AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷಗಾನದ ವೇಷ ಧರಿಸಿದ ಪ್ರಜ್ವಲ್ ದೇವರಾಜ್​; ಯುಗಾದಿ ಹಬ್ಬಕ್ಕೆ ‘ಕರಾವಳಿ’ ಹೊಸ ಪೋಸ್ಟರ್​

ಕಂಬಳದ ಜೊತೆಯಲ್ಲಿ ಯಕ್ಷಗಾನವೂ ಸಹ ‘ಕರಾವಳಿ’ ಚಿತ್ರದ ಹೈಲೈಟ್​ಗಳಲ್ಲಿ ಒಂದಾಗಿರಲಿದೆ ಎಂಬುದು ಈ ಪೋಸ್ಟರ್​ ನೋಡಿದರೆ ತಿಳಿಯುತ್ತದೆ. ಇದೇ ಮೊದಲ ಬಾರಿ ನಟ ಪ್ರಜ್ವಲ್ ದೇವರಾಜ್ ಅವರು ಯಕ್ಷಗಾನದ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಗುರುದತ್ ಗಾಣಿಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರೀಕರಣ ಪ್ರಗತಿಯಲ್ಲಿದೆ.

ಯಕ್ಷಗಾನದ ವೇಷ ಧರಿಸಿದ ಪ್ರಜ್ವಲ್ ದೇವರಾಜ್​; ಯುಗಾದಿ ಹಬ್ಬಕ್ಕೆ ‘ಕರಾವಳಿ’ ಹೊಸ ಪೋಸ್ಟರ್​
ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Apr 09, 2024 | 3:11 PM

Share

ಅನೇಕ ಸಿನಿಮಾ ತಂಡಗಳು ಯುಗಾದಿ (Ugadi) ಹಬ್ಬದ ಪ್ರಯುಕ್ತ ಹೊಸ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡುತ್ತಿವೆ. ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಕೂಡ ನೂತನ ಅವತಾರದಲ್ಲಿ ಝಲಕ್​ ನೀಡಿದ್ದಾರೆ. ‘ಕರಾವಳಿ’ ಸಿನಿಮಾದ ಹೊಸ ಪೋಸ್ಟರ್​ನಲ್ಲಿ ಅವರನ್ನು ನೋಡಿದರೆ ಗುರುತು ಹಿಡಿಯಲು ಸಾಧ್ಯವಿಲ್ಲ. ಇದೇ ಮೊದಲ ಬಾರಿ ಪ್ರಜ್ವಲ್ ದೇವರಾಜ್ ಅವರು ಯಕ್ಷಗಾನದ ವೇಷ ಧರಿಸಿದ್ದಾರೆ. ‘ಕರಾವಳಿ’ ಸಿನಿಮಾ (Karavali Movie) ಚಿತ್ರೀಕರಣ ಪ್ರಗತಿಯಲ್ಲಿದೆ. ಗುರುದತ್ ಗಾಣಿಗ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಬಿರುಸಿನ ಚಿತ್ರೀಕರಣದ ನಡುವೆ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಹೊಸ ಲುಕ್ ಅನಾವರಣ ಮಾಡುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚು ಮಾಡಲಾಗಿದೆ. ಮಂಗಳೂರಿನ ಸುತ್ತಮುತ್ತ ಈ ಚಿತ್ರದ ಶೂಟಿಂಗ್​ ನಡೆಯುತ್ತಿದೆ.

‘ಕರಾವಳಿ’ ಚಿತ್ರತಂಡದಿಂದ ಈ ಮೊದಲು ಬಿಡುಗಡೆ ಆಗಿದ್ದ ಪೋಸ್ಟರ್​ಗಳು ಕೂಡ ಇದೇ ರೀತಿ ಕೌತುಕ ಮೂಡಿಸಿತ್ತು. ಟೀಸರ್ ಸಹ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್​ ಅವರು ಡಿಫರೆಂಟ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಂಬಳದ ಜೊತೆಯಲ್ಲಿ ಯಕ್ಷಗಾನ ಸಹ ‘ಕರಾವಳಿ’ ಸಿನಿಮಾದ ಹೈಲೈಟ್​ಗಳಲ್ಲಿ ಒಂದಾಗಿರಲಿದೆ ಎಂಬುದು ಈ ಪೋಸ್ಟರ್​ ನೋಡಿದರೆ ತಿಳಿಯುತ್ತದೆ.

ಪ್ರಜ್ವಲ್​ ದೇವರಾಜ್​ ಅವರ ಈ ಲುಕ್ ಹಿಂದೆ ವೃತ್ತಿಪರ ಯಕ್ಷಗಾನ ಕಲಾವಿದರೇ ಇದ್ದಾರೆ. ಯಕ್ಷಗಾನ ಭಾಗವತರಾದ ಪಲ್ಲವ ಗಾಣಿಗ ಅವರು ಈ ಲುಕ್ ವಿನ್ಯಾಸ ಮಾಡಿದ್ದಾರೆ. ಈ ಗೆಟಪ್​ನಲ್ಲಿ ಪ್ರಜ್ವಲ್ ಅವರು ಸಿದ್ಧವಾಗಲು ಅರ್ಥ ದಿನ ಸಮಯ ಹಿಡಿಯಿತು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಮನುಷ್ಯ ಮತ್ತು ಪ್ರಾಣಿಗಳ ಮಧ್ಯದ ಸಂಘರ್ಷದ ಕಥೆಯನ್ನು ಈ ಸಿನಿಮಾ ಹೊಂದಿರಲಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​

ಗ್ರಾಮೀಣ ಹಿನ್ನೆಲೆಯಲ್ಲಿ ‘ಕರಾವಳಿ’ ಸಿನಿಮಾದ ಕಥೆ ಸಾಗಲಿದೆ. ಅಭಿಮನ್ಯು ಸದಾನಂದ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಸಂಗೀತ ನೀಡುತ್ತಿದ್ದಾರೆ. ಮಿತ್ರ, ಜಿ.ಜಿ. ನಿರಂಜನ್, ಟಿವಿ ಶ್ರೀಧರ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಗುರುದತ್ ಗಾಣಿಗ ಅವರು ನಿರ್ದೇಶನದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ‘ಗಾಣಿಗ ಫಿಲ್ಮ್ಸ್​’ ಹಾಗೂ ‘ವಿಕೆ ಫಿಲ್ಮ್​’ ಜೊತೆಯಾಗಿ ನಿರ್ಮಾಣ ಮಾಡುತ್ತಿವೆ. ಈಗ ಶೇಕಡ 40ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಯುಗಾದಿ ಹಬ್ಬದ ನಂತರ 2ನೇ ಹಂತದ ಚಿತ್ರೀಕರಣ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್