AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ ದಿನಾಂಕ ಲಾಕ್​ ಮಾಡಿದ ‘ವೀರಂ’; ಮೇ 6ಕ್ಕೆ ಪ್ರಜ್ವಲ್​ ದೇವರಾಜ್​ ಸಿನಿಮಾ ಬಿಡುಗಡೆ

Veeram Movie Release Date: ಪ್ರಜ್ವಲ್​ ದೇವರಾಜ್, ರಚಿತಾ ರಾಮ್​ ಅಭಿನಯದ ‘ವೀರಂ’ ಸಿನಿಮಾ ಮೇ 6ರಂದು ರಿಲೀಸ್​ ಆಗಲಿದೆ. ಈ ಚಿತ್ರದಲ್ಲಿ ವಿಷ್ಣುವರ್ಧನ್​ ಅಭಿಮಾನಿಯಾಗಿ ಪ್ರಜ್ವಲ್​​ ಕಾಣಿಸಿಕೊಳ್ಳಲಿದ್ದಾರೆ.

ರಿಲೀಸ್​ ದಿನಾಂಕ ಲಾಕ್​ ಮಾಡಿದ ‘ವೀರಂ’; ಮೇ 6ಕ್ಕೆ ಪ್ರಜ್ವಲ್​ ದೇವರಾಜ್​ ಸಿನಿಮಾ ಬಿಡುಗಡೆ
ಪ್ರಜ್ವಲ್​ ದೇವರಾಜ್​, ನಿರ್ದೇಶಕ ಕುಮಾರ್​ ರಾಜ್​, ನಿರ್ಮಾಪಕ ಶಶಿಧರ್​ ಕೆ.ಎಂ.
TV9 Web
| Edited By: |

Updated on: Jan 27, 2022 | 12:06 PM

Share

ಎಲ್ಲ ಭಾಷೆಯ ಚಿತ್ರರಂಗದಲ್ಲೂ ಈಗ ರಿಲೀಸ್​ ದಿನಾಂಕಕ್ಕಾಗಿ ಪೈಪೋಟಿ ಶುರುವಾಗಿದೆ. ಸೂಕ್ತ ಸಮಯದಲ್ಲಿ ತಮ್ಮ ಸಿನಿಮಾವನ್ನು ರಿಲೀಸ್​ ಮಾಡಬೇಕಾದ ಸವಾಲು ಎಲ್ಲ ನಿರ್ಮಾಪಕರ ಎದುರಿಗಿದೆ. ಕೊರೊನಾ ಮೂರನೇ ಅಲೆ ಹಾವಳಿಯಿಂದಾಗಿ ಚಿತ್ರೋದ್ಯಮದಲ್ಲಿ ಮತ್ತೆ ಅನಿಶ್ಚಿತತೆ ಶುರುವಾಯಿತು. ಅನೇಕ ದೊಡ್ಡ ದೊಡ್ಡ ಸಿನಿಮಾಗಳು ತಮ್ಮ ರಿಲೀಸ್​ ಡೇಟ್​ ಮುಂದೂಡಿಕೊಂಡವು. ‘ರಾಧೆ ಶ್ಯಾಮ್​’, ‘ಆರ್​ಆರ್​ಆರ್​’, ‘ಆಚಾರ್ಯ’ ರೀತಿಯ ಬಿಗ್​ ಬಜೆಟ್​ ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದ್ದರಿಂದ ಇತರೆ ಸಿನಿಮಾಗಳ ಮೇಲೆ ಪರಿಣಾಮ ಬೀರಿತು. ಅದರ ನಡುವೆಯೂ ಅನೇಕ ಸಿನಿಮಾಗಳು ಸೂಕ್ತ ಬಿಡುಗಡೆ ದಿನಾಂಕವನ್ನು ಲಾಕ್​ ಮಾಡಿಕೊಳ್ಳುತ್ತಿವೆ. ಪ್ರಜ್ವಲ್​ ದೇವರಾಜ್​ (Prajwal Devaraj) ನಟನೆಯ ‘ವೀರಂ’ ಸಿನಿಮಾ ಕೂಡ ಕೂಡ ತೆರೆಕಾಣಲು ಸಜ್ಜಾಗಿದೆ. ಮೇ 6ರಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಿಸಿದ್ದಾರೆ. ಈ ಚಿತ್ರಕ್ಕೆ ಶಶಿಧರ್​ ಕೆ.ಎಂ. ಬಂಡವಾಳ ಹೂಡಿದ್ದಾರೆ. ಕುಮಾರ್​ ರಾಜ್​ ನಿರ್ದೇಶನ ಮಾಡಿದ್ದಾರೆ. ಭಿನ್ನ ಗೆಟಪ್​ನಲ್ಲಿ ಪ್ರಜ್ವಲ್​ ದೇವರಾಜ್​ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಟೀಸರ್​ ಮತ್ತು ಪೋಸ್ಟರ್​ಗಳ ಮೂಲಕ ‘ವೀರಂ’ (Veeram Kannada Movie) ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಪ್ರಜ್ವಲ್​ಗೆ ರಚಿತಾ ರಾಮ್ (Rachita Ram)​ ಜೋಡಿ.

ಅನೇಕ ರಾಜ್ಯಗಳ ಚಿತ್ರಮಂದಿರಗಳಲ್ಲಿ ಇನ್ನೂ 50-50 ಆಕ್ಯುಪೆನ್ಸಿ ನಿಯಮ ಜಾರಿಯಲ್ಲಿದೆ. ಕೊರೊನಾ ಪಾಟಿಸಿವ್​ ಪ್ರಕರಣಗಳ ಸಂಖ್ಯೆ ಇಳಿಮುಖ ಆದ ನಂತರವೇ ಶೇ.100ರಷ್ಟು ಆಸನಭರ್ತಿಗೆ ಅವಕಾಶ ಸಿಗಲಿದೆ. ಆ ರೀತಿ ಸಹಜ ವಾತಾವರಣ ನಿರ್ಮಾಣ ಆಗಲು ಇನ್ನೂ ಒಂದಷ್ಟು ದಿನ ಕಾಯಬೇಕಿರುವುದು ಅನಿವಾರ್ಯ. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ‘ವೀರಂ’ ಸಿನಿಮಾ ರಿಲೀಸ್​ ಡೇಟ್​ ಘೋಷಿಸಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದರೆ ಮೇ 6ರಂದು ಅದ್ದೂರಿಯಾಗಿ ಈ ಸಿನಿಮಾ ಬಿಡುಗಡೆ ಆಗಲಿದೆ.

ಈ ಸಿನಿಮಾದಲ್ಲಿ ವಿಷ್ಣುವರ್ಧನ್​ ಅಭಿಮಾನಿಯಾಗಿ ಪ್ರಜ್ವಲ್​ ದೇವರಾಜ್​ ಕಾಣಿಸಿಕೊಳ್ಳಲಿದ್ದಾರೆ. ಹೀರೋ ಕೈ ಮೇಲೆ ಇರುವ ವಿಷ್ಣು ದಾದಾ ಟ್ಯೂಟೂ ಸಖತ್ ಹೈಲೈಟ್​ ಆಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಚಿತಾ ರಾಮ್​ ನಟಿಸಿದ್ದಾರೆ. ಹಿರಿಯ ಕಲಾವಿದೆ ಶ್ರುತಿ ಕೂಡ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಶಿಷ್ಯ ದೀಪಕ್​, ಶ್ರೀನಗರ ಕಿಟ್ಟಿ, ಅಚ್ಯುತ್​ ಕುಮಾರ್​ ಮುಂತಾದವರಿಂದಾಗಿ ಈ ಸಿನಿಮಾದ ಪಾತ್ರವರ್ಗ ಹಿರಿದಾಗಿದೆ. ಸದ್ಯ ಈ ಸಿನಿಮಾಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸ ನಡೆಯುತ್ತಿದೆ.

ಲವಿತ್​ ಛಾಯಾಗ್ರಹಣ, ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ, ರವಿಚಂದ್ರನ್​ ಸಂಕಲನ, ಡಿಫರೆಂಡ್​ ಡ್ಯಾನಿ ಸಾಹಸ ನಿರ್ದೇಶನ ‘ವೀರಂ’ ಚಿತ್ರಕ್ಕಿದೆ. ಈ ಹಿಂದೆ ‘ಡಾಟರ್​ ಆಫ್​ ಪಾರ್ವತಮ್ಮ’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಶಶಿಧರ್​ ಕೆ.ಎಂ. ಅವರು ‘ವೀರಂ’ ಚಿತ್ರವನ್ನು ಪಕ್ಕಾ ಮಾಸ್​ ಶೈಲಿಯಲ್ಲಿ ನಿರ್ಮಿಸಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಸಿನಿಮಾ ನೋಡಲು ಪ್ರಜ್ವಲ್​ ದೇವರಾಜ್​ ಫ್ಯಾನ್ಸ್​ ಕಾಯುತ್ತಿದ್ದಾರೆ. ನಿರ್ಮಾಪಕ ಶಶಿಧರ್​ ಅವರಿಗೆ ನಿರ್ದೇಶನದಲ್ಲೂ ಆಸಕ್ತಿ ಇದೆ. ಅವರ ನಿರ್ದೇಶನದಲ್ಲಿ ‘ಶುಗರ್​ ಲೆಸ್​’ ಸಿನಿಮಾ ಮೂಡಿಬರುತ್ತಿದ್ದು, ಶೀಘ್ರದಲ್ಲೇ ಅದರ ರಿಲೀಸ್​ ಡೇಟ್​ ಕೂಡ ಘೋಷಣೆ ಆಗಲಿದೆ.

ಇದನ್ನೂ ಓದಿ:

ರಿಲೀಸ್​ ಡೇಟ್​ ಮುಂದೂಡಿಕೊಂಡ ‘ಗಜಾನನ ಆ್ಯಂಡ್​ ಗ್ಯಾಂಗ್​’; ಚಿತ್ರತಂಡ ನೀಡಿದ ಕಾರಣ ಏನು?

ಪುನೀತ್​ ನಟನೆಯ ‘ಜೇಮ್ಸ್​’ ಶೂಟಿಂಗ್​ ಮುಕ್ತಾಯ; ರಿಲೀಸ್​ ಡೇಟ್​ ತಿಳಿಯಲು ಕಾದಿರುವ ಅಭಿಮಾನಿಗಳು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್