AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prakash Raj: ಭುಜದ ಶಸ್ತ್ರಚಿಕಿತ್ಸೆಯಿಂದ ದೊಡ್ಡ ನಷ್ಟ ಅನುಭವಿಸಿದ ಪ್ರಕಾಶ್​ ರೈ

ಟಾಲಿವುಡ್​ ನಟ ಅರುಣ್​ ವಿಜಯ್​ 33ನೇ ಚಿತ್ರಕ್ಕಾಗಿ ನಿರ್ದೇಶಕ ಹರಿ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಶೂಟಿಂಗ್​ ಕೂಡ ಆರಂಭಗೊಂಡಿದೆ. ಈ ಚಿತ್ರದಲ್ಲಿ ಪ್ರಕಾಶ್​ ರೈ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು.

Prakash Raj: ಭುಜದ ಶಸ್ತ್ರಚಿಕಿತ್ಸೆಯಿಂದ ದೊಡ್ಡ ನಷ್ಟ ಅನುಭವಿಸಿದ ಪ್ರಕಾಶ್​ ರೈ
ಪ್ರಕಾಶ್​ ರೈ
TV9 Web
| Edited By: |

Updated on: Aug 27, 2021 | 3:29 PM

Share

ಧನುಷ್​​ ನಟನೆಯ ಹೊಸ ಸಿನಿಮಾದಲ್ಲಿ ಪ್ರಕಾಶ್​ ರೈ​ ನಟಿಸುತ್ತಿದ್ದಾರೆ. ಆದರೆ, ಚಿತ್ರೀಕರಣದ ವೇಳೆ ಅವರು ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಹೀಗಾಗಿ, ಅವರು ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ, ಅವರು ವಿಶ್ರಾಂತಿಯಲ್ಲಿದ್ದಾರೆ. ಆದರೆ, ಇದರಿಂದ ಅವರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

ಟಾಲಿವುಡ್​ ನಟ ಅರುಣ್​ ವಿಜಯ್​ 33ನೇ ಚಿತ್ರಕ್ಕಾಗಿ ನಿರ್ದೇಶಕ ಹರಿ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಶೂಟಿಂಗ್​ ಕೂಡ ಆರಂಭಗೊಂಡಿದೆ. ಈ ಚಿತ್ರದಲ್ಲಿ ಪ್ರಕಾಶ್​ ರೈ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಅವರು ಚಿತ್ರತಂಡದಿಂದ ಹೊರ ನಡೆದಿದ್ದಾರೆ. ಸದ್ಯ ಪ್ರಕಾಶ್​ ರೈ​ಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಎಲ್ಲವೂ ಸರಿಯಾಗುವ ತನಕ ಒಂದಷ್ಟು ಸಮಯ ಹಿಡಿಯಲಿದೆ. ಅಲ್ಲದೆ, ಈಗ ಅವರು ಒಪ್ಪಿಕೊಂಡಿರುವ ಪ್ರಾಜೆಕ್ಟ್​ಗಳ ಶೂಟಿಂಗ್ ವಿಳಂಬವಾಗಲಿದ್ದು, ಅದನ್ನು ಮೊದಲು ಪೂರ್ಣಗೊಳಿಸಬೇಕಿದೆ. ಹೀಗಾಗಿ, ಇದಕ್ಕೆ ಸಾಕಷ್ಟು ಸಮಯ ಹಿಡಿಯಲಿದೆ. ಈ ಕಾರಣಕ್ಕೆ ಸಿನಿಮಾದಿಂದ ಹೊರಗೆ ಬರುವ ನಿರ್ಧಾರಕ್ಕೆ ಪ್ರಕಾಶ್​ ರೈ ಬಂದಿದ್ದಾರೆ.

ಪ್ರಕಾಶ್ ರೈಗೆ ಆರಂಭದಲ್ಲಿ ಕೆಲ ಕಮಿಟ್​ಮೆಂಟ್​ಗಳನ್ನು ಪೂರ್ಣಗೊಳಿಸುವ ಅನಿವಾರ್ಯತೆ ಇತ್ತು. ಈ ಕಾರಣಕ್ಕೆ ಅವರು ಅರುಣ್​ ವಿಜಯ್​ ಸಿನಿಮಾ ಸೆಟ್​ ಸೇರೋದು ವಿಳಂಬವಾಗಿತ್ತು. ಈ ಚಿತ್ರಕ್ಕಾಗಿ ಪ್ರಕಾಶ್​ ಅಡ್ವಾನ್ಸ್​ ಹಣ ಕೂಡ ಪಡೆದಿದ್ದರು. ಆದರೆ, ಈಗ ಅವರು ಗಾಯಗೊಂಡಿರುವುದರಿಂದ ಸಿನಿಮಾದಿಂದ ಹೊರಗೆ ಉಳಿಯುವುದು ಅನಿವಾರ್ಯ ಆಗಿದೆ. ಹೀಗಾಗಿ, ಈ ಅಡ್ವಾನ್ಸ್​ ಹಣವನ್ನು ಪ್ರಕಾಶ್​ ರೈ ಹಿಂದಿರುಗಿಸಬೇಕಿದೆ. ಈ ಕಾರಣದಿಂದ ಹಲವು ಸಿನಿಮಾ ಪ್ರಾಜೆಕ್ಟ್​ಗಳು ಅವರ ಕೈತಪ್ಪುವ ಸಾಧ್ಯತೆ ಇದೆ.

ಇತ್ತೀಚೆಗೆ ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಶಿಯೇಷನ್​ (MAA) ಚುನಾವಣೆ ಕಾರಣಕ್ಕಾಗಿ ಪ್ರಕಾಶ್​ ರೈ ಸುದ್ದಿ ಆಗಿದ್ದರು. MAA ಚುನಾವಣೆಯಲ್ಲಿ ಅವರು ಪ್ರೆಸಿಡೆಂಟ್​ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಆದರೆ ಅದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಪ್ರಕಾಶ್​ ರೈ ಅವರು ಮೂಲತಃ ತೆಲುಗು ಕಲಾವಿದ ಅಲ್ಲ. ಹಾಗಾಗಿ ಅವರು ಮಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತಕರಾರು ತೆಗೆಯಲಾಗಿದೆ. ಅದಕ್ಕೆ ಪ್ರಕಾಶ್​ ರೈ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

Prakash Raj: ಮಕ್ಕಳ ಎದುರಲ್ಲೇ ಪ್ರಕಾಶ್​ ರೈ ಮತ್ತೊಮ್ಮೆ ಮದುವೆ; ಇಲ್ಲಿವೆ ಖುಷಿಯ ಕ್ಷಣದ ಫೋಟೋಗಳು

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!