‘ಜಲಂಧರ’ ಚಿತ್ರದ ಹಾಡುಗಳು ‘ಜಂಕಾರ್ ಮ್ಯೂಸಿಕ್’ ತೆಕ್ಕೆಗೆ; ಇದು ಪ್ರಮೋದ್ ಶೆಟ್ಟಿ ಸಿನಿಮಾ

ಪ್ರಮೋದ್ ಶೆಟ್ಟಿ, ಸ್ಟೆಪ್ ಅಫ್ ಲೋಕಿ, ಋಷಿಕಾ ರಾಜ್, ಆರೋಹಿತಾ ಗೌಡ ಮುಂತಾದವರು ‘ಜಲಂಧರ’ ಸಿನಿಮಾದಲ್ಲಿ ನಟಿಸಿದ್ದಾರೆ. ವಿಷ್ಣು ವಿ. ಪ್ರಸನ್ನ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಆಡಿಯೋ ರೈಟ್ಸ್​ ಮಾರಾಟದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ‘ಜಲಂಧರ’ ಸಿನಿಮಾದ ಹಾಡುಗಳು ‘ಜಂಕಾರ್ ಮ್ಯೂಸಿಕ್’ ಸಂಸ್ಥೆಯ ಪಾಲಾಗಿವೆ.

‘ಜಲಂಧರ’ ಚಿತ್ರದ ಹಾಡುಗಳು ‘ಜಂಕಾರ್ ಮ್ಯೂಸಿಕ್’ ತೆಕ್ಕೆಗೆ; ಇದು ಪ್ರಮೋದ್ ಶೆಟ್ಟಿ ಸಿನಿಮಾ
ಋಷಿಕಾ ರಾಜ್, ಪ್ರಮೋದ್​ ಶೆಟ್ಟಿ
Follow us
|

Updated on: Oct 13, 2024 | 9:24 PM

ಸ್ಯಾಂಡಲ್​ವುಡ್​ನಲ್ಲಿ ಹಾಡುಗಳು ಪ್ರೇಕ್ಷಕರ ಮನಗೆಲ್ಲುತ್ತಿವೆ. ಉತ್ತಮವಾದ ಹಾಡುಗಳ ಹಕ್ಕುಗಳನ್ನು ಪಡೆಯುವಲ್ಲಿ ಆಡಿಯೋ ಕಂಪನಿಗಳ ನಡುವೆ ಪೈಪೋಟಿ ಇದೆ. ಟೈಟಲ್​ ಮತ್ತು ಪಾತ್ರವರ್ಗದ ಕಾರಣದಿಂದ ನಿರೀಕ್ಷೆ ಮೂಡಿಸಿರುವ ‘ಜಲಂಧರ’ ಸಿನಿಮಾದ ಹಾಡುಗಳ ಬಗ್ಗೆ ಈಗಾಗಲೇ ಟಾಕ್​ ಶುರುವಾಗಿದೆ. ಈ ಸಿನಿಮಾದ ಆಡಿಯೋ ಹಕ್ಕಗಳನ್ನು ‘ಜಂಕಾರ್ ಆಡಿಯೋ’ ಸಂಸ್ಥೆ ಪಡೆದುಕೊಂಡಿದೆ. ಕನ್ನಡ ಚಿತ್ರರಂಗ ಟಾಪ್​ ಆಡಿಯೋ ಸಂಸ್ಥೆಗಳಲ್ಲಿ ಇದು ಕೂಡ ಒಂದಾಗಿದೆ. ‘ಜಲಂಧರ’ ಚಿತ್ರದ ಸಾಂಗ್ಸ್​ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

ಈ ವರ್ಷ ‘ಲಾಫಿಂಗ್ ಬುದ್ಧ’ ಸಿನಿಮಾದ ಮೂಲಕ ನಟ ಪ್ರಮೋದ್​ ಶೆಟ್ಟಿ ಅವರು ಹೀರೋ ಆಗಿ ಗಮನ ಸೆಳೆದರು. ಕನ್ನಡ ಚಿತ್ರರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರು ನಾಯಕನಾಗಿ ಅಭಿನಯಿಸಿರುವ ‘ಜಲಂಧರ’ ಸಿನಿಮಾನ್ನು ‘ಸ್ಟೆಪ್ ಅಪ್ ಪಿಕ್ಚರ್ಸ್’ ಮೂಲಕ ಮದನ್ ಎಸ್. ಅವರು ನಿರ್ಮಾಣ ಮಾಡುತ್ತಿದ್ದಾರೆ. ಹೂಡಿ ಚಂದ್ರಮೋಹನ್, ಸಿ.ಎಲ್. ರಮೇಶ್ ರಾಮಚಂದ್ರ ಮತ್ತು ಪದ್ಮನಾಭನ್ ಮಂಗುದೊಡ್ಡಿ ಅವರು ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

ಹಲವು ಸಿನಿಮಾಗಳಲ್ಲಿ ಕ್ರಿಯೇಟಿವ್ ಹೆಡ್ ಮತ್ತು ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಪಡೆದಿರುವ ವಿಷ್ಣು ವಿ. ಪ್ರಸನ್ನ ಅವರು ‘ಜಲಂಧರ’ ಚಿತ್ರಕ್ಕೆ ಚಿತ್ರಕಥೆ ಬರೆದು ಆ್ಯಕ್ಷನ್-ಕಟ್​ ಹೇಳಿದ್ದಾರೆ. ಶ್ಯಾಮ್ ಸುಂದರ್ ಹಾಗೂ ಅಕ್ಷಯ್ ಕುಮಾರ್ ಅವರು ಚಿತ್ರಕಥೆ ಬರವಣಿಗೆಯಲ್ಲಿ ಸಹಾಯ ಮಾಡಿದ್ದಾರೆ. ಕೇರಳ ಮೂಲದ ಸರಿನ್ ರವೀಂದ್ರನ್ ಹಾಗೂ ವಿದ್ಯಾ ಶಂಕರ್ ಪಿ.ಎಸ್. ಅವರು ಛಾಯಾಗ್ರಹಣ ಮಾಡಿದ್ದಾರೆ. ಜಿ. ಜತಿನ್ ದರ್ಶನ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು’ ಸಿನಿಮಾಗೆ ವೀರೇಂದ್ರ ಹೆಗ್ಗಡೆ ಬೆಂಬಲ

ವೆಂಕಿ ಯು.ಡಿ.ವಿ. ಅವರ ಸಂಕಲನ ಈ ಚಿತ್ರಕ್ಕಿದೆ. ಪ್ರಮೋದ್ ಶೆಟ್ಟಿ ಅವರ ಜೊತೆ ಇನ್ನೊಂದು ಪ್ರಮುಖ ಪಾತ್ರದಲ್ಲಿ ಸ್ಟೆಪ್ ಅಫ್ ಲೋಕಿ ಕೂಡ ನಟಿಸಿದ್ದಾರೆ. ಅವರಿಗೆ ರಂಗಭೂಮಿ ಹಿನ್ನೆಲೆ ಇದೆ. ಈ ಸಿನಿಮಾಗೆ ಕಥೆ ಬರೆದಿದ್ದು ಕೂಡ ಲೋಕಿ ಅವರೇ. ಶಿವರಾಜ್​ಕುಮಾರ್​ ನಟನೆಯ ‘ಟಗರು’ ಸಿನಿಮಾದ ಕಾನ್​ಸ್ಟೇಬಲ್ ಸರೋಜಾ ಎಂಬ ಪಾತ್ರದಲ್ಲಿ ಫೇಮಸ್​ ಆಗಿದ್ದ ನಟಿ ಋಷಿಕಾ ರಾಜ್ ಅವರು ಕೂಡ ‘ಜಲಂಧರ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಲರಾಜ್ ವಾಡಿ, ಆರೋಹಿತಾ ಗೌಡ, ರಘು ರಾಮನಕೊಪ್ಪ, ಪ್ರತಾಪ್ ನನಸು, ನವೀನ್ ಸಾಗರ್, ಆದಿ ಕೇಶವರೆಡ್ಡಿ, ವಿಜಯರಾಜ್, ಭೀಷ್ಮಾ ರಾಮಯ್ಯ, ಪ್ರಸಾದ್, ಅಂಬು ಅವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್