AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prakash Raj: ಭುಜದ ಶಸ್ತ್ರಚಿಕಿತ್ಸೆಯಿಂದ ದೊಡ್ಡ ನಷ್ಟ ಅನುಭವಿಸಿದ ಪ್ರಕಾಶ್​ ರೈ

ಟಾಲಿವುಡ್​ ನಟ ಅರುಣ್​ ವಿಜಯ್​ 33ನೇ ಚಿತ್ರಕ್ಕಾಗಿ ನಿರ್ದೇಶಕ ಹರಿ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಶೂಟಿಂಗ್​ ಕೂಡ ಆರಂಭಗೊಂಡಿದೆ. ಈ ಚಿತ್ರದಲ್ಲಿ ಪ್ರಕಾಶ್​ ರೈ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು.

Prakash Raj: ಭುಜದ ಶಸ್ತ್ರಚಿಕಿತ್ಸೆಯಿಂದ ದೊಡ್ಡ ನಷ್ಟ ಅನುಭವಿಸಿದ ಪ್ರಕಾಶ್​ ರೈ
ಪ್ರಕಾಶ್​ ರೈ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 27, 2021 | 3:29 PM

Share

ಧನುಷ್​​ ನಟನೆಯ ಹೊಸ ಸಿನಿಮಾದಲ್ಲಿ ಪ್ರಕಾಶ್​ ರೈ​ ನಟಿಸುತ್ತಿದ್ದಾರೆ. ಆದರೆ, ಚಿತ್ರೀಕರಣದ ವೇಳೆ ಅವರು ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಹೀಗಾಗಿ, ಅವರು ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ, ಅವರು ವಿಶ್ರಾಂತಿಯಲ್ಲಿದ್ದಾರೆ. ಆದರೆ, ಇದರಿಂದ ಅವರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

ಟಾಲಿವುಡ್​ ನಟ ಅರುಣ್​ ವಿಜಯ್​ 33ನೇ ಚಿತ್ರಕ್ಕಾಗಿ ನಿರ್ದೇಶಕ ಹರಿ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಶೂಟಿಂಗ್​ ಕೂಡ ಆರಂಭಗೊಂಡಿದೆ. ಈ ಚಿತ್ರದಲ್ಲಿ ಪ್ರಕಾಶ್​ ರೈ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಅವರು ಚಿತ್ರತಂಡದಿಂದ ಹೊರ ನಡೆದಿದ್ದಾರೆ. ಸದ್ಯ ಪ್ರಕಾಶ್​ ರೈ​ಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಎಲ್ಲವೂ ಸರಿಯಾಗುವ ತನಕ ಒಂದಷ್ಟು ಸಮಯ ಹಿಡಿಯಲಿದೆ. ಅಲ್ಲದೆ, ಈಗ ಅವರು ಒಪ್ಪಿಕೊಂಡಿರುವ ಪ್ರಾಜೆಕ್ಟ್​ಗಳ ಶೂಟಿಂಗ್ ವಿಳಂಬವಾಗಲಿದ್ದು, ಅದನ್ನು ಮೊದಲು ಪೂರ್ಣಗೊಳಿಸಬೇಕಿದೆ. ಹೀಗಾಗಿ, ಇದಕ್ಕೆ ಸಾಕಷ್ಟು ಸಮಯ ಹಿಡಿಯಲಿದೆ. ಈ ಕಾರಣಕ್ಕೆ ಸಿನಿಮಾದಿಂದ ಹೊರಗೆ ಬರುವ ನಿರ್ಧಾರಕ್ಕೆ ಪ್ರಕಾಶ್​ ರೈ ಬಂದಿದ್ದಾರೆ.

ಪ್ರಕಾಶ್ ರೈಗೆ ಆರಂಭದಲ್ಲಿ ಕೆಲ ಕಮಿಟ್​ಮೆಂಟ್​ಗಳನ್ನು ಪೂರ್ಣಗೊಳಿಸುವ ಅನಿವಾರ್ಯತೆ ಇತ್ತು. ಈ ಕಾರಣಕ್ಕೆ ಅವರು ಅರುಣ್​ ವಿಜಯ್​ ಸಿನಿಮಾ ಸೆಟ್​ ಸೇರೋದು ವಿಳಂಬವಾಗಿತ್ತು. ಈ ಚಿತ್ರಕ್ಕಾಗಿ ಪ್ರಕಾಶ್​ ಅಡ್ವಾನ್ಸ್​ ಹಣ ಕೂಡ ಪಡೆದಿದ್ದರು. ಆದರೆ, ಈಗ ಅವರು ಗಾಯಗೊಂಡಿರುವುದರಿಂದ ಸಿನಿಮಾದಿಂದ ಹೊರಗೆ ಉಳಿಯುವುದು ಅನಿವಾರ್ಯ ಆಗಿದೆ. ಹೀಗಾಗಿ, ಈ ಅಡ್ವಾನ್ಸ್​ ಹಣವನ್ನು ಪ್ರಕಾಶ್​ ರೈ ಹಿಂದಿರುಗಿಸಬೇಕಿದೆ. ಈ ಕಾರಣದಿಂದ ಹಲವು ಸಿನಿಮಾ ಪ್ರಾಜೆಕ್ಟ್​ಗಳು ಅವರ ಕೈತಪ್ಪುವ ಸಾಧ್ಯತೆ ಇದೆ.

ಇತ್ತೀಚೆಗೆ ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಶಿಯೇಷನ್​ (MAA) ಚುನಾವಣೆ ಕಾರಣಕ್ಕಾಗಿ ಪ್ರಕಾಶ್​ ರೈ ಸುದ್ದಿ ಆಗಿದ್ದರು. MAA ಚುನಾವಣೆಯಲ್ಲಿ ಅವರು ಪ್ರೆಸಿಡೆಂಟ್​ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಆದರೆ ಅದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಪ್ರಕಾಶ್​ ರೈ ಅವರು ಮೂಲತಃ ತೆಲುಗು ಕಲಾವಿದ ಅಲ್ಲ. ಹಾಗಾಗಿ ಅವರು ಮಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತಕರಾರು ತೆಗೆಯಲಾಗಿದೆ. ಅದಕ್ಕೆ ಪ್ರಕಾಶ್​ ರೈ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

Prakash Raj: ಮಕ್ಕಳ ಎದುರಲ್ಲೇ ಪ್ರಕಾಶ್​ ರೈ ಮತ್ತೊಮ್ಮೆ ಮದುವೆ; ಇಲ್ಲಿವೆ ಖುಷಿಯ ಕ್ಷಣದ ಫೋಟೋಗಳು

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ