
ಹಲವು ಕಾರಣಗಳಿಂದಾಗಿ ‘ಕರಾವಳಿ’ (Karavali) ಸಿನಿಮಾ ನಿರೀಕ್ಷೆ ಮೂಡಿಸಿದೆ. ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ (Raj B. Shetty) ಮುಂತಾದವರು ನಟಿಸಿರುವ ಈ ಸಿನಿಮಾದ ಹಾಡುಗಳು ಗಮನ ಸೆಳೆಯುತ್ತಿವೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳನ್ನು ನೋಡಿದ ಬಳಿಕ ಸಿನಿಮಾ ಮೇಲಿನ ಹೈಪ್ ಇನ್ನಷ್ಟು ಹೆಚ್ಚಾಗಿದೆ. ಈಗ ಇನ್ನೊಂದು ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡು ಸಖತ್ ಅಗ್ರೆಸಿವ್ ಆಗಿದೆ ಎಂಬುದು ವಿಶೇಷ. ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಜೊತೆ ಸಂಪದಾ, ಸುಷ್ಮಿತಾ, ಮಿತ್ರ, ರಮೇಶ್ ಇಂದಿರಾ, ಶ್ರೀಧರ್ ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.
ಶೀರ್ಷಿಕೆಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ಕರಾವಳಿ ಭಾಗದ ಕಥೆ ಇರಲಿದೆ. ಆದ್ದರಿಂದ ನಿರೀಕ್ಷೆ ಮನೆ ಮಾಡಿದೆ. ಈಗಾಗಲೇ ಟ್ರೇಲರ್ ಹೇಗಿದೆ ಎಂಬುದನ್ನು ಜನರು ನೋಡಿದ್ದಾರೆ. ಜುಲೈ 24ಕ್ಕೆ ಅದ್ದೂರಿಯಾಗಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ನಡುವೆ ಚಿತ್ರತಂಡದಿಂದ ಪವರ್ ಫುಲ್ ಆಗಿರುವ ಕವರ್ ಸಾಂಗ್ ರಿಲೀಸ್ ಮಾಡಲಾಗಿದೆ. ದೊಡ್ಡ ಪರದೆಯಲ್ಲಿ ಈ ಸಾಂಗ್ ನೋಡಲು ಸಿನಿಪ್ರಿಯರು ಕಾದಿದ್ದಾರೆ.
‘Rage of Kambala’ ಎಂಬ ಶೀರ್ಷಿಕೆಯಲ್ಲಿ ರಿಲೀಸ್ ಆಗಿರುವ ‘ಓಡಾ…’ ಗೀತೆಗೆ ಖ್ಯಾತ ಗಾಯಕ ಆನಂದ್ ಶ್ರೀರಾಜ್ ಅವರು ಧ್ವನಿ ನೀಡಿದ್ದಾರೆ. ಮಲಯಾಳಂನ ಸೂಪರ್ ಹಿಟ್ ಸಿನಿಮಾಗಳಾದ ‘ಕಿಂಗ್ ಆಫ್ ಕೋಥ’, ‘ಎಂಪರಾನ್’ ಮುಂತಾದ ಸಿನಿಮಾದ ಹಾಡುಗಳು ಅವರ ಕಂಠದಲ್ಲಿ ಮೂಡಿಬಂದು ಜನಮನ ಗೆದ್ದಿವೆ. ಈಗ ಅವರು ‘ಕರಾವಳಿ’ ಸಿನಿಮಾ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ನೀಡಿದ್ದಾರೆ.
ಈ ಹಾಡಿಗೆ ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಸಚಿನ್ ಬಸ್ರೂರು ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಕಥೆಯ ಯಾವ ಹಂತದಲ್ಲಿ ಈ ಹಾಡು ಬರಲಿದೆ ಎಂಬುದನ್ನು ತಿಳಿಯುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ತಾಂತ್ರಿಕವಾಗಿ ಈ ಸಿನಿಮಾ ಸಖತ್ ಅದ್ದೂರಿಯಾಗಿ ಮೂಡಿದೆ ಎಂಬುದಕ್ಕೆ ಈ ಹಾಡು ಕೂಡ ಸಾಕ್ಷಿಯಾಗಿದೆ.
ಇದನ್ನೂ ಓದಿ: ‘ಕರಾವಳಿ’ ಕಿರಿಕ್: ಪ್ರಜ್ವಲ್ಗೆ ಸಂಭಾವನೆ ಬಾಕಿ ಉಳಿಸಿಕೊಂಡಿದ್ದೇಕೆ? ವಿವರಿಸಿದ ಚಿತ್ರತಂಡ
‘ಕರಾವಳಿ’ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಜನಪ್ರಿಯ ಗಾಯಕರಾದ ಸಿದ್ ಶ್ರೀರಾಮ್, ಸಾಯಿ ವಿಗ್ನೇಶ್, ಆಬಿ, ಬಿ. ಜಯಶ್ರೀ ಮತ್ತು ಆನಂದ್ ಶ್ರೀರಾಜ್ ಅವರ ಕಂಠದಲ್ಲಿ ಈ ಸಿನಿಮಾದ ಹಾಡುಗಳು ಮೂಡಿಬಂದಿವೆ. ಈಗಾಗಲೇ ಬಿಡುಗಡೆ ಆಗಿರುವ ‘ಮುದ್ದು ಗುಮ್ಮ..’ ಹಾಗೂ ‘ಸೋಲ್ ಆಫ್ ಕರಾವಳಿ’ ಹಾಡುಗಳು ಜನರಿಗೆ ಇಷ್ಟ ಆಗಿವೆ. ಈಗ ‘ರೇಜ್ ಆಫ್ ಕಂಬಳ’ ಕೂಡ ಸೇರ್ಪಡೆ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.