾರತದ ಸ್ಟಾರ್​ ನಟರು ‘ಮಾಫಿಯಾ’ ಚಿತ್ರಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಪ್ರಜ್ವಲ್ ದೇವರಾಜ್​​ಗೆ ಶುಭ ಹಾರೈಸಿದ್ದಾರೆ.

ಪ್ರಜ್ವಲ್​ ಹುಟ್ಟುಹಬ್ಬದಂದೇ ಹೊರಬಿತ್ತು ‘ಮಾಫಿಯಾ’ ವಿಷಯ; ಡೈನಾಮಿಕ್​ ಪ್ರಿನ್ಸ್​ ಕೈಗೆ ಬೇಡಿ
ಮಾಫಿಯಾ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Jul 04, 2021 | 12:12 PM

Share

‘ಡೈನಾಮಿಕ್​ ಪ್ರಿನ್ಸ್​’ ಪ್ರಜ್ವಲ್​ ದೇವರಾಜ್​ ಅವರಿಗೆ ಇಂದು (ಜು.4) ಜನ್ಮದಿನ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಈ ಖುಷಿಯನ್ನು ಹೆಚ್ಚಿಸಲು ಅವರ ಹೊಸ ಸಿನಿಮಾದ ಶೀರ್ಷಿಕೆ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಪ್ರಜ್ವಲ್​ ನಟನೆಯ 35ನೇ ಸಿನಿಮಾ ಇದಾಗಿದ್ದು, ‘ಮಾಫಿಯಾ’ ಎಂದು ಟೈಟಲ್​ ಇಡಲಾಗಿದೆ. ಈ ಚಿತ್ರಕ್ಕೆ ಗುರುದತ್​ ಗಾಣಿಗ ನಿರ್ದೇಶನ ಮಾಡಲಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ನಿರ್ಮಿಸುತ್ತಿರುವ ಈ‌ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ‘ಮಾಫಿಯಾ’ ಚಿತ್ರತಂಡದ ಜೊತೆ ಪ್ರಜ್ವಲ್​ ಅವರು ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ದಕ್ಷಿಣ ಭಾರತದ ಸ್ಟಾರ್​ ನಟರು ‘ಮಾಫಿಯಾ’ ಚಿತ್ರಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಪ್ರಜ್ವಲ್​ಗೆ ಶುಭ ಹಾರೈಸಿದ್ದಾರೆ. ವಿಜಯ್​ ಸೇತುಪತಿ, ಆರ್ಯ ಮುಂತಾದ ನಟರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ‘ಮಾಫಿಯಾ’ದ ಮೋಷನ್​ ಪೋಸ್ಟರ್ ಹಂಚಿಕೊಂಡಿದ್ದಾರೆ.

‘ಹ್ಯಾಪಿ ಬರ್ತ್​ಡೇ ಪ್ರಜ್ವಲ್​. ನೀವು ತುಂಬ ಲಕ್ಕಿ. ಯಾಕೆಂದರೆ, ನಿಮ್ಮ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್​ ಆಗಿದೆ. ಮಾಫಿಯಾ ಟೈಟಲ್​ ಕೇಳಿ ಖುಷಿ ಆಯಿತು. ನಿರ್ದೇಶಕ ಗುರುದತ್​ ಗಾಣಿಗ ಅವರಿಗೆ ಗುಡ್​ಲಕ್​. ಎಲ್ಲರಿಗೂ ಒಳ್ಳೆಯದಾಗಲಿ. ನನ್ನ ಮೂಲಕ ಇದು ಲಾಂಚ್​ ಆಗುತ್ತಿರುವುದು ಬಹಳ ಖುಷಿಯ ವಿಚಾರ’ ಎಂದು ಶಿವರಾಜ್​ಕುಮಾರ್​ ಶುಭ ಹಾರೈಸಿದ್ದಾರೆ.

(ಚಿತ್ರತಂಡಕ್ಕೆ ಶುಭ ಹಾರೈಸಿದ ಶಿವರಾಜ್​ಕುಮಾರ್​)

ಈ ಹಿಂದೆ ಅಂಬರೀಷ್​, ಕಿಚ್ಚ ಸುದೀಪ್​, ಶ್ರುತಿ ಹರಿಹರನ್​, ಸುಹಾಸಿನಿ ನಟನೆಯ ‘ಅಂಬಿ ನಿಂಗ್​ ವಯಸ್ಸಾಯ್ತೋ’ ಚಿತ್ರಕ್ಕೆ ಗುರುದತ್​ ಗಾಣಿಗ ನಿರ್ದೇಶನ ಮಾಡಿದ್ದರು. ಈಗ ಅವರು ‘ಮಾಫಿಯಾ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲು ಸಜ್ಜಾಗಿದ್ದು, ಪೋಸ್ಟರ್​ ಮೂಲಕ ನಿರೀಕ್ಷೆ ಮೂಡಿಸಿದ್ದಾರೆ. ಈ ಪೋಸ್ಟರ್​ನಲ್ಲಿ ಪ್ರಜ್ವಲ್​ ಅವರು ಪೊಲೀಸ್​ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಅವರ ಕೈಗೆ ಬೇಡಿ ತೊಡಿಸಲಾಗಿರುವುದರಿಂದ ಚಿತ್ರದ ಕಥೆ ಬಗ್ಗೆ ಕೌತುಕ ಹೆಚ್ಚುವಂತಾಗಿದೆ.

ಇದನ್ನೂ ಓದಿ:

ಗೋಲ್ಡನ್ ಸ್ಟಾರ್​ ಗಣೇಶ್​ ಜನ್ಮದಿನ; ‘ಸಖತ್​’, ‘ಗಾಳಿಪಟ 2’ ಚಿತ್ರಗಳಿಂದ ಸಿಕ್ಕ ಗಿಫ್ಟ್​ಗಳೇನು?

ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!