AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕಾಶ್ ರಾಜ್​ಗೆ ಮಾತೃವಿಯೋಗ ; ಅಮ್ಮನ ದೇವತೆಯಂತೆ ನೋಡುತ್ತಿದ್ದ ನಟ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು 85ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಪ್ರಕಾಶ್ ರಾಜ್ ದೇವತೆಯಂತೆ ಕಂಡ ತಾಯಿಯ ಬದುಕು ತ್ಯಾಗಮಯವಾಗಿತ್ತು. ಗದಗದವರಾದ ಸ್ವರ್ಣಲತಾ ಅವರು ಬಾಲ್ಯದಲ್ಲಿಯೇ ಅನಾಥರಾಗಿ ಬೆಳಗಾವಿ ಅನಾಥಾಶ್ರಮದಲ್ಲಿ ನರ್ಸಿಂಗ್ ತರಬೇತಿ ಪಡೆದು ಬೆಂಗಳೂರಿಗೆ ಬಂದು ನೆಲೆಸಿದ್ದರು.

ಪ್ರಕಾಶ್ ರಾಜ್​ಗೆ ಮಾತೃವಿಯೋಗ ; ಅಮ್ಮನ ದೇವತೆಯಂತೆ ನೋಡುತ್ತಿದ್ದ ನಟ
ಪ್ರಕಾಶ್ ರಾಜ್-ತಾಯಿ
ರಾಜೇಶ್ ದುಗ್ಗುಮನೆ
|

Updated on:Mar 30, 2026 | 11:44 AM

Share

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ತಾಯಿ ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಪ್ರಕಾಶ್ ರಾಜ್ ಅವರು ದೇವತೆಯಂತೆ ನೋಡುತ್ತಿದ್ದರು.

ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಗದಗದವರು. ಅವರ ಬಗ್ಗೆ ಈ ಮೊದಲು ಪ್ರಕಾಶ್ ರಾಜ್ ಮಾತನಾಡಿದ್ದರು. ‘ನನ್ನ ತಾಯಿ ಗದಗದವರು. ಅವರು ಅನಾಥೆ ಆಗಿದ್ದರು. ನನ್ನ ಅಜ್ಜಿ ತೀರಿಕೊಂಡಾಗ ಅಮ್ಮನಿಗೆ 12 ವರ್ಷ ವಯಸ್ಸು. ಬೆಳಗಾವಿಯ ಅನಾಥಾಶ್ರಾಮದಲ್ಲಿ ಬೆಳೆದರು. ನರ್ಸಿಂಗ್ ಟ್ರೇನಿಂಗ್ ಮಾಡಿ ಬೆಂಗಳೂರಿಗೆ ಬಂದರು’ ಎಂದಿದ್ದರು ಪ್ರಕಾಶ್ ರಾಜ್.

‘ನಮ್ಮ ಅಪ್ಪ ಮಂಗಳೂರಿನವರು. ಅವರು ಬೆಂಗಳೂರಿಗೆ ಬಂದರು. ಇಬ್ಬರೂ ಮದುವೆ ಆದರು. ನಮ್ಮ ಅಪ್ಪನಿಗೆ ಅವರದ್ದೇ ಆದ ನಂಬಿಕೆ ಇದೆ, ತಾಯಿಗೆ ಅವರದ್ದೇ ಆದ ದೇವರ ನಂಬಿಕೆ ಇದೆ. ನನ್ನ ನಂಬಿಕೆ ಬೇರೆಯದೇ ಇದೆ’ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದರು.

ತಾಯಿಯನ್ನು ದೇವತೆ ರೀತಿಯಲ್ಲಿ ಪ್ರಕಾಶ್ ರಾಜ್ ನೋಡಿಕೊಳ್ಳುತ್ತಿದ್ದರು. ‘ಎಲ್ಲರನ್ನೂ ಓದಿಸಿದ್ದಳು ನನ್ನ ಅಮ್ಮ. ಅವಳ ತ್ಯಾಗ ಅಮೂಲ್ಯವಾದುದು. ನನ್ನ ತಂದೆ ದುಡಿಯುತ್ತಾ ಇರಲಿಲ್ಲ. ತಂಗಿಯನ್ನು ಮದುವೆ ಮಾಡಿದ್ದು ಅವಳೇ.  ನನ್ನ ತಾಯಿ ದೇವರ ಮುಂದೆ ನಿಂತು ಜಗಳ ಆಡುತ್ತಿದ್ದಳು, ಪ್ರಾರ್ಥನೆ ಮಾಡುತ್ತಿದ್ದಳು’ ಎಂದು ಪ್ರಕಾಶ್ ರಾಜ್ ಹೇಳಿದ್ದರು. ಸ್ವರ್ಣಲತಾ ಮಾಡಿದ ತ್ಯಾಗ ನೋಡಿ ಪ್ರಕಾಶ್ ಅವರಿಗೆ ತಾಯಿ ದೇವತೆ ರೀತಿಯೇ ಕಾಣುತ್ತಿದ್ದರು.

ಇದನ್ನೂ ಓದಿ: ಜಗಳ ಆಡಿ ಖ್ಯಾತ ನಿರ್ದೇಶಕನ ಸಿನಿಮಾದಿಂದ ಹೊರ ನಡೆದ ಪ್ರಕಾಶ್ ರಾಜ್? 

ಪ್ರಕಾಶ್ ರಾಜ್ 1965 ಮಾರ್ಚ್ 26ರಂದು ಜನಿಸಿದರು. ಅವರ ತಂದೆ ಹೆಸರು ಮಂಜುನಾಥ್. 2000 ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಪ್ರಕಾಶ್ ರಾಜ್ ನಟಿಸಿದ್ದಾರೆ . ಕನ್ನಡ, ತೆಲುಗು, ತಮಿಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ಪ್ರಕಾಶ್ ರಾಜ್ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:41 am, Mon, 30 March 26

Follow Us
ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ
ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ
ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಆಟೋವನ್ನು ಮಾಡಿದ್ದೇನು ನೋಡಿ!
ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಆಟೋವನ್ನು ಮಾಡಿದ್ದೇನು ನೋಡಿ!
ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ
ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ
ಮೈಜುಮ್ಮೆನ್ನಿಸುವ ವಿಡಿಯೋ: ಬೃಹತ್ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು!
ಮೈಜುಮ್ಮೆನ್ನಿಸುವ ವಿಡಿಯೋ: ಬೃಹತ್ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು!
ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ
ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ
VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ
VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್