Pramod Shetty: ರಿಷಬ್ ಶೆಟ್ಟಿ ಬಗ್ಗೆ ಯಾರಿಗೂ ಗೊತ್ತಿರದ ವಿಷಯ ಹಂಚಿಕೊಂಡ ಗೆಳೆಯ ಪ್ರಮೋದ್ ಶೆಟ್ಟಿ

Rishab Shetty: ರಿಷಬ್ ಶೆಟ್ಟಿ ಬಗ್ಗೆ ಯಾರಿಗೂ ತಿಳಿಯದ ವಿಷಯ ಹೇಳಿದ ಗೆಳೆಯ ಪ್ರಮೋದ್ ಶೆಟ್ಟಿ.

Pramod Shetty: ರಿಷಬ್ ಶೆಟ್ಟಿ ಬಗ್ಗೆ ಯಾರಿಗೂ ಗೊತ್ತಿರದ ವಿಷಯ ಹಂಚಿಕೊಂಡ ಗೆಳೆಯ ಪ್ರಮೋದ್ ಶೆಟ್ಟಿ
ರಿಷಬ್ ಶೆಟ್ಟಿ-ಪ್ರಮೋದ್ ಶೆಟ್ಟಿ
Follow us
|

Updated on: Jul 08, 2023 | 10:16 AM

ರಿಷಬ್ ಶೆಟ್ಟಿ (Rishab Shetty) ನಿನ್ನೆ (ಜುಲೈ 7) ಅದ್ಧೂರಿಯಾಗಿ ತಮ್ಮ ಅಭಿಮಾನಿಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ನಂದಿ ಲಿಂಕ್ ಗ್ರೌಂಡ್ಸ್​ನಲ್ಲಿ ಆಯೋಜಿಸಲಾಗಿದ್ದ ರಿಷಬ್​ರ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಹಲವು ಅಭಿಮಾನಿಗಳು ಆಗಮಿಸಿ ನೆಚ್ಚಿನ ನಟನಿಗೆ ಖುದ್ದಾಗಿ ಹುಟ್ಟುಹಬ್ಬದ ಶುಭಾಷಯಗಳನ್ನು ತಿಳಿಸಿದ್ದಾರೆ. ಇದೇ ಕಾರ್ಯಕ್ರಮದ ವೇದಿಕೆಯಲ್ಲಿ ರಿಷಬ್​ರ ಪತ್ನಿ ಪ್ರಗತಿ ಶೆಟ್ಟಿ, ರಿಷಬ್ ಶೆಟ್ಟಿ ಫೌಂಡೇಶನ್​ಗೆ (Rishab Shetty Foundation) ಚಾಲನೆ ನೀಡಿದ್ದು ವಿಶೇಷವಾಗಿತ್ತು. ಫೌಂಡೇಶನ್​ಗೆ ಚಾಲನೆ ನೀಡಿದ ಬೆನ್ನಲ್ಲೆ ಮೈಕ್ ಕೈಗೆತ್ತಿಕೊಂಡ ರಿಷಬ್​ರ ಆತ್ಮೀಯ ಗೆಳೆಯ ಪ್ರಮೋದ್ ಶೆಟ್ಟಿ (Pramod Shetty), ರಿಷಬ್​ ಬಗ್ಗೆ ಯಾರಿಗೂ ತಿಳಿಯದ ವಿಷಯವೊಂದನ್ನು ಹಂಚಿಕೊಂಡರು.

”ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು’ ಸಿನಿಮಾದ ಬಳಿಕ ರಿಷಬ್ ಶೆಟ್ಟಿ ಪ್ರಚಾರವಿಲ್ಲದೆ ಸರ್ಕಾರಿ ಶಾಲೆಗಳಿಗೆ ಸಹಾಯ ಮಾಡುತ್ತಾ ಬಂದಿದ್ದಾನೆ. ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾನೆ. ಶಿಕ್ಷಕರ ವ್ಯವಸ್ಥೆ ಮಾಡಿಕೊಟ್ಟಿದ್ದಾನೆ. ಆದರೆ ಇದ್ಯಾರಿಗೂ ಗೊತ್ತಿಲ್ಲ, ಯಾರಿಗೂ ಹೇಳಿಕೊಳ್ಳುವ ಜಾಯಮಾನವೂ ನಮ್ಮದಲ್ಲ. ಆದರೆ ನಾನು ಈ ಸತ್ಯವನ್ನು ಹೇಳಬಹುದು. ಆದರೆ ಈ ಎಲ್ಲ ಕಾರ್ಯಗಳಲ್ಲಿಯೂ ಒಂದು ಶಿಸ್ತು, ನಿಯಮಿತತೆ ತರಲೆಂದು ಫೌಂಡೇಶನ್ ಪ್ರಾರಂಭ ಮಾಡಿದ್ದೀವಿ” ಎಂದರು ಪ್ರಮೋದ್ ಶೆಟ್ಟಿ.

”ಪ್ರಗತಿ ಶೆಟ್ಟಿ ಅವರು ಫೌಂಡೇಶನ್ ಮಾಡುವ ಯೋಜನೆ ಹಾಕಿದರು. ನಾನೂ ಸಹ ಅದಕ್ಕೆ ಸಾಥ್ ಕೊಟ್ಟಿದ್ದೇನೆ. ನಮ್ಮ ಉದ್ದೇಶ ಅಗತ್ಯ ಮಕ್ಕಳಿಗೆ ಶಿಕ್ಷಣ ನೀಡುವುದು, ಸರ್ಕಾರೆ ಶಾಲೆಗಳ ಉನ್ನತೀಕರಣಕ್ಕೆ ಸಹಾಯ ಮಾಡುವುದು. ಕಾಡುಜನರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವುದು. ಯಾವುದಾದರೂ ಮಕ್ಕಳಿಗೆ ನಮ್ಮ ನೆರವಿನ ಅಗತ್ಯ ಬಿದ್ದರೆ ನಮ್ಮ ಗಮನಕ್ಕೆ ತನ್ನಿ ನಾವು ಅವರಿಗೆ ಸಹಾಯ ಮಾಡುತ್ತೇವೆ” ಎಂದರು ಪ್ರಮೋದ್ ಶೆಟ್ಟಿ.

ಇದನ್ನೂ ಓದಿ:Kantara Movie: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ತಲೆಯಲ್ಲಿ ಏನು ಓಡ್ತಿದೆ? ಪ್ರಮೋದ್​ ಶೆಟ್ಟಿ ಕೊಟ್ರು ಉತ್ತರ

ಮುಂದುವರೆದು, ”ಯಾವುದೋ ಫೌಂಡೇಶನ್ ಮಾಡಿದ್ದಾರೆ, ನಾನೂ ಮನೆಗೆ ಫೌಂಡೇಶನ್ ಹಾಕಿದ್ದೀನಿ, ರೂಫ್​ ಕಟ್ಟಲು ಹಣ ಕೊಡಿ ಎಂದೋ ಕುಡಿದು ಕಿಡ್ನಿ ಹಾಳಾಗಿದೆ ಹಣ ಕೊಡಿ ಎಂದೆಲ್ಲ ಮನೆಯ ಬಳಿ ಬರಬೇಡಿ, ನಾವು ಹಣ ಅಂಥಹದ್ದಕ್ಕೆಲ್ಲ ಹಣ ಕೊಡುವುದಿಲ್ಲ. ಅದಕ್ಕೆ ಸಹಾಯ ಮಾಡುವ ಬೇರೆ ಸಂಸ್ಥೆಗಳು ಇದ್ದಾವೆ. ನಾವು ಕೆಲಸ ಮಾಡಲು ಉದ್ದೇಶಿಸಿರುವುದು ಶಿಕ್ಷಣ ಕ್ಷೇತ್ರದಲ್ಲಿ. ಬಡಮಕ್ಕಳಿಗೆ ಶಿಕ್ಷಣ ಒದಗಿಸುವುದು ನಮ್ಮ ಫೌಂಡೇಶನ್​ನ ಉದ್ದೇಶ” ಎಂದರು.

ರಿಷಬ್ ಶೆಟ್ಟಿ ಫೌಂಡೇಶನ್ ಅನ್ನು ಪ್ರಗತಿ ಶೆಟ್ಟಿ ರಿಷಬ್​ರ ಹುಟ್ಟುಹಬ್ಬ ಆಯೋಜಿಸಿದ್ದ ವೇದಿಕೆಯಲ್ಲಿ ಅನಾವರಣ ಮಾಡಿದರು. ಮೊದಲಿನಿಂದಲೂ ನಮ್ಮ ಕೈಲಾದ ಸೇವೆ ಮಾಡುತ್ತಲೇ ಬಂದಿದ್ದೇವೆ ಆದರೆ ಅದನ್ನು ವ್ಯವಸ್ಥಿತ ರೀತಿಯಲ್ಲಿ ಮಾಡುವ ಉದ್ದೇಶಿದಿಂದ ಫೌಂಡೇಶನ್ ಪ್ರಾರಂಭಿಸಿದ್ದೇವೆ. ಸಮಾಜ ಸೇವೆ ರಿಷಬ್​ ಶೆಟ್ಟಿಯವರಿಗೆ ಖುಷಿ ಕೊಡುವ ಕೆಲಸ, ಹಾಗಾಗಿ ಅವರ ಹುಟ್ಟುಹಬ್ಬದಂದೇ ಈ ಉಡುಗೊರೆಯನ್ನು ಅವರಿಗೆ ನೀಡುತ್ತಿದ್ದೇವೆ. ದೇವರು ನಮಗೆ ಶಕ್ತಿ ಕೊಟ್ಟಷ್ಟು ದಿವಸ ನಾವು ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ಬಡಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್