AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ಸಿನಿಮಾದ ಹೆಸರು ಎರವಲು ಪಡೆದ ಪ್ರಜ್ವಲ್ ದೇವರಾಜ್

Prajwal Devaraj: ಪ್ರಜ್ವಲ್ ದೇವರಾಜ್ ನಟಿಸಲಿರುವ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ಶಿವಣ್ಣನ ಸಿನಿಮಾದ ಹೆಸರನ್ನು ಎರವಲು ಪಡೆದಿದ್ದಾರೆ ಪ್ರಜ್ವಲ್ ದೇವರಾಜ್.

ಶಿವಣ್ಣನ ಸಿನಿಮಾದ ಹೆಸರು ಎರವಲು ಪಡೆದ ಪ್ರಜ್ವಲ್ ದೇವರಾಜ್
ಪ್ರಜ್ವಲ್ ದೇವರಾಜ್
ಮಂಜುನಾಥ ಸಿ.
|

Updated on: Jan 15, 2024 | 7:37 PM

Share

ಪ್ರಜ್ವಲ್ ದೇವರಾಜ್ (Prajwal Devaraj) ಒಂದರ ಹಿಂದೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಮಾಸ್ ಸಿನಿಮಾಗಳೇ ಅವರನ್ನು ಅರಸಿ ಬರುತ್ತಿವೆ. ಇದೀಗ ‘ಮಮ್ಮಿ’ ಖ್ಯಾತಿಯ ನಿರ್ದೇಶಕ ಲೋಹಿತ್ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡಲು ಸಜ್ಜಾಗಿದ್ದು, ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಲಿದ್ದಾರೆ. ಈ ಸಿನಿಮಾಕ್ಕೆ ‘ರಾಕ್ಷಸ’ ಎಂದು ಹೆಸರಿಡಲಾಗಿದೆ. ಶಿವರಾಜ್ ಕುಮಾರ್ ಅವರು ಈ ಹಿಂದೆಯೇ ಇದೇ ಹೆಸರಿನ ಸಿನಿಮಾದಲ್ಲಿ ನಟಿಸಿ ಆ ಸಿನಿಮಾ ಹಿಟ್ ಆಗಿತ್ತು. ಈಗ ಪ್ರಜ್ವಲ್ ದೇವರಾಜ್ ಅದೇ ಹೆಸರಿನ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ನಿರ್ದೇಶಕ ಲೋಹಿತ್ ‘ಕ್ಯಾಪ್ಚರ್’ ಮತ್ತು ‘ಮಾಫಿಯಾ’ ಸಿನಿಮಾಗಳ ನಿರ್ದೇಶನ ಮಾಡಿ ಬಹುತೇಕ ಮುಗಿಸಿದ್ದಾರೆ. ಈ ಎರಡು ಸಿನಿಮ ಬಿಡುಗಡೆ ಆಗುವ ಮೊದಲೇ ‘ರಾಕ್ಷಸ’ ಸಿನಿಮಾ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಲೋಹಿತ್ ‘ರಾಕ್ಷಸ’ ಸಿನಿಮಾದ ಫಸ್ಟ್ ಲುಕ್ ಸಹ ಬಿಡುಗಡೆ ಮಾಡಿದ್ದು, ಪೋಸ್ಟರ್ ಭಿನ್ನವಾಗಿ ಕಾಣುತ್ತಿದೆ. ಬಂದೂಕು ಹಿಡಿದ ಕೈಯ್ಯೊಂದರ ಬೆರಳನ್ನು ಪುಟ್ಟ ಮಗುವೊಂದು ಹಿಡಿದುಕೊಂಡಿದೆ. ಕೈಮೇಲಿರುವ ಟ್ಯಾಟೂಗಳು ಸಹ ಗಮನ ಸೆಳೆಯುತ್ತಿವೆ.

ಲೋಹಿತ್ ಹಾಗೂ ಪ್ರಜ್ವಲ್ ಒಟ್ಟಿಗೆ ಕೆಲಸ ಮಾಡಿರುವ ‘ಮಾಫಿಯಾ’ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ. ಆದರೆ ಆ ಸಿನಿಮಾ ಬಿಡುಗಡೆಗೆ ಮೊದಲೇ ಇದೀಗ ‘ರಾಕ್ಷಸ’ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ‘ರಾಕ್ಷಸ’ ಸಿನಿಮಾದ ಫಸ್ಟ್ ಲುಕ್ ಅನ್ನು ಕನ್ನಡ ಚಿತ್ರರಂಗದ 40 ನಿರ್ದೇಶಕರು ಬಿಡುಗಡೆ ಮಾಡಿರುವುದು ವಿಶೇಷ.

ಇದನ್ನೂ ಓದಿ:‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ

‘ರಾಕ್ಷಸ’ ಸಿನಿಮಾದ ಬಗ್ಗೆ ಹೆಚ್ಚು ಮಾಹಿತಿ ಬಿಟ್ಟುಕೊಡದ ನಿರ್ದೇಶಕ ಲೋಹಿತ್ ಕೇವಲ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕವೇ ಕುತೂಹಲ ಹೆಚ್ಚಿಸಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್ ಜೊತೆ ಯಾರೆಲ್ಲ ಅಭಿನಯಿಸಿದ್ದಾರೆ, ಇದು ಯಾವ ರೀತಿಯ ಸಿನಿಮಾ ಎನ್ನುವ ಹೆಚ್ಚಿನ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ. ನಬೀನ್ ಪೋಲ್ ಸಂಗೀತ ನೀಡಲಿದ್ದಾರೆ. ಸದ್ಯ ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿರುವ ರಾಕ್ಷಸ ಹೇಗಿರಲಿದೆ, ಯಾವಾಗ ತೆರೆಮೇಲೆ ಬರಲಿದೆ ಎಂದು ಕಾದುನೋಡಬೇಕಿದೆ.

ಪ್ರಜ್ವಲ್ ದೇವರಾಜ್ ‘ಮಾಫಿಯಾ’, ‘ಗಣ’ ಸಿನಿಮಾಗಳ ಚಿತ್ರೀಕರಣ ಬಹುತೇಕ ಮುಗಿಸಿದ್ದು, ‘ಚೀತಾ’, ‘ಕರಾವಳಿ’ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ಈಗ ‘ರಾಕ್ಷಸ’ ಸಿನಿಮಾ ಸಹ ಸೇರಿಕೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು