Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಶಾಲ ವಿಶ್ವದ ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ’- ಪ್ರಕಾಶ್ ರಾಜ್

ಪ್ರಕಾಶ್ ರೈ ಟ್ವೀಟ್​ಗೆ ಅನೇಕರು ಉತ್ತರಿಸಿದ್ದಾರೆ. ‘ನಿಮ್ಮನ್ನು ಯಾರೂ ಕ್ಷಮಿಸುವುದಿಲ್ಲ. ನಿಮ್ಮ ಸ್ಪಷ್ಟನೆಯನ್ನೂ ನಾವು ಒಪ್ಪುವುದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಕೆಲವರು ಪ್ರಕಾಶ್ ಅವರನ್ನು ಕಪಟಿ ಎಂದು ಕರೆದಿದ್ದಾರೆ. ಅವರು ಸ್ಪಷ್ಟನೆ ಕೊಟ್ಟ ಬಳಿಕವೂ ಅವರ ಬಗ್ಗೆ ಟೀಕೆ ಮಾಡುವುದು ಸರಿ ಅಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ವಿಶಾಲ ವಿಶ್ವದ ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ’- ಪ್ರಕಾಶ್ ರಾಜ್
ಪ್ರಕಾಶ್ ರಾಜ್
Follow us
ರಾಜೇಶ್ ದುಗ್ಗುಮನೆ
|

Updated on:Aug 24, 2023 | 7:16 AM

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬಹುದೊಡ್ಡ ಸಾಧನೆ ಮಾಡಿದೆ. ‘ಚಂದ್ರಯಾನ 3’ ಮಿಷನ್ ಯಶಸ್ವಿಯಾಗಿಸಿದೆ. ಈ ಮೊದಲು ಅಮೆರಿಕ, ರಷ್ಯಾ ಹಾಗೂ ಚೀನಾ ದೇಶಗಳು ಚಂದ್ರನ ಮೇಲೆ ಕಾಲಿಟ್ಟಿದ್ದವು. ಈಗ ಭಾರತ ಕೂಡ ಚಂದ್ರನ ತಲುಪಿದೆ. ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಅನ್ನೋದು ಮತ್ತೊಂದು ಹೆಮ್ಮೆ. ಈ ಹೆಮ್ಮೆಯ ಕ್ಷಣವನ್ನು ಎಲ್ಲರೂ ಸಂಭ್ರಮಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ನಟ ಪ್ರಕಾಶ್ ರಾಜ್ (Prakash Raj)  ಕೂಡ ಈ ಬಗ್ಗೆ ಸಂತೋಷ ವ್ಯಕ್ಯಪಡಿಸಿದ್ದಾರೆ. ಕೆಲವರು ಅವರನ್ನು ಟೀಕಿಸಿದ್ದಾರೆ.

‘ಭಾರತದ, ಮನುಕುಲದ ಹೆಮ್ಮೆಯ ಕ್ಷಣಗಳಿವು. ಇಸ್ರೋ, ಚಂದ್ರಯಾನ 3 ಹಾಗೂ ವಿಕ್ರಮ್ ಲ್ಯಾಂಡರ್​ಗೆ ಹಾಗೂ ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.  ಇದನ್ನು ಅನೇಕರು ಟೀಕಿಸಿದ್ದಾರೆ.

‘ನಿಮ್ಮನ್ನು ಯಾರೂ ಕ್ಷಮಿಸುವುದಿಲ್ಲ. ನಿಮ್ಮ ಸ್ಪಷ್ಟನೆಯನ್ನೂ ನಾವು ಒಪ್ಪುವುದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಕೆಲವರು ಪ್ರಕಾಶ್ ಅವರನ್ನು ಕಪಟಿ ಎಂದು ಕರೆದಿದ್ದಾರೆ. ಅವರು ಸ್ಪಷ್ಟನೆ ಕೊಟ್ಟ ಬಳಿಕವೂ ಅವರ ಬಗ್ಗೆ ಟೀಕೆ ಮಾಡುವುದು ಸರಿ ಅಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ಕಥೆ

ಪ್ರಕಾಶ್ ರಾಜ್ ಅವರು ಇತ್ತೀಚೆಗೆ ಕಾರ್ಟೂನ್ ಒಂದನ್ನು ಹಂಚಿಕೊಂಡಿದ್ದರು. ಚಂದ್ರನ ಮೇಲೆ ವ್ಯಕ್ತಿಯೋರ್ವ ಚಹಾ ಮಾರುವ ರೀತಿಯಲ್ಲಿ ಈ ಕಾರ್ಟೂನ್ ಇತ್ತು. ‘ಚಂದ್ರಯಾನ 3’ ಯೋಜನೆಯನ್ನು ಪ್ರಕಾಶ್ ರೈ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟರು. ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಯಿತು. ಆದರೆ, ಇದರ ಹಿಂದಿರುವ ಕಥೆ ಏನು ಎಂಬುದನ್ನು ಅವರು ವಿವರಿಸಿದ್ದರು.

ಇದನ್ನೂ ಓದಿ: ‘ಚಂದ್ರಯಾನ 3’ ಬಗ್ಗೆ ಪ್ರಕಾಶ್​ ರಾಜ್​ ಮಾಡಿದ ಹಾಸ್ಯದ ಹಿಂದೆ ಬೇರೆಯದೇ ಕಥೆ ಇದೆ; ವಿವರಿಸಿದ ನಟ

ಅಮೆರಿಕದ ಗಗನಯಾತ್ರಿ ನೀಲ್​ ಆರ್ಮ್​ಸ್ಟ್ರಾಂಗ್ 1969ರಲ್ಲಿ ​​ಚಂದ್ರನಮೇಲೆ ಕಾಲಿಟ್ಟರು. ಆಗ ಒಂದು ಜೋಕ್ ವೈರಲ್ ಆಗಿತ್ತು. ನೀಲ್​ ಆರ್ಮ್​ಸ್ಟ್ರಾಂಗ್ ಚಂದ್ರನ ಮೇಲೆ ಕಾಲಿಟ್ಟಾಗ ಅಲ್ಲಿ ಮಲಯಾಳಿ ಒಬ್ಬರು ಚಹಾ ಮಾರುತ್ತಿದ್ದರಂತೆ! ಮಲಯಾಳಿಗಳು ಎಲ್ಲ ಕಡೆ ವ್ಯಾಪಾರ ಮಾಡುತ್ತಾರೆ ಎಂಬುದನ್ನು ಹಾಸ್ಯದ ರೀತಿಯಲ್ಲಿ ಹೇಳುವ ಕಾರ್ಟೂನ್ ಇದಾಗಿತ್ತು. ಇದನ್ನೇ ಪ್ರಕಾಶ್ ರೈ ಟ್ವೀಟ್ ಮಾಡಿದ್ದರು. ಆದರೆ, ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Thu, 24 August 23

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ