AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕಾಶ್ ರೈಗೆ ಇಷ್ಟವಾಯ್ತು ‘ಫೋಟೋ’ ಸಿನಿಮಾ; ಪ್ರೆಸೆಂಟ್ ಮಾಡಲು ಕಾರಣ ನೀಡಿದ ನಟ

ಡಾಲಿ ಧನಂಜಯ್ ಹಾಗೂ ಲೂಸಿಯಾ ಪವನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾಗೆ ಗೆಲುವು ಸಿಗಲಿ ಎಂದು ಹಾರೈಸಿದ್ದಾರೆ. ಪ್ರಕಾಶ್ ರೈ ಅವರಿಗೆ ಸಿನಿಮಾ ಇಷ್ಟ ಆಗಿದೆ. ಪ್ರಕಾಶ್ ರೈ ಅವರು ‘ನಿರ್ದಿಗಂತ’ ಬ್ಯಾನರ್ ಮೂಲಕ ಬೆಂಬಲವಾಗಿ ನಿಂತಿದ್ದಾರೆ. ‘ಮಸಾರಿ ಟಾಕೀಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗಿದೆ.

ಪ್ರಕಾಶ್ ರೈಗೆ ಇಷ್ಟವಾಯ್ತು ‘ಫೋಟೋ’ ಸಿನಿಮಾ; ಪ್ರೆಸೆಂಟ್ ಮಾಡಲು ಕಾರಣ ನೀಡಿದ ನಟ
ಪ್ರಕಾಶ್ ರೈ ಹಾಗೂ ತಂಡ
ರಾಜೇಶ್ ದುಗ್ಗುಮನೆ
|

Updated on: Feb 22, 2024 | 5:30 PM

Share

ಕನ್ನಡ ಚಿತ್ರರಂಗದಲ್ಲಿ ಪ್ರಯೋಗಗಳು ನಡೆಯುತ್ತಲೇ ಇವೆ. ಹೊಸ ತಂಡಗಳು ಚಿತ್ರರಂಗಕ್ಕೆ ಆಗಮನ ಆಗುತ್ತಲೇ ಇರುತ್ತದೆ. ಇದಕ್ಕೆ ಅನುಭವಿ ನಟರು ಹಾಗೂ ನಿರ್ದೇಶಕರು ಬೆಂಬಲ ನೀಡೋದು ನಡೆದು ಬಂದಿದೆ. ಈಗ ‘ಫೋಟೋ’ (Photo Movie) ಹೆಸರಿನ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರ ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆ ಪಡೆದಿತ್ತು. ಈ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಡಾಲಿ ಧನಂಜಯ್ ಹಾಗೂ ಲೂಸಿಯಾ ಖ್ಯಾತಿಯ ಪವನ್ ಕುಮಾರ್ ಈ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.

ಶ್ರೀರಂಗಪಟ್ಟದಲ್ಲಿ ಇರುವ ಪ್ರಕಾಶ್ ರಾಜ್ ಅವರ ನಿರ್ದಿಗಂತ ಫಾರಂ ಹೌಸ್​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ವೇಳೆ ಪ್ರಕಾಶ್ ರಾಜ್, ಪತ್ರಕರ್ತ ಜೋಗಿ, ನಿರ್ದೇಶಕ ಉತ್ಸವ್ ಗೋನವಾರ ಸೇರಿ ಇಡೀ ಚಿತ್ರತಂಡ ಇದರಲ್ಲಿ ಭಾಗಿ ಆಗಿತ್ತು. ಸಿನಿಮಾದ ಟ್ರೇಲರ್ ಬಗ್ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪ್ರಕಾಶ್ ರಾಜ್ ಅವರು ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಕಾರಣವಾದ ವಿಚಾರ ಏನು ಎಂಬುದನ್ನು ಅವರು ಹೇಳಿದ್ದಾರೆ. ‘ನಮ್ಮ ದೇಹಕ್ಕೆ ಆದ ಗಾಯ ವಾಸಿಯಾಗುತ್ತದೆ. ಆದರೆ, ಸಮಾಜಕ್ಕೆ ಆಗೋ ಗಾಯಗಳು ಹಾಗಲ್ಲ. ಅವು ಸುಮ್ಮನ್ನಿದ್ದಷ್ಟು ಹೆಚ್ಚುತ್ತವೆ. ಫೋಟೋ ಸಿನಿಮಾ ನೋಡಿ 15ರಿಂದ 20 ನಿಮಿಷ ಮಾತನಾಡಲು ಆಗಲೇ ಇಲ್ಲ. ಅಷ್ಟು ದುಃಖ ಬಂತು. ಇದು ನಾವು ಲಾಕ್​ಡೌನ್​ನಲ್ಲಿ ನೋಡಿದ ನೈಜ ಸ್ಥಿತಿ ಇದು. ಈ ನೋವುಗಳನ್ನು ದಾಖಲೆ ಮಾಡಬೇಕು ಎಂದು 21 ವರ್ಷದ ಹುಡುಗನಿಗೆ ಅನಿಸಿದ್ದನ್ನು ಮೆಚ್ಚಬೇಕು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಡಾಲಿ ಪಿಕ್ಚರ್ಸ್’ ಮೂಲಕ ಹೊಸ ಸುದ್ದಿ ನೀಡಿದ ಡಾಲಿ ಧನಂಜಯ್​

ಡಾಲಿ ಧನಂಜಯ್ ಹಾಗೂ ಲೂಸಿಯಾ ಪವನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾಗೆ ಗೆಲುವು ಸಿಗಲಿ ಎಂದು ಹಾರೈಸಿದ್ದಾರೆ. ಪ್ರಕಾಶ್ ರೈ ಅವರು ‘ನಿರ್ದಿಗಂತ’ ಬ್ಯಾನರ್ ಮೂಲಕ ಬೆಂಬಲವಾಗಿ ನಿಂತಿದ್ದಾರೆ. ‘ಮಸಾರಿ ಟಾಕೀಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗಿದೆ. ಮಹಾದೇವ ಹಡಪದ್, ಜಹಾಂಗೀರ್, ಸಂಧ್ಯಾ ಅರಕೆರೆ, ಮತ್ತು ವೀರೇಶ್ ಗೊನ್ವಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಛಾಯಾಗ್ರಹಣ, ರವಿ ಹಿರೇಮಠ್ ಹಿನ್ನೆಲೆ ಸಂಗೀತ, ಶಿವರಾಜ್ ಮೆಹೂ ಸಂಕಲನ ಮಾಡಿದ್ದಾರೆ. ಮಾರ್ಚ್ 15ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ