AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷಗಾನದ ವೇಷ ಧರಿಸಿದ ಪ್ರಜ್ವಲ್ ದೇವರಾಜ್​; ಯುಗಾದಿ ಹಬ್ಬಕ್ಕೆ ‘ಕರಾವಳಿ’ ಹೊಸ ಪೋಸ್ಟರ್​

ಕಂಬಳದ ಜೊತೆಯಲ್ಲಿ ಯಕ್ಷಗಾನವೂ ಸಹ ‘ಕರಾವಳಿ’ ಚಿತ್ರದ ಹೈಲೈಟ್​ಗಳಲ್ಲಿ ಒಂದಾಗಿರಲಿದೆ ಎಂಬುದು ಈ ಪೋಸ್ಟರ್​ ನೋಡಿದರೆ ತಿಳಿಯುತ್ತದೆ. ಇದೇ ಮೊದಲ ಬಾರಿ ನಟ ಪ್ರಜ್ವಲ್ ದೇವರಾಜ್ ಅವರು ಯಕ್ಷಗಾನದ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಗುರುದತ್ ಗಾಣಿಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರೀಕರಣ ಪ್ರಗತಿಯಲ್ಲಿದೆ.

ಯಕ್ಷಗಾನದ ವೇಷ ಧರಿಸಿದ ಪ್ರಜ್ವಲ್ ದೇವರಾಜ್​; ಯುಗಾದಿ ಹಬ್ಬಕ್ಕೆ ‘ಕರಾವಳಿ’ ಹೊಸ ಪೋಸ್ಟರ್​
ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Apr 09, 2024 | 3:11 PM

Share

ಅನೇಕ ಸಿನಿಮಾ ತಂಡಗಳು ಯುಗಾದಿ (Ugadi) ಹಬ್ಬದ ಪ್ರಯುಕ್ತ ಹೊಸ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡುತ್ತಿವೆ. ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಕೂಡ ನೂತನ ಅವತಾರದಲ್ಲಿ ಝಲಕ್​ ನೀಡಿದ್ದಾರೆ. ‘ಕರಾವಳಿ’ ಸಿನಿಮಾದ ಹೊಸ ಪೋಸ್ಟರ್​ನಲ್ಲಿ ಅವರನ್ನು ನೋಡಿದರೆ ಗುರುತು ಹಿಡಿಯಲು ಸಾಧ್ಯವಿಲ್ಲ. ಇದೇ ಮೊದಲ ಬಾರಿ ಪ್ರಜ್ವಲ್ ದೇವರಾಜ್ ಅವರು ಯಕ್ಷಗಾನದ ವೇಷ ಧರಿಸಿದ್ದಾರೆ. ‘ಕರಾವಳಿ’ ಸಿನಿಮಾ (Karavali Movie) ಚಿತ್ರೀಕರಣ ಪ್ರಗತಿಯಲ್ಲಿದೆ. ಗುರುದತ್ ಗಾಣಿಗ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಬಿರುಸಿನ ಚಿತ್ರೀಕರಣದ ನಡುವೆ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಹೊಸ ಲುಕ್ ಅನಾವರಣ ಮಾಡುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚು ಮಾಡಲಾಗಿದೆ. ಮಂಗಳೂರಿನ ಸುತ್ತಮುತ್ತ ಈ ಚಿತ್ರದ ಶೂಟಿಂಗ್​ ನಡೆಯುತ್ತಿದೆ.

‘ಕರಾವಳಿ’ ಚಿತ್ರತಂಡದಿಂದ ಈ ಮೊದಲು ಬಿಡುಗಡೆ ಆಗಿದ್ದ ಪೋಸ್ಟರ್​ಗಳು ಕೂಡ ಇದೇ ರೀತಿ ಕೌತುಕ ಮೂಡಿಸಿತ್ತು. ಟೀಸರ್ ಸಹ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್​ ಅವರು ಡಿಫರೆಂಟ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಂಬಳದ ಜೊತೆಯಲ್ಲಿ ಯಕ್ಷಗಾನ ಸಹ ‘ಕರಾವಳಿ’ ಸಿನಿಮಾದ ಹೈಲೈಟ್​ಗಳಲ್ಲಿ ಒಂದಾಗಿರಲಿದೆ ಎಂಬುದು ಈ ಪೋಸ್ಟರ್​ ನೋಡಿದರೆ ತಿಳಿಯುತ್ತದೆ.

ಪ್ರಜ್ವಲ್​ ದೇವರಾಜ್​ ಅವರ ಈ ಲುಕ್ ಹಿಂದೆ ವೃತ್ತಿಪರ ಯಕ್ಷಗಾನ ಕಲಾವಿದರೇ ಇದ್ದಾರೆ. ಯಕ್ಷಗಾನ ಭಾಗವತರಾದ ಪಲ್ಲವ ಗಾಣಿಗ ಅವರು ಈ ಲುಕ್ ವಿನ್ಯಾಸ ಮಾಡಿದ್ದಾರೆ. ಈ ಗೆಟಪ್​ನಲ್ಲಿ ಪ್ರಜ್ವಲ್ ಅವರು ಸಿದ್ಧವಾಗಲು ಅರ್ಥ ದಿನ ಸಮಯ ಹಿಡಿಯಿತು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಮನುಷ್ಯ ಮತ್ತು ಪ್ರಾಣಿಗಳ ಮಧ್ಯದ ಸಂಘರ್ಷದ ಕಥೆಯನ್ನು ಈ ಸಿನಿಮಾ ಹೊಂದಿರಲಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ‘ಕರಾವಳಿ’ ನೂತನ ಪೋಸ್ಟರ್​; ಕೋಣ ಏರಿ ಬಂದ ಪ್ರಜ್ವಲ್ ದೇವರಾಜ್​

ಗ್ರಾಮೀಣ ಹಿನ್ನೆಲೆಯಲ್ಲಿ ‘ಕರಾವಳಿ’ ಸಿನಿಮಾದ ಕಥೆ ಸಾಗಲಿದೆ. ಅಭಿಮನ್ಯು ಸದಾನಂದ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಸಂಗೀತ ನೀಡುತ್ತಿದ್ದಾರೆ. ಮಿತ್ರ, ಜಿ.ಜಿ. ನಿರಂಜನ್, ಟಿವಿ ಶ್ರೀಧರ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಗುರುದತ್ ಗಾಣಿಗ ಅವರು ನಿರ್ದೇಶನದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ‘ಗಾಣಿಗ ಫಿಲ್ಮ್ಸ್​’ ಹಾಗೂ ‘ವಿಕೆ ಫಿಲ್ಮ್​’ ಜೊತೆಯಾಗಿ ನಿರ್ಮಾಣ ಮಾಡುತ್ತಿವೆ. ಈಗ ಶೇಕಡ 40ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಯುಗಾದಿ ಹಬ್ಬದ ನಂತರ 2ನೇ ಹಂತದ ಚಿತ್ರೀಕರಣ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?