AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ

Prajwal Devaraj Birthday: ಕಳೆದ ವರ್ಷ ಪ್ರಜ್ವಲ್ ದೇವರಾಜ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆದರೆ, ಈ ವರ್ಷ ಅವರು ಬರ್ತ್​ಡೇಗೆ ಬ್ರೇಕ್ ಹಾಕಿದ್ದಾರೆ. ಆದರೆ, ಅವರ ನಟನೆಯ ಸಿನಿಮಾ ತಂಡಗಳಿಂದ ಫ್ಯಾನ್ಸ್​ಗೆ ಸಿಹಿ ಸುದ್ದಿ ಸಿಕ್ಕಿದೆ. ಅವರ ನಟನೆಯ ‘ರಾಕ್ಷಸ’ ಹಾಗೂ ‘ಕರಾವಳಿ’ ಸಿನಿಮಾಗಳ ಲುಕ್ ಬಿಡುಗಡೆ ಆಗಿದೆ.

ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ
ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ
ರಾಜೇಶ್ ದುಗ್ಗುಮನೆ
|

Updated on:Jul 04, 2024 | 11:31 AM

Share

ನಟ ಪ್ರಜ್ವಲ್ ದೇವರಾಜ್ ಅವರಿಗೆ ಇಂದು (ಜುಲೈ 4) ಜನ್ಮದಿನದ ಸಂಭ್ರಮ. ಅವರು ಈ ಬಾರಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು. ಇದು ಅವರ ಫ್ಯಾನ್ಸ್​​ಗೆ ಬೇಸರ ಮೂಡಿಸಿತ್ತು. ಈಗ ಅಭಿಮಾನಿಗಳಿಗೆ ಖುಷಿ ಆಗುವಂತಹ ಸುದ್ದಿ ಸಿಕ್ಕಿದೆ. ಅವರ ನಟನೆಯ ‘ರಾಕ್ಷಸ’ ಹಾಗೂ ‘ಕರಾವಳಿ’ ಸಿನಿಮಾಗಳ ಲುಕ್ ಬಿಡುಗಡೆ ಆಗಿದೆ. ಎರಡೂ ಪೋಸ್ಟರ್​ಗಳು ಭಿನ್ನವಾಗಿದ್ದು, ಗಮನ ಸೆಳೆಯುತ್ತಿದೆ.

‘ರಾಕ್ಷಸ’ ಲುಕ್

‘ರಾಕ್ಷಸ’ ಸಿನಿಮಾ ಲುಕ್ ಸಖತ್ ಭಿನ್ನವಾಗಿದೆ. ಇಡೀ ಪೋಸ್ಟರ್​ನಲ್ಲಿ ಪ್ರಜ್ವಲ್ ಅವರ ಕಣ್ಣು ಗಮನ ಸೆಳೆದಿದೆ. ಅವರು ಕುರುಡನ ರೀತಿ ಕಾಣಿಸಿಕೊಂಡಿದ್ದಾರೆ. ಹಿಂಭಾಗದಲ್ಲಿ ರೋಮನ್ ಅಂಕೆಯಲ್ಲಿ ಬರೆದ ಗಡಿಯಾರ ಇದೆ. ಗಡಿಯಾರದ ಗಾಜುಗಳು ಪುಡಿಪುಡಿ ಆಗಿವೆ. ‘ಮಮ್ಮಿ’ ಖ್ಯಾತಿಯ ನಿರ್ದೇಶಕ ಲೋಹಿತ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಹೆಸರಿಗೆ ತಕ್ಕಂತೆಯೇ ಪೋಸ್ಟರ್ ಮೂಡಿ ಬಂದಿದೆ. ಈ ಪೋಸ್ಟರ್​ನಲ್ಲಿ ಪ್ರಜ್ವಲ್ ಅವರು ರಾಕ್ಷಸನ ರೀತಿಯೇ ಕಾಣಿಸಿಕೊಂಡಿದ್ದಾರೆ.

ಕರಾವಳಿ ಲುಕ್

‘ಕರಾವಳಿ’ ಸಿನಿಮಾದ ಲುಕ್ ಕೂಡ ಬಿಡುಗಡೆ ಆಗಿದೆ. ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರಕ್ಕೆ ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಪ್ರಯುಕ್ತ ಬಂದಿರುವ ಈ ಪೋಸ್ಟರ್ ‘ಕರಾವಳಿ’ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕೋಣಗಳ ಮಧ್ಯೆ ಪ್ರಜ್ವಲ್ ಕುಳಿತಿದ್ದಾರೆ. ಈ ಸಿನಿಮಾ ಕರಾವಳಿಯ ಕಥೆಯನ್ನು ಹೇಳಲಿದೆ. ಕಂಬಳದ ವಿಚಾರ ಸಿನಿಮಾದಲ್ಲಿ ಇರಲಿದೆಯೇ ಎನ್ನುವ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: ಶಿವಣ್ಣನ ಸಿನಿಮಾದ ಹೆಸರು ಎರವಲು ಪಡೆದ ಪ್ರಜ್ವಲ್ ದೇವರಾಜ್

‘ಕರಾವಳಿ’ ಚಿತ್ರಕ್ಕೆ ಈಗಾಗಲೇ 60ರಷ್ಟು ಶೂಟಿಂಗ್ ಮುಗಿದಿದೆ. ಸಿನಿಮಾದಲ್ಲಿ ಪ್ರಜ್ವಲ್​ಗೆ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಬಹುತೇಕ ಶೂಟಿಂಗ್ ಕರಾವಳಿಯ ಸುತ್ತಮುತ್ತವೇ ನಡೆದಿದೆ. ಪಕ್ಕಾ ಹಳ್ಳಿ ಹಿನ್ನೆಲೆಯಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:31 am, Thu, 4 July 24

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ