Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಹುಟ್ಟುಹಬ್ಬಕ್ಕೆ ಗಣ ಟೀಸರ್ ಬಿಡುಗಡೆ: ಇದು ಭೂತ-ಭವಿಷ್ಯದ ಸಿನಿಮಾ

Prajwal Devaraj: ನಟ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾ 'ಗಣ' ಟೀಸರ್ ಬಿಡುಗಡೆ ಆಗಿದೆ. ಇದು ಭೂತ-ಭವಿಷ್ಯದ ಸಿನಿಮಾ.

ಪ್ರಜ್ವಲ್ ಹುಟ್ಟುಹಬ್ಬಕ್ಕೆ ಗಣ ಟೀಸರ್ ಬಿಡುಗಡೆ: ಇದು ಭೂತ-ಭವಿಷ್ಯದ ಸಿನಿಮಾ
ಪ್ರಜ್ವಲ್ ದೇವರಾಜ್-ಗಣ
Follow us
ಮಂಜುನಾಥ ಸಿ.
|

Updated on: Jul 04, 2023 | 6:30 PM

ನಟ ಪ್ರಜ್ವಲ್ ದೇವರಾಜ್ (Prajwal Devaraj) ಇಂದು ಹುಟ್ಟುಹಬ್ಬದ (Birthday) ಸಂಭ್ರಮದಲ್ಲಿದ್ದಾರೆ. ವರ್ಷಗಳ ಬಳಿಕ ಮತ್ತೆ ತಮ್ಮ ಅಭಿಮಾನಿಗಳೊಟ್ಟಿಗೆ ಇಂದು ಹುಟ್ಟುಹಬ್ಬ ಆಚರಸಿಕೊಂಡಿದ್ದಾರೆ. ಪ್ರಜ್ವಲ್​ರ ಹುಟ್ಟುಹಬ್ಬದ ದಿನ ಅವರ ಸಿನಿಮಾಗಳ ಅಪ್​ಡೇಟ್​ಗಳು ಹೊರಬಿದ್ದಿವೆ. ಅದರಲ್ಲಿ ಅವರ ಮುಂದಿನ ಸಿನಿಮಾ ಗಣದ ಟೀಸರ್ (Teaser) ಸಹ ಒಂದು. ಭೂತಕಾಲ-ಭವಿಷ್ಯತ್ ಹೀಗೆ ಭಿನ್ನ ಕಥಾಹೊಂದಿರುವ ಸಿನಿಮಾ ಇದಾಗಿದೆ ಎಂಬ ಸುಳಿವು ಟೀಸರ್​ನಲ್ಲಿದೆ.

ಪ್ರಜ್ವಲ್​ರ ಮುಂದಿನ ಸಿನಿಮಾ ಗಣ ಟೀಸರ್ ಅನ್ನು ಪ್ರಜ್ವಲ್ ಅವರ ತಾಯಿ ಚಂದ್ರಲೇಖ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಪ್ರಜ್ವಲ್​ರ ತಂದೆ ಡೈನಮಿಕ್ ಸ್ಟಾರ್ ದೇವರಾಜ್, ರಾಗಿಣಿ ಪ್ರಜ್ವಲ್ ಹಾಗೂ ಪ್ರಣಾಮ್ ದೇವರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟೀಸರ್ ಬಿಡುಗಡೆ ನಿಮಿತ್ತ ಆಯೋಜಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮಾತು ಪ್ರಾರಂಭ ಮಾಡಿದ ಪಾರ್ಥು, ”ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೆ. ನನಗೆ ಕನ್ನಡ ಚಿತ್ರ ನಿರ್ಮಾಣ ಮಾಡಬೇಕು ಅನಿಸಿತು, ಹಾಗಾಗಿ “ಗಣ” ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ಸೋಶಿಯಲ್ ಮೀಡಿಯಾದಲ್ಲಿ ನಾನು ಪ್ರಜ್ವಲ್ ಅವರನ್ನು ಫಾಲೋ ಮಾಡುತ್ತಿದ್ದೆ‌. ಅವರ ಅಭಿಮಾನಿಗಳು ಎಂಥಹಾ ಸಿನಿಮಾದ ನಿರೀಕ್ಷೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಐಡಿಯಾ ಇದೆ. ಈಗ ಗಣ ಮೂಲಕ ಅದೇ ತರಹದ ಚಿತ್ರ ಮಾಡಿದ್ದೇವೆ. ಶೂಟಿಂಗ್ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ನಡೆಯುತ್ತಿದೆ. ಈವರೆಗೂ ಪ್ರಜ್ವಲ್ ದೇವರಾಜ್ ಅವರು ಮಾಡಿರದ ಪಾತ್ರ ಗಣ ಸಿನಿಮಾದಲ್ಲಿ ಮಾಡಿದ್ದಾರೆ. ಹರಿಪ್ರಾಸಾದ್ ಜಕ್ಕ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ನಾನು ಸಹ ಸಿನಿಮಾದಲ್ಲಿ ನಟಿಸಿದ್ದೀನಿ ಎಂದರು.

ಇದನ್ನೂ ಓದಿ:ಅಭಿಮಾನಿಗಳನ್ನು ಮನೆಗೆ ಆಹ್ವಾನಿಸಿದ ನಟ ಪ್ರಜ್ವಲ್ ದೇವರಾಜ್: ಕಾರಣ?

ಪ್ರಜ್ವಲ್ ದೇವರಾಜ್ ಮಾತನಾಡಿ, ಕನ್ನಡದ ಕಲಾವಿದರು ಹಾಗೂ ತಂತ್ರಜ್ಞರ ಜೊತೆ ಸಿನಿಮಾ ಮಾಡಬೇಕೆಂಬ ಆಸೆಯಿಂದ ಬಂದಿರವ ನಿರ್ಮಾಪಕ ಪಾರ್ಥು ಅವರಿಗೆ ಅಭಿನಂದನೆ ತಿಳಿಸಿದರು. ””ಗಣ” ನಾನು ಈವರೆಗೂ ಮಾಡಿರುವ ಸಿನಿಮಾಗಳಲ್ಲೇ ಬೇಗ ಚಿತ್ರೀಕರಣ ಮುಗಿದಿರುವ ಸಿನಿಮಾ. ಹಾಗೂ ಭಿನ್ನವಾದ ಜಾನರ್ ಕತೆಯುಳ್ಳ ಸಿನಿಮಾ ಸಹ. 1993 ಹಾಗೂ 2023 ಎರಡು ಕಾಲಘಟ್ಟದಲ್ಲಿ ಈ ಕಥೆ ನಡೆಯುತ್ತದೆ‌. ಸಮಯದ ಜೊತೆ ಹೋರಾಡುವ ಕತೆ. ನನ್ನ ಜೊತೆ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕೆಲಸ ಬಹಳ ಅದ್ಭುತ. ನಮ್ಮ ಸಿನಿಮಾಕ್ಕೆ ಅಭಿಮಾನಿಗಳು ಪ್ರೇಕ್ಷಕರ ಪ್ರೋತ್ಸಾಹ ಇರಲಿ ಎಂದು ಹೇಳಿದರು.

ಗಣ ಸಿನಿಮಾದಲ್ಲಿ ನಟಿಸಿರುವ ಕೃಷಿ ತಾಪಂಡ, ವೇದಿಕ, ಮಾಸ್ಟರ್ ರಘುನಂದನ್, ಶಿವರಾಜ್ ಕೆ.ಆರ್ ಪೇಟೆ, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಕಲಾ ನಿರ್ದೇಶಕ ಸತೀಶ್, ಛಾಯಾಗ್ರಹಕ ಜೈ ಆನಂದ್, ಎಡಿಟರ್ ಹರೀಶ್ ಕೊಮ್ಮೆ ಹಾಗೂ ಗೋಪಿ ಅವರು “ಗಣ” ಸಿನಿಮಾ ಬಗ್ಗೆ ಮಾತನಾಡಿ ತಮ್ಮ ಮೆಚ್ಚುಗೆ ತಿಳಿಸಿದರು. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಶ್ರೀನಿವಾಸ್ ಚಿಕ್ಕಬಳ್ಳಾಪುರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ