AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ದೇವರಾಜ್​ ಹೊಸ ಸಿನಿಮಾಗೆ ‘ಕರಾವಳಿ’ ಶೀರ್ಷಿಕೆ; ಟೀಸರ್​ ನೋಡಿ ವಾವ್​ ಎಂದ ಸಿನಿಪ್ರಿಯರು

ಕಥೆಯ ಎಳೆಯ ಬಗ್ಗೆ ಕೌತುಕ ಮೂಡುವ ರೀತಿಯಲ್ಲಿ ‘ಕರಾವಳಿ’ ಟೀಸರ್​ ಮೂಡಿಬಂದಿದೆ. ಕೋಣದ ಮೇಲೆ ಕುಳಿತಿರುವ ಪ್ರಜ್ವಲ್​ ದೇವರಾಜ್​ ಅವರ ಫಸ್ಟ್​ ಲುಕ್​ ಗಮನ ಸೆಳೆಯುತ್ತಿದೆ. ಗುರುದತ್ತ್ ಗಾಣಿಗ ನಿರ್ದೇಶನದ ಈ ಸಿನಿಮಾಗೆ ಶೀಘ್ರದಲ್ಲೇ ಚಿತ್ರೀಕರಣ ಆರಂಭ ಆಗಲಿದೆ.

ಪ್ರಜ್ವಲ್​ ದೇವರಾಜ್​ ಹೊಸ ಸಿನಿಮಾಗೆ ‘ಕರಾವಳಿ’ ಶೀರ್ಷಿಕೆ; ಟೀಸರ್​ ನೋಡಿ ವಾವ್​ ಎಂದ ಸಿನಿಪ್ರಿಯರು
ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Dec 10, 2023 | 2:18 PM

Share

ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಹಾಗೂ ನಿರ್ದೇಶಕ ಗುರುದತ್​ ಗಾಣಿಗ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದ ಶೀರ್ಷಿಕೆ ಅನಾವರಣ ಮಾಡಲಾಗಿದೆ. ರೋಚಕವಾದ ಟೀಸರ್​ ಮೂಲಕ ಟೈಟಲ್​ ಏನು ಎಂಬುದನ್ನು ಘೋಷಿಸಲಾಗಿದೆ. ಈ ಸಿನಿಮಾಗೆ ‘ಕರಾವಳಿ’ (Karavali) ಎಂದು ಹೆಸರು ಇಡಲಾಗಿದೆ. ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ಕರಾವಳಿಯ ಸಂಸ್ಕೃತಿಯನ್ನು ತೋರಿಸಲಾಗುತ್ತದೆ. ಕಂಬಳದ ಕಹಾನಿ ಇದರಲ್ಲಿ ಇರಲಿದೆ. ಅದಕ್ಕೆ ಸಾಕ್ಷಿ ಒದಗಿಸುವಂತೆ ಈ ಟೀಸರ್​ (Karavali Teaser) ಮೂಡಿಬಂದಿದೆ. ಪ್ರಜ್ವಲ್​ ದೇವರಾಜ್​ ಅವರ ಅಭಿಮಾನಿಗಳಿಂದ ಈ ಟೀಸರ್​ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಕರಾವಳಿ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್ ಅನ್ನು ಮಂಗಳೂರಿನಲ್ಲಿ ಗ್ರ್ಯಾಂಡ್​ ಆಗಿ ಲಾಂಚ್ ಮಾಡಲಾಗಿದೆ. ಈ ಸಿನಿಮಾದಲ್ಲಿ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಮತ್ತು ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾದ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಅವರ ಕಾಂಬಿನೇಷನ್​ ಇರಲಿದೆ ಎಂಬ ಕಾರಣಕ್ಕೆ ಪ್ರೇಕ್ಷಕರಿಗೆ ನಿರೀಕ್ಷೆ ಮೂಡಿದೆ. ಗುರುದತ್ ಅವರ ನಿರ್ದೇಶನದ 2ನೇ ಸಿನಿಮಾ ಇದಾಗಿದ್ದು, ಟೀಸರ್​ ಮೂಲಕ ಅವರು ಭರವಸೆ ಮೂಡಿಸಿದ್ದಾರೆ. ಕರಾವಳಿ ಭಾಗದ ಸಂಸ್ಕೃತಿ, ಯಕ್ಷಗಾನ, ದೈವ, ಕಂಬಳ ಮುಂತಾದ ಅಂಶಗಳು ಈ ಸಿನಿಮಾದಲ್ಲಿ ಇರಲಿವೆ.

ಕಥೆಯ ಎಳೆಯ ಬಗ್ಗೆ ಕೌತುಕ ಮೂಡುವ ರೀತಿಯಲ್ಲಿ ‘ಕರಾವಳಿ’ ಟೀಸರ್​ ಮೂಡಿಬಂದಿದೆ. ಈ ಟೀಸರ್ ಗಮನಿಸಿದರೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಕಥೆ ಇದರಲ್ಲಿ ಇರಬಹುದೇ ಎಂಬ ಕೌತುಕ ಸೃಷ್ಟಿಯಾಗುವಂತಿದೆ. ಹಿನ್ನೆಲೆಯಲ್ಲಿ ಕೇಳಿಸುವ ಯಕ್ಷಗಾನದ ಧ್ವನಿಯಿಂದ ಟೀಸರ್‌ನ ರೋಚಕತೆ ಹೆಚ್ಚಾಗಿದೆ. ಕೋಣದ ಮೇಲೆ ಕುಳಿತು ಪ್ರಜ್ವಲ್​ ದೇವರಾಜ್​ ಎಂಟ್ರಿ ನೀಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: Prajwal Devaraj: ಪ್ಯಾನ್​ ಇಂಡಿಯಾ ಸಿನಿಮಾ ಮಾಡಲು ಹೊರಟ ಪ್ರಜ್ವಲ್​ ದೇವರಾಜ್​; ಈ ಚಿತ್ರದ ಹೆಸರು ‘ಜಾತರೆ’

ಮಂಗಳೂರಿನಲ್ಲಿ ‘ಕರಾವಳಿ’ ಸಿನಿಮಾಗೆ ಚಿತ್ರೀಕರಣ ನಡೆಯಲಿದೆ. ಶೀಘ್ರದಲ್ಲೇ ಶೂಟಿಂಗ್​ ಆರಂಭ ಆಗಲಿದೆ. ಸಚಿನ್ ಬಸ್ರೂರು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ಅವರು ತಮ್ಮ ವೃತ್ತಿಜೀವನದಲ್ಲಿ ಈವರೆಗೂ ಮಾಡಿರದಂತಹ ಪಾತ್ರ ಈ ಸಿನಿಮಾದಲ್ಲಿ ಇರಲಿದೆ. ಇದು ಅವರ 40ನೇ ಸಿನಿಮಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?