AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ದೇವರಾಜ್ ​- ರಾಗಿಣಿ ಚಂದ್ರನ್​ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಮದುವೆ ವಿಡಿಯೋ ವೈರಲ್​

Prajwal Devraj - Ragini Prajwal Wedding Anniversary: ತುಂಬ ರಾಯಲ್​ ಆಗಿ ಪ್ರಜ್ವಲ್​ ದೇವರಾಜ್​ ಮತ್ತು ರಾಗಿಣಿ ಚಂದ್ರನ್​ ಮದುವೆ ನೆರವೇರಿತ್ತು. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದರು. ಪ್ರಜ್ವಲ್​-ರಾಗಿಣಿ ಈಗ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

ಪ್ರಜ್ವಲ್​ ದೇವರಾಜ್ ​- ರಾಗಿಣಿ ಚಂದ್ರನ್​ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಮದುವೆ ವಿಡಿಯೋ ವೈರಲ್​
ರಾಗಿಣಿ, ಪ್ರಜ್ವಲ್​ ದೇವರಾಜ್​​
TV9 Web
| Edited By: |

Updated on:Oct 26, 2021 | 12:48 PM

Share

Prajwal Devraj – Ragini Prajwal | ಸ್ಯಾಂಡಲ್​ವುಡ್​ ನಟ ಪ್ರಜ್ವಲ್​ ದೇವರಾಜ್​ ಮತ್ತು ರಾಗಿಣಿ ಚಂದ್ರನ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟು 6 ವರ್ಷ ಕಳೆದಿದೆ. 2015ರ ಅಕ್ಟೋಬರ್​ನಲ್ಲಿ ಈ ಜೋಡಿ ಸಪ್ತಪದಿ ತುಳಿದಿತ್ತು. ಈಗ ಆರನೇ ವರ್ಷದ ವಿವಾದ ವಾರ್ಷಿಕೋತ್ಸವ ಆಚರಿಸಿಕೊಳ್ಳಲಾಗಿದೆ. ಈ ಖುಷಿಯ ಪ್ರಯುಕ್ತ ಇಬ್ಬರೂ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮದುವೆ ವಿಡಿಯೋ ಅಪ್​ಲೋಡ್​ ಮಾಡಿಕೊಂಡಿದ್ದಾರೆ. ಇದು ಅಭಿಮಾನಿಗಳ ಕಣ್ಮನ ಸೆಳೆಯುತ್ತಿದೆ. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ವೆಡ್ಡಿಂಗ್​ ಆ್ಯನಿವರ್ಸರಿ ಪ್ರಯುಕ್ತ ಆಪ್ತರು, ಅಭಿಮಾನಿಗಳು, ಸೆಲೆಬ್ರಿಟಿಗಳು ಈ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ. ತುಂಬ ರಾಯಲ್​ ಆಗಿ ಪ್ರಜ್ವಲ್​ ದೇವರಾಜ್​ ಮತ್ತು ರಾಗಿಣಿ ಚಂದ್ರನ್​ ಮದುವೆ ನೆರವೇರಿತ್ತು. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದರು. ಅನಂತ್​ನಾಗ್​, ಅಂಬರೀಶ್​, ರಾಘವೇಂದ್ರ ರಾಜ್​ಕುಮಾರ್​, ದ್ವಾರಕೀಶ್​, ಉಪೇಂದ್ರ, ಶಿವರಾಜ್​ಕುಮಾರ್​, ಗಣೇಶ್, ಚಿರಂಜೀವಿ ಸರ್ಜಾ, ಅವಿನಾಶ್​, ಮಾಳವಿಕಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಬಂದು ದಂಪತಿಗೆ ಆಶೀರ್ವಾದ ಮಾಡಿದ್ದರು.

ರಾಗಿಣಿ ಚಂದ್ರನ್​ ಮತ್ತು ಪ್ರಜ್ವಲ್​ ದೇವರಾಜ್​ ಬಹುಕಾಲದ ಸ್ನೇಹಿತರು. ಇಬ್ಬರ ನಡುವಿನ ಸ್ನೇಹವು ನಂತರ ಪ್ರೀತಿಗೆ ತಿರುಗಿತು. ಈಗ ಖುಷಿಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಡ್ಯಾನ್ಸ್​​ ಮತ್ತು ಯೋಗದಲ್ಲಿ ಪರಿಣತಿ ಹೊಂದಿರುವ ರಾಗಿಣಿ ಅವರು ಉತ್ತಮ ನಟಿ ಕೂಡ ಹೌದು. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಬಿಡುಗಡೆಯಾದ ‘ಲಾ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ರಚಿತಾ ರಾಮ್​ ನಿರ್ಮಾಣ ಮಾಡಿದ್ದ ‘ರಿಷಭ ಪ್ರಿಯ’ ಕಿರುಚಿತ್ರದಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ರಾಗಿಣಿ ಆ್ಯಕ್ಟೀವ್​ ಆಗಿರುತ್ತಾರೆ. ಅವರಿಗೆ ಲಕ್ಷಾಂತರ ಫಾಲೋವರ್ಸ್​ ಇದ್ದಾರೆ.

ಪ್ರಜ್ವಲ್​ ದೇವರಾಜ್​ ಸದ್ಯ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. 2020ರ ಆರಂಭದಲ್ಲಿ ತೆರೆಕಂಡ ‘ಜೆಂಟಲ್​ಮ್ಯಾನ್​’ ಸಿನಿಮಾ ಜನಮೆಚ್ಚುಗೆ ಪಡೆದುಕೊಂಡಿತು. 2021ರ ಫೆಬ್ರವರಿಯಲ್ಲಿ ‘ಇನ್ಸ್​ಪೆಕ್ಟರ್​ ವಿಕ್ರಂ’ ಬಿಡುಗಡೆ ಆಯಿತು. ಈಗ ಅವರು ‘ವೀರಂ’, ‘ಮಾಫಿಯಾ’, ‘ಅರ್ಜುನ್​ ಗೌಡ’ ಮುಂತಾದ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?

ಮದುವೆ ಪ್ಲ್ಯಾನ್​ ಬಗ್ಗೆ ಮಾತನಾಡಿದ ನಟ ವಿಜಯ್​ ದೇವರಕೊಂಡ; ಅಚ್ಚರಿ ಮೂಡಿಸಿದ ಹೇಳಿಕೆ

Published On - 11:24 am, Tue, 26 October 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ