AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕನ್ನಡವನ್ನು ಅವಮಾನಿಸಿ ನಿಮ್ಮ ಭಾಷೆಯನ್ನು ಹೇರಿದರೆ ನಿಂತು ಹೋರಾಡುತ್ತೇನೆ’; ಎಚ್ಚರಿಕೆ ನೀಡಿದ ಪ್ರಕಾಶ್ ರಾಜ್

ನನ್ನ ಭಾಷೆಯನ್ನು ಹೇರುವುದಿಲ್ಲ. ಆದರೆ ನನ್ನ ಕನ್ನಡವನ್ನು ಅವಮಾನಿಸಿ ನಿಮ್ಮ ಭಾಷೆಯನ್ನು ಹೇರಿದರೆ ನಿಂತು ಹೋರಾಡುತ್ತೇನೆ ಎಂದು ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ.

‘ನನ್ನ ಕನ್ನಡವನ್ನು ಅವಮಾನಿಸಿ ನಿಮ್ಮ ಭಾಷೆಯನ್ನು ಹೇರಿದರೆ ನಿಂತು ಹೋರಾಡುತ್ತೇನೆ’; ಎಚ್ಚರಿಕೆ ನೀಡಿದ ಪ್ರಕಾಶ್ ರಾಜ್
ಪ್ರಕಾಶ್ ರಾಜ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 08, 2023 | 8:38 AM

Share

ಪ್ರಕಾಶ್ ರಾಜ್ (Prakash Raj) ಅವರು ನಟನೆಯ ಜೊತೆಗೆ ತಮ್ಮ ಸಿದ್ಧಾಂತಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ. ತಮಗೆ ಅನಿಸಿದ ವಿಚಾರಗಳನ್ನು ಅವರು ನೇರವಾಗಿ ಹಂಚಿಕೊಳ್ಳುತ್ತಾರೆ. ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ ಸರ್ಕಾರವನ್ನು ಅವರು ಟೀಕಿಸಿ ಸಾಕಷ್ಟು ಬಾರಿ ಸುದ್ದಿ ಆಗಿದ್ದೂ ಇದೆ. ಅವರಿಗೆ ಸಾಕಷ್ಟು ಭಾಷಾಭಿಮಾನ ಇದೆ. ಕರ್ನಾಟಕದ ಮೇಲಿನ ಹಿಂದಿ ಹೇರಿಕೆ ವಿರುದ್ಧ ಅವರು ಸಾಕಷ್ಟು ಬಾರಿ ಧ್ವನಿ ಎತ್ತಿದ್ದಾರೆ. ಈಗ ಪ್ರಕಾಶ್ ರಾಜ್ ಮತ್ತೊಮ್ಮೆ ಗುಡುಗಿದ್ದಾರೆ. ‘ನನ್ನ ಕನ್ನಡವನ್ನು ಅವಮಾನಿಸಿ ನಿಮ್ಮ ಭಾಷೆಯನ್ನು ಹೇರಿದರೆ ನಿಂತು ಹೋರಾಡುತ್ತೇನೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ನಕಾಶೆ ಒಳಗೆ ‘ನಂಗೆ ಹಿಂದಿ ಬರಲ್ಲ ಹೋಗ್ರಪ್ಪ’ ಎಂದು ಬರೆದುಕೊಂಡಿರುವ ಶರ್ಟ್​ನ ಪ್ರಕಾಶ್ ರಾಜ್ ಧರಿಸಿದ್ದಾರೆ. ಈ ಫೋಟೋನ ಸುಪ್ರೀಂಕೋರ್ಟ್ ವಕೀಲ ಶಶಾಂಕ್ ಶೇಖರ್ ಖಾ ಅವರು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಇದಕ್ಕೆ ಕ್ಯಾಪ್ಶನ್ ನೀಡಿರುವ ಅವರು, ‘ತಮಿಳುನಾಡು ಪೊಲೀಸರೇ ಪ್ರಕಾಶ್ ರಾಜ್ ವಿರುದ್ಧ ಎಫ್​ಐಆರ್​ ದಾಖಲು ಮಾಡಿಕೊಂಡಿದ್ದೀರೇ’ ಎಂದು ಪ್ರಶ್ನೆ ಮಾಡಿದ್ದಾರೆ. ಈ ಟ್ವೀಟ್​​ ವಿರುದ್ಧ ಪ್ರಕಾಶ್ ರಾಜ್ ಸಿಟ್ಟಾಗಿದ್ದಾರೆ.

ಇದನ್ನೂ ಓದಿ
Image
Bengaluru: ಪ್ರಾಣ ಫೌಂಡೇಷನ್​ನಿಂದ ಪ್ರಾಣಿಗಳಿಗೆ ಆಂಬ್ಯುಲೆನ್ಸ್ ಸೇವೆ, ಸಹಾಯವಾಣಿ ಆರಂಭ
Image
‘ಅರ್ಬನ್ ನಕ್ಸಲ್ಸ್​ಗೆ ನಿದ್ದೆ ಬರುತ್ತಿಲ್ಲ’; ‘ಬೊಗಳುತ್ತಾರೆ, ಕಚ್ಚಲ್ಲ’ ಎಂಬ ಪ್ರಕಾಶ್​ ರಾಜ್ ಹೇಳಿಕೆಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ
Image
‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’; ‘ಪಠಾಣ್​’ ಟೀಕಿಸಿದವರಿಗೆ ಪ್ರಕಾಶ್ ರಾಜ್ ತಿರುಗೇಟು

‘ನನ್ನ ಬೇರು.. ನನ್ನ ಮೂಲ ನನ್ನ ಕನ್ನಡ.. ನನ್ನ ತಾಯನ್ನು ಗೌರವಿಸದೆ ನಿನ್ನ ಹಿಂದಿಯನ್ನು ಹೇರಿದರೆ ನಾವು ಹೀಗೇ ಪ್ರತಿಭಟಿಸುತ್ತೇವೆ.. ಹೆದರೊಲ್ಲ, ಅಷ್ಟೇ’ ಎಂದು ಪ್ರಕಾಶ್ ರಾಜ್ ಅವರು ಶಶಾಂಕ್ ಶೇಖರ್​ ಟ್ವೀಟ್​ಗೆ ಉತ್ತರಿಸಿದ್ದಾರೆ. ನಂತರ ಮತ್ತೊಂದು ಟ್ವೀಟ್ ಮಾಡಿ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿ-ಹಿಂಡನ್​​ಬರ್ಗ್ ಪ್ರಕರಣ: ಪ್ರಧಾನಿ ನರೇಂದ್ರ ಮೋದಿ ಚಿತ್ರ ಹಂಚಿಕೊಳ್ಳುವ ಮೂಲಕ ಪ್ರಶ್ನೆ ಮಾಡಿದ ನಟ ಪ್ರಕಾಶ್ ರಾಜ್

‘ನಾನು ಏಳು ಭಾಷೆಗಳನ್ನು ಬಲ್ಲೆ. ಒಂದು ಭಾಷೆಯನ್ನು ಕಲಿತು ಮಾತನಾಡುವುದು ಎಂದರೆ ಆ ಭಾಷೆಯ ಜನರನ್ನು ಗೌರವಿಸುವುದು. ನಾನು ಹೋಗುವಲ್ಲೆಲ್ಲಾ ಆಯಾ ಭಾಷೆಯಲ್ಲಿ ಸಂವಾದಿಸುತ್ತೇನೆ. ನನ್ನ ಭಾಷೆಯನ್ನು ಹೇರುವುದಿಲ್ಲ. ಆದರೆ ನನ್ನ ಕನ್ನಡವನ್ನು ಅವಮಾನಿಸಿ ನಿಮ್ಮ ಭಾಷೆಯನ್ನು ಹೇರಿದರೆ ನಿಂತು ಹೋರಾಡುತ್ತೇನೆ’ ಎಂದು ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ. ಜೊತೆಗೆ ಹಿಂದಿ ಹೇರಿಕೆ ನಿಲ್ಲಿಸಿ ಎನ್ನುವ ಹ್ಯಾಶ್​​ಟ್ಯಾಗ್ ಹಾಕಿದ್ದಾರೆ.

ಪ್ರಕಾಶ್ ರಾಜ್ ಹೇಳಿಕೆಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಅವರು ಬಳಕೆ ಮಾಡಿದ ಪದ ಪ್ರಯೋಗದ ಬಗ್ಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನೂ ಕೆಲವರು ಪ್ರಕಾಶ್ ರಾಜ್ ಅವರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Prakash Raj: ‘ಬೇಷರಂ ರಂಗ್​’ ವಿವಾದ; ‘ಇದನ್ನೆಲ್ಲ ಎಲ್ಲಿಯವರೆಗೆ ಸಹಿಸಬೇಕು’ ಅಂತ ಪ್ರಶ್ನೆ ಮಾಡಿದ ಪ್ರಕಾಶ್​ ರಾಜ್​

ಪ್ರಕಾಶ್ ರಾಜ್ ಅವರು ವಿಲನ್ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಇದರ ಜೊತೆಗೆ ಪೋಷಕ ಪಾತ್ರಗಳ ಮೂಲಕವೂ ಅವರು ಇಷ್ಟ ಆಗುತ್ತಾರೆ. ಯಾವುದೇ ಚಿತ್ರರಂಗಕ್ಕೆ ತೆರಳಿದರೂ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಾರೆ. ಅವರು ಈಗಲೂ ದೊಡ್ಡ ಮಟ್ಟದ ಬೇಡಿಕೆ ಉಳಿಸಿಕೊಂಡಿದ್ದಾರೆ. ಪ್ರತಿ ಚಿತ್ರಕ್ಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಇತ್ತೀಚೆಗೆ ರೀಲೀಸ್ ಆದ ಅವರ ನಟನೆಯ ತಮಿಳು ಸಿನಿಮಾ ‘ವಾರಿಸು’ ಯಶಸ್ಸು ಕಂಡಿದೆ. ದಳಪತಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ