ಪ್ರಜ್ವಲ್​ ದೇವರಾಜ್ ​- ರಾಗಿಣಿ ಚಂದ್ರನ್​ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಮದುವೆ ವಿಡಿಯೋ ವೈರಲ್​

Prajwal Devraj - Ragini Prajwal Wedding Anniversary: ತುಂಬ ರಾಯಲ್​ ಆಗಿ ಪ್ರಜ್ವಲ್​ ದೇವರಾಜ್​ ಮತ್ತು ರಾಗಿಣಿ ಚಂದ್ರನ್​ ಮದುವೆ ನೆರವೇರಿತ್ತು. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದರು. ಪ್ರಜ್ವಲ್​-ರಾಗಿಣಿ ಈಗ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

ಪ್ರಜ್ವಲ್​ ದೇವರಾಜ್ ​- ರಾಗಿಣಿ ಚಂದ್ರನ್​ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಮದುವೆ ವಿಡಿಯೋ ವೈರಲ್​
ರಾಗಿಣಿ, ಪ್ರಜ್ವಲ್​ ದೇವರಾಜ್​​
Follow us
| Updated By: Digi Tech Desk

Updated on:Oct 26, 2021 | 12:48 PM

Prajwal Devraj – Ragini Prajwal | ಸ್ಯಾಂಡಲ್​ವುಡ್​ ನಟ ಪ್ರಜ್ವಲ್​ ದೇವರಾಜ್​ ಮತ್ತು ರಾಗಿಣಿ ಚಂದ್ರನ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟು 6 ವರ್ಷ ಕಳೆದಿದೆ. 2015ರ ಅಕ್ಟೋಬರ್​ನಲ್ಲಿ ಈ ಜೋಡಿ ಸಪ್ತಪದಿ ತುಳಿದಿತ್ತು. ಈಗ ಆರನೇ ವರ್ಷದ ವಿವಾದ ವಾರ್ಷಿಕೋತ್ಸವ ಆಚರಿಸಿಕೊಳ್ಳಲಾಗಿದೆ. ಈ ಖುಷಿಯ ಪ್ರಯುಕ್ತ ಇಬ್ಬರೂ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮದುವೆ ವಿಡಿಯೋ ಅಪ್​ಲೋಡ್​ ಮಾಡಿಕೊಂಡಿದ್ದಾರೆ. ಇದು ಅಭಿಮಾನಿಗಳ ಕಣ್ಮನ ಸೆಳೆಯುತ್ತಿದೆ. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ವೆಡ್ಡಿಂಗ್​ ಆ್ಯನಿವರ್ಸರಿ ಪ್ರಯುಕ್ತ ಆಪ್ತರು, ಅಭಿಮಾನಿಗಳು, ಸೆಲೆಬ್ರಿಟಿಗಳು ಈ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ. ತುಂಬ ರಾಯಲ್​ ಆಗಿ ಪ್ರಜ್ವಲ್​ ದೇವರಾಜ್​ ಮತ್ತು ರಾಗಿಣಿ ಚಂದ್ರನ್​ ಮದುವೆ ನೆರವೇರಿತ್ತು. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದರು. ಅನಂತ್​ನಾಗ್​, ಅಂಬರೀಶ್​, ರಾಘವೇಂದ್ರ ರಾಜ್​ಕುಮಾರ್​, ದ್ವಾರಕೀಶ್​, ಉಪೇಂದ್ರ, ಶಿವರಾಜ್​ಕುಮಾರ್​, ಗಣೇಶ್, ಚಿರಂಜೀವಿ ಸರ್ಜಾ, ಅವಿನಾಶ್​, ಮಾಳವಿಕಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಬಂದು ದಂಪತಿಗೆ ಆಶೀರ್ವಾದ ಮಾಡಿದ್ದರು.

ರಾಗಿಣಿ ಚಂದ್ರನ್​ ಮತ್ತು ಪ್ರಜ್ವಲ್​ ದೇವರಾಜ್​ ಬಹುಕಾಲದ ಸ್ನೇಹಿತರು. ಇಬ್ಬರ ನಡುವಿನ ಸ್ನೇಹವು ನಂತರ ಪ್ರೀತಿಗೆ ತಿರುಗಿತು. ಈಗ ಖುಷಿಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಡ್ಯಾನ್ಸ್​​ ಮತ್ತು ಯೋಗದಲ್ಲಿ ಪರಿಣತಿ ಹೊಂದಿರುವ ರಾಗಿಣಿ ಅವರು ಉತ್ತಮ ನಟಿ ಕೂಡ ಹೌದು. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಬಿಡುಗಡೆಯಾದ ‘ಲಾ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ರಚಿತಾ ರಾಮ್​ ನಿರ್ಮಾಣ ಮಾಡಿದ್ದ ‘ರಿಷಭ ಪ್ರಿಯ’ ಕಿರುಚಿತ್ರದಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ರಾಗಿಣಿ ಆ್ಯಕ್ಟೀವ್​ ಆಗಿರುತ್ತಾರೆ. ಅವರಿಗೆ ಲಕ್ಷಾಂತರ ಫಾಲೋವರ್ಸ್​ ಇದ್ದಾರೆ.

ಪ್ರಜ್ವಲ್​ ದೇವರಾಜ್​ ಸದ್ಯ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. 2020ರ ಆರಂಭದಲ್ಲಿ ತೆರೆಕಂಡ ‘ಜೆಂಟಲ್​ಮ್ಯಾನ್​’ ಸಿನಿಮಾ ಜನಮೆಚ್ಚುಗೆ ಪಡೆದುಕೊಂಡಿತು. 2021ರ ಫೆಬ್ರವರಿಯಲ್ಲಿ ‘ಇನ್ಸ್​ಪೆಕ್ಟರ್​ ವಿಕ್ರಂ’ ಬಿಡುಗಡೆ ಆಯಿತು. ಈಗ ಅವರು ‘ವೀರಂ’, ‘ಮಾಫಿಯಾ’, ‘ಅರ್ಜುನ್​ ಗೌಡ’ ಮುಂತಾದ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?

ಮದುವೆ ಪ್ಲ್ಯಾನ್​ ಬಗ್ಗೆ ಮಾತನಾಡಿದ ನಟ ವಿಜಯ್​ ದೇವರಕೊಂಡ; ಅಚ್ಚರಿ ಮೂಡಿಸಿದ ಹೇಳಿಕೆ

Published On - 11:24 am, Tue, 26 October 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ