AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ‘ರಾಕ್ಷಸ’ ದರ್ಶನ; ಡಿಫರೆಂಟ್ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್

2025ರಲ್ಲಿ ಹೊಸ ಹುರುಪಿನೊಂದಿಗೆ ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಅವರು ನಟಿಸಿರುವ ‘ರಾಕ್ಷಸ’ ಸಿನಿಮಾ ಶಿವರಾತ್ರಿ ಹಬ್ಬದ ಪ್ರಯುಕ್ತ ತೆರೆಕಾಣಲಿದೆ. ಲೋಹಿತ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಟೈಮ್ ಲೂಪ್ ಕಾನ್ಸೆಪ್ಟ್​ನಲ್ಲಿ ಈ ಸಿನಿಮಾ ಸಿದ್ಧವಾಗಿದೆ ಎಂಬುದು ವಿಶೇಷ.

ಶಿವರಾತ್ರಿಗೆ ‘ರಾಕ್ಷಸ’ ದರ್ಶನ; ಡಿಫರೆಂಟ್ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್
Prajwal Devaraj
ಮದನ್​ ಕುಮಾರ್​
|

Updated on: Jan 03, 2025 | 5:08 PM

Share

ನಟ ಪ್ರಜ್ವಲ್ ದೇವರಾಜ್ ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಇದೆ. ಆ ಪೈಕಿ ‘ರಾಕ್ಷಸ’ ಸಿನಿಮಾ ಕೂಡ ಕುತೂಹಲ ಮೂಡಿಸಿದೆ. ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಅವರು ಈ ಸಿನಿಮಾದಲ್ಲಿ ಡಿಫರೆಂಟ್ ಗೆಟಪ್​ ಧರಿಸಿದ್ದಾರೆ. ಈ ಚಿತ್ರತಂಡ ಈಗ ಹೊಸ ಅಪ್​ಡೇಟ್​ ನೀಡಿದೆ. ರಿಲೀಸ್​ ಪ್ಲ್ಯಾನ್​ ಬಗ್ಗೆ ‘ರಾಕ್ಷಸ’ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಶಿವರಾತ್ರಿ ಹಬ್ಬದ ಸಮಯದಲ್ಲಿ ‘ರಾಕ್ಷಸ’ ಸಿನಿಮಾ ರಿಲೀಸ್ ಆಗಲಿದೆ. ಶಿವರಾತ್ರಿ ದಿನದಂದು ಪ್ರಜ್ವಲ್​ ದೇವರಾಜ್​ ಅವರ ಅಭಿಮಾನಿಗಳಿಗೆ ಥಿಯೇಟರ್​ಗಳಲ್ಲಿ ಭರ್ಜರಿ ಮನರಂಜನೆ ಸಿಗಲಿದೆ. ಪ್ರಜ್ವಲ್ ಅವರು ಭಿನ್ನ ಗೆಟಪ್​ ತಾಳಿರುವ ಈ ಸಿನಿಮಾದ ಪಾತ್ರವರ್ಗದಲ್ಲಿ ಶೋಭಾರಾಜ್, ವತ್ಸಲಾ ಮೋಹನ್, ಆರ್ನ ರಾಥೋಡ್, ಸಿದ್ಲಿಂಗು ಶ್ರೀಧರ್ ಮುಂತಾದ ಕಲಾವಿದರು ನಟಿಸಿದ್ದಾರೆ.

‘ರಾಕ್ಷಸ’ ಚಿತ್ರದ ಶೇಕಡ 80ರಷ್ಟು ಚಿತ್ರೀಕರಣ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಮಾಡಲಾಗಿದೆ. ಇನ್ನುಳಿದ ದೃಶ್ಯಗಳ ಚಿತ್ರೀಕರಣವನ್ನು ರಾಮೇಶ್ವರಂ, ಗೋವಾ ಹಾಗೂ ಬೆಂಗಳೂರಿನಲ್ಲಿ ನಡೆಸಲಾಗಿದೆ. ‘ಶಾನ್ವಿ ಎಂಟರ್‌ಟೇನ್ಮೆಂಟ್​’ ಮೂಲಕ ದೀಪು ಬಿ.ಎಸ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನವೀನ್ ಮತ್ತು ಮಾನಸಾ ಕೆ. ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ

‘ರಾಕ್ಷಸ’ ಎಂಬ ಶೀರ್ಷಿಕೆ ಕೇಳಿದ ತಕ್ಷಣ ಇದೊಂದು ಹಾರರ್ ಸಿನಿಮಾ ಎಂಬ ಕಲ್ಪನೆ ಮೂಡುವುದು ಸಹಜ. ಆದರೆ ಚಿತ್ರತಂಡದ ಪ್ರಕಾರ, ಈ ಸಿನಿಮಾದಲ್ಲಿ ಎಮೋಷನಲ್ ಕಹಾನಿ ಇದೆ. ಅದರ ಜೊತೆಗೆ ಟೈಮ್‌ ಲೂಪ್‌ ಪರಿಕಲ್ಪನೆಯ ಸ್ಪರ್ಶ ಕೂಡ ನೀಡಲಾಗಿದೆ. ಈ ಸಿನಿಮಾಗೆ ನಿರ್ದೇಶಕ ಲೋಹಿತ್ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ಮಮ್ಮಿ’, ‘ದೇವಕಿ’ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಅವರು ಈಗ ‘ರಾಕ್ಷಸ’ ಮೂಲಕ ಹೊಸ ಕಥೆ ಹೇಳಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘು ನಿಡುವಳ್ಳಿಗೆ ಗಣೇಶ್​ ಮೆಚ್ಚುಗೆ

ಈತನಕ 36ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಪ್ರಜ್ವಲ್‌ ದೇವರಾಜ್​ ಅವರು ಆ ಎಲ್ಲ ಸಿನಿಮಾಗಳಿಗಿಂತ ಡಿಫರೆಂಟ್​ ಆಗಿ ‘ರಾಕ್ಷಸ’ ಸಿನಿಮಾದಲ್ಲಿ ಕಾಣಿಸಿಕೊಂಡಿರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಜೇಬಿನ್ ಪಿ. ಜೋಕಬ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ವಿನೋದ್ ಅವರ ಸಾಹಸ ನಿರ್ದೇಶನ, ವರುಣ್ ಉನ್ನಿ ಅವರ ಸಂಗೀತ ನಿರ್ದೇಶನ, ಅವಿನಾಶ್ ಬಸುತ್ಕರ್ ಅವರ ಹಿನ್ನಲೆ ಸಂಗೀತ ಹಾಗೂ ರವಿಚಂದ್ರನ್ ಸಿ. ಅವರ ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು