AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ​ ನಮನ’ ಕಾರ್ಯಕ್ರಮಕ್ಕೆ ಒಂದು ಗಂಟೆ ಮೊದಲೇ ಆಗಮಿಸಿದ ಸ್ಟಾರ್​ಗಳು

2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

‘ಪುನೀತ​ ನಮನ’ ಕಾರ್ಯಕ್ರಮಕ್ಕೆ ಒಂದು ಗಂಟೆ ಮೊದಲೇ ಆಗಮಿಸಿದ ಸ್ಟಾರ್​ಗಳು
ಪ್ರಕಾಶ್​ ರಾಜ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 16, 2021 | 2:49 PM

Share

ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​. ಅವರ ಅಕಾಲಿಕ ಸಾವು ಸಾಕಷ್ಟು ಜನರಿಗೆ ನೋವು ತಂದಿದೆ. ಕನ್ನಡ ಚಿತ್ರರಂಗದ ಪರವಾಗಿ ಪುನೀತ್​ ಅವರಿಗೆ ನಮನ ಸಲ್ಲಿಸಲಾಗುತ್ತಿದೆ. ‘ಪುನೀತ ನಮನ’ ಕಾರ್ಯಕ್ರಮ ಇಂದು (ನವೆಂಬರ್​ 16) ಮಧ್ಯಾಹ್ನ 3 ಗಂಟೆಗೆ ಆರಂಭವಾಗುತ್ತಿದೆ. ಬೆಂಗಳೂರಿನ ಅರಮನೆ‌ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ‘ಪುನೀತ ನಮನ‌’ ಕಾರ್ಯಕ್ರಮ ನಡೆಯುತ್ತಿದೆ.   ಒಂದು ಗಂಟೆ ಮೊದಲೇ ಸ್ಟಾರ್​​ಗಳು ಆಗಮಿಸುತ್ತಿದ್ದಾರೆ. ಪ್ರಕಾಶ್​ ರಾಜ್​ ಸೇರಿ ಮೊದಲಾದ ಸ್ಟಾರ್​ಗಳು ಒಂದು ಗಂಟೆ ಮುಂಚಿತವಾಗಿ ಬಂದಿದ್ದಾರೆ.

2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಪಾಸ್​ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶವಿದೆ. ಕಾರ್ಯಕ್ರಮಕ್ಕೆ ಸುದೀಪ್, ಯಶ್, ಗಣೇಶ್, ಶಿವರಾಜ್​​ಕುಮಾರ್, ಉಪೇಂದ್ರ, ರವಿಚಂದ್ರನ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ‌ ಕನ್ನಡದ ಎಲ್ಲಾ ಕಲಾವಿದರು ಭಾಗಿ ಆಗುತ್ತಿದ್ದಾರೆ. ರಾಜಕೀಯ ರಂಗದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇಡೀ ಸಚಿವ ಸಂಪುಟ ಭಾಗವಹಿಸಲಿದೆ. ಮೂರು ಮಾಜಿ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ಮೈಸೂರಿನ‌ ಮಹಾರಾಜ ಯದುವೀರ್ ಅವರು ಕೂಡ ಬರಲಿದ್ದಾರೆ.

ಕಾರ್ಯಕ್ರಮ ಪಟ್ಟಿ

ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿಗೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಗೀತೆಯ ಮೂಲಕ ನಮನ ಕಾರ್ಯಕ್ರಮ ಆರಂಭ ಆಗುತ್ತದೆ. ವಿಜಯ್ ಪ್ರಕಾಶ್, ಗುರುಕಿರಣ್ ಹಾಗೂ ರಾಜೇಶ್ ಕೃಷ್ಣನ್ ಅವರಿಂದ ಗೀತ ನಮನ ನಡೆಯಲಿದೆ. ಮೂರು ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದೆ.\

ಸ್ಯಾಂಡಲ್​ವುಡ್​ ಮಂದಿಗೆ ಆಹ್ವಾನ

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ 142 ಕಲಾವಿದರಿಗೆ ಆಮಂತ್ರಣ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಅನಗತ್ಯವಾಗಿ ಅವ್ಯವಸ್ಥೆ ಆದರೆ ನಮ್ಮ ಇಲಾಖೆ ಹೊಣೆಯಲ್ಲ ಎಂಬ ಸೂಚನೆ ಪೊಲೀಸ್​ ಇಲಾಖೆಯಿಂದ ಬಂದಿದೆ.

ಇದನ್ನೂ ಓದಿ: ಪುನೀತ ನಮನಕ್ಕೆ ಪ್ರವೇಶವಿಲ್ಲದೆ ಬೇಸರಗೊಂಡಿದ್ದವರಿಗೆ ಹೊಸ ಸುದ್ದಿ; ಅಭಿಮಾನಿಗಳಿಗಾಗಿಯೇ ಪ್ರತ್ಯೇಕ ಕಾರ್ಯಕ್ರಮ- ಇಲ್ಲಿದೆ ಸಂಪೂರ್ಣ ಮಾಹಿತಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ