AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veeram Movie: ರಿಲೀಸ್​ ಬಗ್ಗೆ ಅಪ್​ಡೇಟ್​ ನೀಡಿದ ‘ವೀರಂ’ ತಂಡ; ಹೆಚ್ಚಿತು ಪ್ರಜ್ವಲ್​ ದೇವರಾಜ್​ ಅಭಿಮಾನಿಗಳ ನಿರೀಕ್ಷೆ

Prajwal Devaraj | Veeram Kannada Movie: ‘ವೀರಂ’ ಚಿತ್ರದ ಮೂಲಕ ಪ್ರಜ್ವಲ್​ ದೇವರಾಜ್​ ಅವರು ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳು ಈ ಚಿತ್ರದಲ್ಲಿ ಇವೆ.

Veeram Movie: ರಿಲೀಸ್​ ಬಗ್ಗೆ ಅಪ್​ಡೇಟ್​ ನೀಡಿದ ‘ವೀರಂ’ ತಂಡ; ಹೆಚ್ಚಿತು ಪ್ರಜ್ವಲ್​ ದೇವರಾಜ್​ ಅಭಿಮಾನಿಗಳ ನಿರೀಕ್ಷೆ
ಪ್ರಜ್ವಲ್ ದೇವರಾಜ್
ಮದನ್​ ಕುಮಾರ್​
|

Updated on:Feb 10, 2023 | 7:14 PM

Share

ಕನ್ನಡ ಚಿತ್ರರಂಗದಲ್ಲಿ ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಅವರು ಆ್ಯಕ್ಟೀವ್ ಆಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತ, ಅಭಿಮಾನಿಗಳನ್ನು ರಂಜಿಸಲು ಅವರು ಫುಲ್​ಟೈಮ್​ ಸಿದ್ಧವಾಗಿರುತ್ತಾರೆ. ಆದರೆ ಕಾರಣಾಂತರಗಳಿಂದ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳದೇ ಬಹಳ ತಿಂಗಳು ಕಳೆದಿದೆ. 2022ರಲ್ಲಿ ಅವರ ಯಾವ ಚಿತ್ರಗಳೂ (Prajwal Devaraj Movies) ತೆರೆಕಾಣಲಿಲ್ಲ. ಪ್ರಜ್ವಲ್​ ದೇವರಾಜ್​ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಕಾದಿರುವ ಅಭಿಮಾನಿಗಳಿಗೆ ಈಗ ಗುಡ್​ ನ್ಯೂಸ್​ ಸಿಕ್ಕಿದೆ. ಅವರು ನಟಿಸಿರುವ ‘ವೀರಂ’ ಸಿನಿಮಾದ (Veeram Kannada Movie) ಬಿಡುಗಡೆ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಏಪ್ರಿಲ್​ ತಿಂಗಳಲ್ಲಿ ಸಿನಿಮಾವನ್ನು ರಿಲೀಸ್​ ಮಾಡುವುದಾಗಿ ತಂಡ ಮಾಹಿತಿ ನೀಡಿದೆ. ಪಕ್ಕಾ ಡೇಟ್​ ಕೂಡ ಶೀಘ್ರದಲ್ಲೇ ಅನೌನ್ಸ್​ ಆಗಲಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ‘ವೀರಂ’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಕೊವಿಡ್​ ಮುಂತಾದ ಕಾರಣಗಳಿಂದಾಗಿ ರಿಲೀಸ್​ ದಿನಾಂಕ ಮುಂದೂಡುವುದು ಅನಿವಾರ್ಯ ಆಯಿತು. ಈಗ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡಿರುವ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ರಿಲೀಸ್​ ಮಾಡಲು ಸಕಲ ರೀತಿಯಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ
Image
ಪ್ರಜ್ವಲ್​ ದೇವರಾಜ್​-ಪ್ರಿಯಾಂಕಾ ತಿಮ್ಮೇಶ್​ ಅಭಿನಯದ ‘ಅರ್ಜುನ್​ ಗೌಡ’ ಸಿನಿಮಾ ಹೇಗಿದೆ?
Image
‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​
Image
ಪ್ರಜ್ವಲ್​ ದೇವರಾಜ್ ​- ರಾಗಿಣಿ ಚಂದ್ರನ್​ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಮದುವೆ ವಿಡಿಯೋ ವೈರಲ್​
Image
ಪ್ರಜ್ವಲ್​ ಹುಟ್ಟುಹಬ್ಬದಂದೇ ಹೊರಬಿತ್ತು ‘ಮಾಫಿಯಾ’ ವಿಷಯ; ಡೈನಾಮಿಕ್​ ಪ್ರಿನ್ಸ್​ ಕೈಗೆ ಬೇಡಿ

ಇದನ್ನೂ ಓದಿ: ಮೇಘನಾ ರಾಜ್​ ಕಮ್​ಬ್ಯಾಕ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​; ಅಭಿಮಾನಿಗಳು ಫುಲ್​ ಖುಷ್​

ಪ್ರಜ್ವಲ್​ ದೇವರಾಜ್​ ಅವರು ಈವರೆಗೂ ಲವರ್​ ಬಾಯ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದು ಹೆಚ್ಚು. ಪೊಲೀಸ್​ ಪಾತ್ರ ಮಾಡಿ ರಂಜಿಸಿದ್ದೂ ಉಂಟು. ಆದರೆ ‘ವೀರಂ’ ಸಿನಿಮಾದಲ್ಲಿ ಅವರ ಗೆಟಪ್​ ಸಂಪೂರ್ಣ ಬದಲಾಗಿದೆ. ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಅವರು ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳೂ ಈ ಸಿನಿಮಾದಲ್ಲಿ ಇವೆ. ಈ ಎಲ್ಲ ಕಾರಣಗಳಿಂದಾಗಿ ‘ವೀರಂ’ ಚಿತ್ರ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಟೈಮ್​ ಲೂಪ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​; ‘ಮಮ್ಮಿ’ ಖ್ಯಾತಿಯ ಲೋಹಿತ್​ ನಿರ್ದೇಶನ

ಈ ಸಿನಿಮಾದ ಪಾತ್ರವರ್ಗ ಕೂಡ ಗಮನ ಸೆಳೆಯುವಂತಿದೆ. ಪ್ರಜ್ವಲ್​ ದೇವರಾಜ್​, ಶ್ರುತಿ, ಶ್ರೀನಗರ ಕಿಟ್ಟಿ, ಶಿಷ್ಯ ದೀಪಕ್​, ರಚಿತಾ ರಾಮ್​ ಮುಂತಾದವರು ನಟಿಸಿದ್ದಾರೆ. ತುಂಬ ಅದ್ದೂರಿಯಾದಂತಹ ಮೇಕಿಂಗ್​ ಈ ಸಿನಿಮಾದಲ್ಲಿದೆ ಎಂಬುದಕ್ಕೆ ಈ ಹಿಂದೆ ಬಿಡುಗಡೆಯಾದ ಟೀಸರ್​ನಲ್ಲಿ ಸುಳಿವು ಸಿಕ್ಕಿತ್ತು. ನುರಿತ ತಂತ್ರಜ್ಞರು ‘ವೀರಂ’ ತೆರೆಹಿಂದೆ ಕೆಲಸ ಮಾಡಿದ್ದಾರೆ.

ಈ ಚಿತ್ರಕ್ಕೆ ಶಶಿಧರ್​ ಕೆ.ಎಂ. ಬಂಡವಾಳ ಹೂಡಿದ್ದಾರೆ. ಕುಮಾರ್​ ರಾಜ್​ (ಖದರ್​ ಕುಮಾರ್​) ನಿರ್ದೇಶನ ಮಾಡಿದ್ದಾರೆ. ಲವಿತ್​ ಛಾಯಾಗ್ರಹಣ, ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ, ರವಿಚಂದ್ರನ್​ ಸಂಕಲನ, ಡಿಫರೆಂಡ್​ ಡ್ಯಾನಿ ಸಾಹಸ ನಿರ್ದೇಶನ ‘ವೀರಂ’ ಚಿತ್ರಕ್ಕಿದೆ. ಈ ಸಿನಿಮಾದಲ್ಲಿ ವಿಷ್ಣುವರ್ಧನ್​ ಅಭಿಮಾನಿಯಾಗಿ ಪ್ರಜ್ವಲ್​ ದೇವರಾಜ್​ ಕಾಣಿಸಿಕೊಳ್ಳಲಿದ್ದಾರೆ. ಹೀರೋ ಕೈ ಮೇಲೆ ಇರುವ ವಿಷ್ಣು ದಾದಾ ಟ್ಯಾಟೂ ಸಖತ್ ಹೈಲೈಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:14 pm, Fri, 10 February 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!