AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ದೇವರಾಜ್​ ಹೊಸ ಸಿನಿಮಾಗೆ ‘ಕರಾವಳಿ’ ಶೀರ್ಷಿಕೆ; ಟೀಸರ್​ ನೋಡಿ ವಾವ್​ ಎಂದ ಸಿನಿಪ್ರಿಯರು

ಕಥೆಯ ಎಳೆಯ ಬಗ್ಗೆ ಕೌತುಕ ಮೂಡುವ ರೀತಿಯಲ್ಲಿ ‘ಕರಾವಳಿ’ ಟೀಸರ್​ ಮೂಡಿಬಂದಿದೆ. ಕೋಣದ ಮೇಲೆ ಕುಳಿತಿರುವ ಪ್ರಜ್ವಲ್​ ದೇವರಾಜ್​ ಅವರ ಫಸ್ಟ್​ ಲುಕ್​ ಗಮನ ಸೆಳೆಯುತ್ತಿದೆ. ಗುರುದತ್ತ್ ಗಾಣಿಗ ನಿರ್ದೇಶನದ ಈ ಸಿನಿಮಾಗೆ ಶೀಘ್ರದಲ್ಲೇ ಚಿತ್ರೀಕರಣ ಆರಂಭ ಆಗಲಿದೆ.

ಪ್ರಜ್ವಲ್​ ದೇವರಾಜ್​ ಹೊಸ ಸಿನಿಮಾಗೆ ‘ಕರಾವಳಿ’ ಶೀರ್ಷಿಕೆ; ಟೀಸರ್​ ನೋಡಿ ವಾವ್​ ಎಂದ ಸಿನಿಪ್ರಿಯರು
ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Dec 10, 2023 | 2:18 PM

Share

ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಹಾಗೂ ನಿರ್ದೇಶಕ ಗುರುದತ್​ ಗಾಣಿಗ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದ ಶೀರ್ಷಿಕೆ ಅನಾವರಣ ಮಾಡಲಾಗಿದೆ. ರೋಚಕವಾದ ಟೀಸರ್​ ಮೂಲಕ ಟೈಟಲ್​ ಏನು ಎಂಬುದನ್ನು ಘೋಷಿಸಲಾಗಿದೆ. ಈ ಸಿನಿಮಾಗೆ ‘ಕರಾವಳಿ’ (Karavali) ಎಂದು ಹೆಸರು ಇಡಲಾಗಿದೆ. ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ಕರಾವಳಿಯ ಸಂಸ್ಕೃತಿಯನ್ನು ತೋರಿಸಲಾಗುತ್ತದೆ. ಕಂಬಳದ ಕಹಾನಿ ಇದರಲ್ಲಿ ಇರಲಿದೆ. ಅದಕ್ಕೆ ಸಾಕ್ಷಿ ಒದಗಿಸುವಂತೆ ಈ ಟೀಸರ್​ (Karavali Teaser) ಮೂಡಿಬಂದಿದೆ. ಪ್ರಜ್ವಲ್​ ದೇವರಾಜ್​ ಅವರ ಅಭಿಮಾನಿಗಳಿಂದ ಈ ಟೀಸರ್​ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಕರಾವಳಿ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್ ಅನ್ನು ಮಂಗಳೂರಿನಲ್ಲಿ ಗ್ರ್ಯಾಂಡ್​ ಆಗಿ ಲಾಂಚ್ ಮಾಡಲಾಗಿದೆ. ಈ ಸಿನಿಮಾದಲ್ಲಿ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಮತ್ತು ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾದ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಅವರ ಕಾಂಬಿನೇಷನ್​ ಇರಲಿದೆ ಎಂಬ ಕಾರಣಕ್ಕೆ ಪ್ರೇಕ್ಷಕರಿಗೆ ನಿರೀಕ್ಷೆ ಮೂಡಿದೆ. ಗುರುದತ್ ಅವರ ನಿರ್ದೇಶನದ 2ನೇ ಸಿನಿಮಾ ಇದಾಗಿದ್ದು, ಟೀಸರ್​ ಮೂಲಕ ಅವರು ಭರವಸೆ ಮೂಡಿಸಿದ್ದಾರೆ. ಕರಾವಳಿ ಭಾಗದ ಸಂಸ್ಕೃತಿ, ಯಕ್ಷಗಾನ, ದೈವ, ಕಂಬಳ ಮುಂತಾದ ಅಂಶಗಳು ಈ ಸಿನಿಮಾದಲ್ಲಿ ಇರಲಿವೆ.

ಕಥೆಯ ಎಳೆಯ ಬಗ್ಗೆ ಕೌತುಕ ಮೂಡುವ ರೀತಿಯಲ್ಲಿ ‘ಕರಾವಳಿ’ ಟೀಸರ್​ ಮೂಡಿಬಂದಿದೆ. ಈ ಟೀಸರ್ ಗಮನಿಸಿದರೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಕಥೆ ಇದರಲ್ಲಿ ಇರಬಹುದೇ ಎಂಬ ಕೌತುಕ ಸೃಷ್ಟಿಯಾಗುವಂತಿದೆ. ಹಿನ್ನೆಲೆಯಲ್ಲಿ ಕೇಳಿಸುವ ಯಕ್ಷಗಾನದ ಧ್ವನಿಯಿಂದ ಟೀಸರ್‌ನ ರೋಚಕತೆ ಹೆಚ್ಚಾಗಿದೆ. ಕೋಣದ ಮೇಲೆ ಕುಳಿತು ಪ್ರಜ್ವಲ್​ ದೇವರಾಜ್​ ಎಂಟ್ರಿ ನೀಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: Prajwal Devaraj: ಪ್ಯಾನ್​ ಇಂಡಿಯಾ ಸಿನಿಮಾ ಮಾಡಲು ಹೊರಟ ಪ್ರಜ್ವಲ್​ ದೇವರಾಜ್​; ಈ ಚಿತ್ರದ ಹೆಸರು ‘ಜಾತರೆ’

ಮಂಗಳೂರಿನಲ್ಲಿ ‘ಕರಾವಳಿ’ ಸಿನಿಮಾಗೆ ಚಿತ್ರೀಕರಣ ನಡೆಯಲಿದೆ. ಶೀಘ್ರದಲ್ಲೇ ಶೂಟಿಂಗ್​ ಆರಂಭ ಆಗಲಿದೆ. ಸಚಿನ್ ಬಸ್ರೂರು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ಅವರು ತಮ್ಮ ವೃತ್ತಿಜೀವನದಲ್ಲಿ ಈವರೆಗೂ ಮಾಡಿರದಂತಹ ಪಾತ್ರ ಈ ಸಿನಿಮಾದಲ್ಲಿ ಇರಲಿದೆ. ಇದು ಅವರ 40ನೇ ಸಿನಿಮಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್