ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ

Prajwal Devaraj Birthday: ಕಳೆದ ವರ್ಷ ಪ್ರಜ್ವಲ್ ದೇವರಾಜ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆದರೆ, ಈ ವರ್ಷ ಅವರು ಬರ್ತ್​ಡೇಗೆ ಬ್ರೇಕ್ ಹಾಕಿದ್ದಾರೆ. ಆದರೆ, ಅವರ ನಟನೆಯ ಸಿನಿಮಾ ತಂಡಗಳಿಂದ ಫ್ಯಾನ್ಸ್​ಗೆ ಸಿಹಿ ಸುದ್ದಿ ಸಿಕ್ಕಿದೆ. ಅವರ ನಟನೆಯ ‘ರಾಕ್ಷಸ’ ಹಾಗೂ ‘ಕರಾವಳಿ’ ಸಿನಿಮಾಗಳ ಲುಕ್ ಬಿಡುಗಡೆ ಆಗಿದೆ.

ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ
ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ
Follow us
|

Updated on:Jul 04, 2024 | 11:31 AM

ನಟ ಪ್ರಜ್ವಲ್ ದೇವರಾಜ್ ಅವರಿಗೆ ಇಂದು (ಜುಲೈ 4) ಜನ್ಮದಿನದ ಸಂಭ್ರಮ. ಅವರು ಈ ಬಾರಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು. ಇದು ಅವರ ಫ್ಯಾನ್ಸ್​​ಗೆ ಬೇಸರ ಮೂಡಿಸಿತ್ತು. ಈಗ ಅಭಿಮಾನಿಗಳಿಗೆ ಖುಷಿ ಆಗುವಂತಹ ಸುದ್ದಿ ಸಿಕ್ಕಿದೆ. ಅವರ ನಟನೆಯ ‘ರಾಕ್ಷಸ’ ಹಾಗೂ ‘ಕರಾವಳಿ’ ಸಿನಿಮಾಗಳ ಲುಕ್ ಬಿಡುಗಡೆ ಆಗಿದೆ. ಎರಡೂ ಪೋಸ್ಟರ್​ಗಳು ಭಿನ್ನವಾಗಿದ್ದು, ಗಮನ ಸೆಳೆಯುತ್ತಿದೆ.

‘ರಾಕ್ಷಸ’ ಲುಕ್

‘ರಾಕ್ಷಸ’ ಸಿನಿಮಾ ಲುಕ್ ಸಖತ್ ಭಿನ್ನವಾಗಿದೆ. ಇಡೀ ಪೋಸ್ಟರ್​ನಲ್ಲಿ ಪ್ರಜ್ವಲ್ ಅವರ ಕಣ್ಣು ಗಮನ ಸೆಳೆದಿದೆ. ಅವರು ಕುರುಡನ ರೀತಿ ಕಾಣಿಸಿಕೊಂಡಿದ್ದಾರೆ. ಹಿಂಭಾಗದಲ್ಲಿ ರೋಮನ್ ಅಂಕೆಯಲ್ಲಿ ಬರೆದ ಗಡಿಯಾರ ಇದೆ. ಗಡಿಯಾರದ ಗಾಜುಗಳು ಪುಡಿಪುಡಿ ಆಗಿವೆ. ‘ಮಮ್ಮಿ’ ಖ್ಯಾತಿಯ ನಿರ್ದೇಶಕ ಲೋಹಿತ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಹೆಸರಿಗೆ ತಕ್ಕಂತೆಯೇ ಪೋಸ್ಟರ್ ಮೂಡಿ ಬಂದಿದೆ. ಈ ಪೋಸ್ಟರ್​ನಲ್ಲಿ ಪ್ರಜ್ವಲ್ ಅವರು ರಾಕ್ಷಸನ ರೀತಿಯೇ ಕಾಣಿಸಿಕೊಂಡಿದ್ದಾರೆ.

ಕರಾವಳಿ ಲುಕ್

‘ಕರಾವಳಿ’ ಸಿನಿಮಾದ ಲುಕ್ ಕೂಡ ಬಿಡುಗಡೆ ಆಗಿದೆ. ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರಕ್ಕೆ ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಪ್ರಯುಕ್ತ ಬಂದಿರುವ ಈ ಪೋಸ್ಟರ್ ‘ಕರಾವಳಿ’ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕೋಣಗಳ ಮಧ್ಯೆ ಪ್ರಜ್ವಲ್ ಕುಳಿತಿದ್ದಾರೆ. ಈ ಸಿನಿಮಾ ಕರಾವಳಿಯ ಕಥೆಯನ್ನು ಹೇಳಲಿದೆ. ಕಂಬಳದ ವಿಚಾರ ಸಿನಿಮಾದಲ್ಲಿ ಇರಲಿದೆಯೇ ಎನ್ನುವ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: ಶಿವಣ್ಣನ ಸಿನಿಮಾದ ಹೆಸರು ಎರವಲು ಪಡೆದ ಪ್ರಜ್ವಲ್ ದೇವರಾಜ್

‘ಕರಾವಳಿ’ ಚಿತ್ರಕ್ಕೆ ಈಗಾಗಲೇ 60ರಷ್ಟು ಶೂಟಿಂಗ್ ಮುಗಿದಿದೆ. ಸಿನಿಮಾದಲ್ಲಿ ಪ್ರಜ್ವಲ್​ಗೆ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಬಹುತೇಕ ಶೂಟಿಂಗ್ ಕರಾವಳಿಯ ಸುತ್ತಮುತ್ತವೇ ನಡೆದಿದೆ. ಪಕ್ಕಾ ಹಳ್ಳಿ ಹಿನ್ನೆಲೆಯಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:31 am, Thu, 4 July 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್