AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veeram Movie: ರಿಲೀಸ್​ ಬಗ್ಗೆ ಅಪ್​ಡೇಟ್​ ನೀಡಿದ ‘ವೀರಂ’ ತಂಡ; ಹೆಚ್ಚಿತು ಪ್ರಜ್ವಲ್​ ದೇವರಾಜ್​ ಅಭಿಮಾನಿಗಳ ನಿರೀಕ್ಷೆ

Prajwal Devaraj | Veeram Kannada Movie: ‘ವೀರಂ’ ಚಿತ್ರದ ಮೂಲಕ ಪ್ರಜ್ವಲ್​ ದೇವರಾಜ್​ ಅವರು ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳು ಈ ಚಿತ್ರದಲ್ಲಿ ಇವೆ.

Veeram Movie: ರಿಲೀಸ್​ ಬಗ್ಗೆ ಅಪ್​ಡೇಟ್​ ನೀಡಿದ ‘ವೀರಂ’ ತಂಡ; ಹೆಚ್ಚಿತು ಪ್ರಜ್ವಲ್​ ದೇವರಾಜ್​ ಅಭಿಮಾನಿಗಳ ನಿರೀಕ್ಷೆ
ಪ್ರಜ್ವಲ್ ದೇವರಾಜ್
ಮದನ್​ ಕುಮಾರ್​
|

Updated on:Feb 10, 2023 | 7:14 PM

Share

ಕನ್ನಡ ಚಿತ್ರರಂಗದಲ್ಲಿ ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಅವರು ಆ್ಯಕ್ಟೀವ್ ಆಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತ, ಅಭಿಮಾನಿಗಳನ್ನು ರಂಜಿಸಲು ಅವರು ಫುಲ್​ಟೈಮ್​ ಸಿದ್ಧವಾಗಿರುತ್ತಾರೆ. ಆದರೆ ಕಾರಣಾಂತರಗಳಿಂದ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳದೇ ಬಹಳ ತಿಂಗಳು ಕಳೆದಿದೆ. 2022ರಲ್ಲಿ ಅವರ ಯಾವ ಚಿತ್ರಗಳೂ (Prajwal Devaraj Movies) ತೆರೆಕಾಣಲಿಲ್ಲ. ಪ್ರಜ್ವಲ್​ ದೇವರಾಜ್​ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಕಾದಿರುವ ಅಭಿಮಾನಿಗಳಿಗೆ ಈಗ ಗುಡ್​ ನ್ಯೂಸ್​ ಸಿಕ್ಕಿದೆ. ಅವರು ನಟಿಸಿರುವ ‘ವೀರಂ’ ಸಿನಿಮಾದ (Veeram Kannada Movie) ಬಿಡುಗಡೆ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಏಪ್ರಿಲ್​ ತಿಂಗಳಲ್ಲಿ ಸಿನಿಮಾವನ್ನು ರಿಲೀಸ್​ ಮಾಡುವುದಾಗಿ ತಂಡ ಮಾಹಿತಿ ನೀಡಿದೆ. ಪಕ್ಕಾ ಡೇಟ್​ ಕೂಡ ಶೀಘ್ರದಲ್ಲೇ ಅನೌನ್ಸ್​ ಆಗಲಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ‘ವೀರಂ’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಕೊವಿಡ್​ ಮುಂತಾದ ಕಾರಣಗಳಿಂದಾಗಿ ರಿಲೀಸ್​ ದಿನಾಂಕ ಮುಂದೂಡುವುದು ಅನಿವಾರ್ಯ ಆಯಿತು. ಈಗ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡಿರುವ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ರಿಲೀಸ್​ ಮಾಡಲು ಸಕಲ ರೀತಿಯಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ
Image
ಪ್ರಜ್ವಲ್​ ದೇವರಾಜ್​-ಪ್ರಿಯಾಂಕಾ ತಿಮ್ಮೇಶ್​ ಅಭಿನಯದ ‘ಅರ್ಜುನ್​ ಗೌಡ’ ಸಿನಿಮಾ ಹೇಗಿದೆ?
Image
‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​
Image
ಪ್ರಜ್ವಲ್​ ದೇವರಾಜ್ ​- ರಾಗಿಣಿ ಚಂದ್ರನ್​ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಮದುವೆ ವಿಡಿಯೋ ವೈರಲ್​
Image
ಪ್ರಜ್ವಲ್​ ಹುಟ್ಟುಹಬ್ಬದಂದೇ ಹೊರಬಿತ್ತು ‘ಮಾಫಿಯಾ’ ವಿಷಯ; ಡೈನಾಮಿಕ್​ ಪ್ರಿನ್ಸ್​ ಕೈಗೆ ಬೇಡಿ

ಇದನ್ನೂ ಓದಿ: ಮೇಘನಾ ರಾಜ್​ ಕಮ್​ಬ್ಯಾಕ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​; ಅಭಿಮಾನಿಗಳು ಫುಲ್​ ಖುಷ್​

ಪ್ರಜ್ವಲ್​ ದೇವರಾಜ್​ ಅವರು ಈವರೆಗೂ ಲವರ್​ ಬಾಯ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದು ಹೆಚ್ಚು. ಪೊಲೀಸ್​ ಪಾತ್ರ ಮಾಡಿ ರಂಜಿಸಿದ್ದೂ ಉಂಟು. ಆದರೆ ‘ವೀರಂ’ ಸಿನಿಮಾದಲ್ಲಿ ಅವರ ಗೆಟಪ್​ ಸಂಪೂರ್ಣ ಬದಲಾಗಿದೆ. ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಅವರು ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳೂ ಈ ಸಿನಿಮಾದಲ್ಲಿ ಇವೆ. ಈ ಎಲ್ಲ ಕಾರಣಗಳಿಂದಾಗಿ ‘ವೀರಂ’ ಚಿತ್ರ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಟೈಮ್​ ಲೂಪ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​; ‘ಮಮ್ಮಿ’ ಖ್ಯಾತಿಯ ಲೋಹಿತ್​ ನಿರ್ದೇಶನ

ಈ ಸಿನಿಮಾದ ಪಾತ್ರವರ್ಗ ಕೂಡ ಗಮನ ಸೆಳೆಯುವಂತಿದೆ. ಪ್ರಜ್ವಲ್​ ದೇವರಾಜ್​, ಶ್ರುತಿ, ಶ್ರೀನಗರ ಕಿಟ್ಟಿ, ಶಿಷ್ಯ ದೀಪಕ್​, ರಚಿತಾ ರಾಮ್​ ಮುಂತಾದವರು ನಟಿಸಿದ್ದಾರೆ. ತುಂಬ ಅದ್ದೂರಿಯಾದಂತಹ ಮೇಕಿಂಗ್​ ಈ ಸಿನಿಮಾದಲ್ಲಿದೆ ಎಂಬುದಕ್ಕೆ ಈ ಹಿಂದೆ ಬಿಡುಗಡೆಯಾದ ಟೀಸರ್​ನಲ್ಲಿ ಸುಳಿವು ಸಿಕ್ಕಿತ್ತು. ನುರಿತ ತಂತ್ರಜ್ಞರು ‘ವೀರಂ’ ತೆರೆಹಿಂದೆ ಕೆಲಸ ಮಾಡಿದ್ದಾರೆ.

ಈ ಚಿತ್ರಕ್ಕೆ ಶಶಿಧರ್​ ಕೆ.ಎಂ. ಬಂಡವಾಳ ಹೂಡಿದ್ದಾರೆ. ಕುಮಾರ್​ ರಾಜ್​ (ಖದರ್​ ಕುಮಾರ್​) ನಿರ್ದೇಶನ ಮಾಡಿದ್ದಾರೆ. ಲವಿತ್​ ಛಾಯಾಗ್ರಹಣ, ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ, ರವಿಚಂದ್ರನ್​ ಸಂಕಲನ, ಡಿಫರೆಂಡ್​ ಡ್ಯಾನಿ ಸಾಹಸ ನಿರ್ದೇಶನ ‘ವೀರಂ’ ಚಿತ್ರಕ್ಕಿದೆ. ಈ ಸಿನಿಮಾದಲ್ಲಿ ವಿಷ್ಣುವರ್ಧನ್​ ಅಭಿಮಾನಿಯಾಗಿ ಪ್ರಜ್ವಲ್​ ದೇವರಾಜ್​ ಕಾಣಿಸಿಕೊಳ್ಳಲಿದ್ದಾರೆ. ಹೀರೋ ಕೈ ಮೇಲೆ ಇರುವ ವಿಷ್ಣು ದಾದಾ ಟ್ಯಾಟೂ ಸಖತ್ ಹೈಲೈಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:14 pm, Fri, 10 February 23

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು