AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಫಿಂಗ್ ಬುದ್ಧ’ ಟ್ರೈಲರ್ ಬಿಡುಗಡೆ, ಇದು ಹೊಟ್ಟೆ ಪೊಲೀಸಪ್ಪನ ಕತೆ

ಪ್ರಮೋದ್ ಶೆಟ್ಟಿ ನಟಿಸಿ, ರಿಷಬ್ ಶೆಟ್ಟಿ ನಿರ್ದೇಶನ ಮಾಡಿರುವ ‘ಲಾಫಿಂಗ್ ಬುದ್ಧ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆ ದಿನಾಂಕ ಸಹ ಘೋಷಣೆ ಆಗಿದೆ.

‘ಲಾಫಿಂಗ್ ಬುದ್ಧ’ ಟ್ರೈಲರ್ ಬಿಡುಗಡೆ, ಇದು ಹೊಟ್ಟೆ ಪೊಲೀಸಪ್ಪನ ಕತೆ
ಮಂಜುನಾಥ ಸಿ.
|

Updated on: Aug 15, 2024 | 9:15 AM

Share

ಸರಳವಾದ ಕತೆಗುಳ್ಳ, ಒಂದು ಸೀಮಿತ ಪ್ರದೇಶಕ್ಕೆ ಮೀಸಲಾದ ಕತೆಯುಳ್ಳ ಸಿನಿಮಾಗಳು ಇತ್ತೀಚೆಗೆ ಗಮನ ಸೆಳೆಯುತ್ತಿವೆ. ವಿಶೇಷವಾಗಿ ಪರಭಾಷೆಯಲ್ಲಿ ಇಂಥಹಾ ಕತೆಗಳೇ ಹೆಚ್ಚು ಯಶಸ್ಸು ಕಾಣುತ್ತಿವೆ. ಕನ್ನಡದಲ್ಲಿಯೂ ಸಹ ‘ಬೆಲ್ ಬಾಟಮ್’, ‘ದೃಶ್ಯ’ ಇನ್ನಿತರೆ ಇದೇ ರೀತಿಯ ಸಿನಿಮಾಗಳು ಗೆದ್ದ ಉದಾಹರಣೆ ಸಾಕಷ್ಟಿವೆ. ಇದೀಗ ಇದೇ ರೀತಿಯ ಜಾನರ್​ನ, ಒಂದು ಪುಟ್ಟ ಊರು, ಆ ಊರಿನ ಪೊಲೀಸ್ ಠಾಣೆ, ಪೊಲೀಸ್ ಠಾಣೆಯ ಕಾನ್​ಸ್ಟೆಬಲ್​ಗಳು, ಅವರ ಸುತ್ತ ನಡೆಯುವ ಘಟನೆಗಳು ಇಂಥಹಾ ಸರಳ ಕತೆಯನ್ನು ಹೊಂದಿರುವ ಸಿನಿಮಾ ಒಂದು ಕನ್ನಡದಲ್ಲಿ ತೆರೆಗೆ ಬರಲು ಸಜ್ಜಾಗಿದೆ ಅದುವೇ ‘ಲಾಫಿಂಗ್ ಬುದ್ಧ’

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಗೆಳೆಯ ಪ್ರಮೋದ್ ಶೆಟ್ಟಿ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ‘ಲಾಫಿಂಗ್ ಬುದ್ಧ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಮಾತ್ರವಲ್ಲದೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ‘ಲಾಫಿಂಗ್ ಬುದ್ಧ’ ಸಿನಿಮಾ ಒಂದು ಸರಳವಾದ ಕತೆಯನ್ನು ಹೊಂದಿರುವ ಸಿನಿಮಾ. ದೊಡ್ಡ ದೇಹಾಕಾರದ ಆದರೆ ಸದಾ ಹಸನ್ಮುಖಿ ಪೊಲೀಸ್ ಕಾನ್​ಸ್ಟೆಬಲ್ ಒಬ್ಬರ ವೈಯಕ್ತಿಕ ಜೀವನ, ವೃತ್ತಿ ಜೀವನದಲ್ಲಿ ನಡೆಯುವ ಘಟನೆಗಳನ್ನು ಒಳಗೊಂಡ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಇದನ್ನೂ ಓದಿ:ಶಿವರಾಜ್ ಕುಮಾರ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ

ಸಿನಿಮಾದಲ್ಲಿ ಠೊಣಪ ಪೊಲೀಸ್ ಕಾನ್​ಸ್ಟೆಬಲ್ ಆಗಿ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ತಮ್ಮ ದಢೂತಿ ದೇಹದಿಂದ ತಮಾಷೆಗೆ ಒಳಪಡುವ ಮಾತ್ರವಲ್ಲದೆ, ಹಿರಿಯ ಅಧಿಕಾರಿಗಳಿಂದ ಟೀಕೆ, ನಿಂದನೆಗೆ ಗುರಿಯಾಗುವ ಕಾನ್​ಸ್ಟೆಬಲ್ ಆ ಬಳಿಕ ತನ್ನ ದೇಹ ಕರಗಿಸಲು ನಡೆಸುವ ಹೋರಾಟ ಅದರ ಮಧ್ಯೆ ಠಾಣೆಯಲ್ಲಿ ನಡೆಯುವ ಒಂದು ಭೀಕರ ಘಟನೆ ಅದರಿಂದ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿಯ ಮೇಲಾಗುವ ಪರಿಣಾಮ ಆ ಸಮಸ್ಯೆಯಿಂದ ಹೊರಬರಲು ಪ್ರಮೋದ್ ಶೆಟ್ಟರ ಪಾತ್ರ ಹಾಗೂ ಇತರೆ ಪೊಲೀಸ್ ಸಿಬ್ಬಂದಿ ಮಾಡುವ ಪ್ರಯತ್ನಗಳು ಇವನ್ನೆಲ್ಲ ತಮಾಷೆಯ ಲೇಪನದೊಂದಿಗೆ ಸಿನಿಮಾದಲ್ಲಿ ಹೇಳಲಾಗಿರುವುದು ಟ್ರೈಲರ್​ನಿಂದ ಗೊತ್ತಾಗುತ್ತಿದೆ.

ಪ್ರಮೋದ್ ಶೆಟ್ಟಿ ನಾಯಕ ನಟರಾಗಿ ನಟಿಸುತ್ತಿರುವ ಮೊದಲ ಸಿನಿಮಾ ಇದು. ಭರತ್ ರಾಜ್ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ವಿಷ್ಣು ವಿಜಯ್ ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಜೊತೆಗೆ ತೇಜು ಬೆಳವಾಡಿ, ಸುಂದರ್ ರಾಜ್ ಇನ್ನಿತರರು ನಟಿಸಿದ್ದಾರೆ. ಸಿನಿಮಾದಲ್ಲಿ ನಟ ದಿಗಂತ್ ಅತಿಥಿ ಪಾತ್ರದಲ್ಲಿ ನಟಿಸಿದ್ದು, ಸಿನಿಮಾಕ್ಕೆ ಟ್ವಿಸ್ಟ್ ಕೊಡುವುದು ಇವರದ್ದೇ ಪಾತ್ರ. ಸಿನಿಮಾ ಆಗಸ್ಟ್ 30ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?