AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prakash Raj: ಭುಜದ ಶಸ್ತ್ರಚಿಕಿತ್ಸೆಯಿಂದ ದೊಡ್ಡ ನಷ್ಟ ಅನುಭವಿಸಿದ ಪ್ರಕಾಶ್​ ರೈ

ಟಾಲಿವುಡ್​ ನಟ ಅರುಣ್​ ವಿಜಯ್​ 33ನೇ ಚಿತ್ರಕ್ಕಾಗಿ ನಿರ್ದೇಶಕ ಹರಿ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಶೂಟಿಂಗ್​ ಕೂಡ ಆರಂಭಗೊಂಡಿದೆ. ಈ ಚಿತ್ರದಲ್ಲಿ ಪ್ರಕಾಶ್​ ರೈ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು.

Prakash Raj: ಭುಜದ ಶಸ್ತ್ರಚಿಕಿತ್ಸೆಯಿಂದ ದೊಡ್ಡ ನಷ್ಟ ಅನುಭವಿಸಿದ ಪ್ರಕಾಶ್​ ರೈ
ಪ್ರಕಾಶ್​ ರೈ
TV9 Web
| Edited By: |

Updated on: Aug 27, 2021 | 3:29 PM

Share

ಧನುಷ್​​ ನಟನೆಯ ಹೊಸ ಸಿನಿಮಾದಲ್ಲಿ ಪ್ರಕಾಶ್​ ರೈ​ ನಟಿಸುತ್ತಿದ್ದಾರೆ. ಆದರೆ, ಚಿತ್ರೀಕರಣದ ವೇಳೆ ಅವರು ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಹೀಗಾಗಿ, ಅವರು ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ, ಅವರು ವಿಶ್ರಾಂತಿಯಲ್ಲಿದ್ದಾರೆ. ಆದರೆ, ಇದರಿಂದ ಅವರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

ಟಾಲಿವುಡ್​ ನಟ ಅರುಣ್​ ವಿಜಯ್​ 33ನೇ ಚಿತ್ರಕ್ಕಾಗಿ ನಿರ್ದೇಶಕ ಹರಿ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಶೂಟಿಂಗ್​ ಕೂಡ ಆರಂಭಗೊಂಡಿದೆ. ಈ ಚಿತ್ರದಲ್ಲಿ ಪ್ರಕಾಶ್​ ರೈ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಅವರು ಚಿತ್ರತಂಡದಿಂದ ಹೊರ ನಡೆದಿದ್ದಾರೆ. ಸದ್ಯ ಪ್ರಕಾಶ್​ ರೈ​ಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಎಲ್ಲವೂ ಸರಿಯಾಗುವ ತನಕ ಒಂದಷ್ಟು ಸಮಯ ಹಿಡಿಯಲಿದೆ. ಅಲ್ಲದೆ, ಈಗ ಅವರು ಒಪ್ಪಿಕೊಂಡಿರುವ ಪ್ರಾಜೆಕ್ಟ್​ಗಳ ಶೂಟಿಂಗ್ ವಿಳಂಬವಾಗಲಿದ್ದು, ಅದನ್ನು ಮೊದಲು ಪೂರ್ಣಗೊಳಿಸಬೇಕಿದೆ. ಹೀಗಾಗಿ, ಇದಕ್ಕೆ ಸಾಕಷ್ಟು ಸಮಯ ಹಿಡಿಯಲಿದೆ. ಈ ಕಾರಣಕ್ಕೆ ಸಿನಿಮಾದಿಂದ ಹೊರಗೆ ಬರುವ ನಿರ್ಧಾರಕ್ಕೆ ಪ್ರಕಾಶ್​ ರೈ ಬಂದಿದ್ದಾರೆ.

ಪ್ರಕಾಶ್ ರೈಗೆ ಆರಂಭದಲ್ಲಿ ಕೆಲ ಕಮಿಟ್​ಮೆಂಟ್​ಗಳನ್ನು ಪೂರ್ಣಗೊಳಿಸುವ ಅನಿವಾರ್ಯತೆ ಇತ್ತು. ಈ ಕಾರಣಕ್ಕೆ ಅವರು ಅರುಣ್​ ವಿಜಯ್​ ಸಿನಿಮಾ ಸೆಟ್​ ಸೇರೋದು ವಿಳಂಬವಾಗಿತ್ತು. ಈ ಚಿತ್ರಕ್ಕಾಗಿ ಪ್ರಕಾಶ್​ ಅಡ್ವಾನ್ಸ್​ ಹಣ ಕೂಡ ಪಡೆದಿದ್ದರು. ಆದರೆ, ಈಗ ಅವರು ಗಾಯಗೊಂಡಿರುವುದರಿಂದ ಸಿನಿಮಾದಿಂದ ಹೊರಗೆ ಉಳಿಯುವುದು ಅನಿವಾರ್ಯ ಆಗಿದೆ. ಹೀಗಾಗಿ, ಈ ಅಡ್ವಾನ್ಸ್​ ಹಣವನ್ನು ಪ್ರಕಾಶ್​ ರೈ ಹಿಂದಿರುಗಿಸಬೇಕಿದೆ. ಈ ಕಾರಣದಿಂದ ಹಲವು ಸಿನಿಮಾ ಪ್ರಾಜೆಕ್ಟ್​ಗಳು ಅವರ ಕೈತಪ್ಪುವ ಸಾಧ್ಯತೆ ಇದೆ.

ಇತ್ತೀಚೆಗೆ ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಶಿಯೇಷನ್​ (MAA) ಚುನಾವಣೆ ಕಾರಣಕ್ಕಾಗಿ ಪ್ರಕಾಶ್​ ರೈ ಸುದ್ದಿ ಆಗಿದ್ದರು. MAA ಚುನಾವಣೆಯಲ್ಲಿ ಅವರು ಪ್ರೆಸಿಡೆಂಟ್​ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಆದರೆ ಅದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಪ್ರಕಾಶ್​ ರೈ ಅವರು ಮೂಲತಃ ತೆಲುಗು ಕಲಾವಿದ ಅಲ್ಲ. ಹಾಗಾಗಿ ಅವರು ಮಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತಕರಾರು ತೆಗೆಯಲಾಗಿದೆ. ಅದಕ್ಕೆ ಪ್ರಕಾಶ್​ ರೈ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

Prakash Raj: ಮಕ್ಕಳ ಎದುರಲ್ಲೇ ಪ್ರಕಾಶ್​ ರೈ ಮತ್ತೊಮ್ಮೆ ಮದುವೆ; ಇಲ್ಲಿವೆ ಖುಷಿಯ ಕ್ಷಣದ ಫೋಟೋಗಳು

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ