Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shetty: ರಿಷಬ್ ಶೆಟ್ಟಿ ಬಗ್ಗೆ ಯಾರಿಗೂ ಗೊತ್ತಿರದ ವಿಷಯ ಹಂಚಿಕೊಂಡ ಗೆಳೆಯ ಪ್ರಮೋದ್ ಶೆಟ್ಟಿ

Rishab Shetty: ರಿಷಬ್ ಶೆಟ್ಟಿ ಬಗ್ಗೆ ಯಾರಿಗೂ ತಿಳಿಯದ ವಿಷಯ ಹೇಳಿದ ಗೆಳೆಯ ಪ್ರಮೋದ್ ಶೆಟ್ಟಿ.

Pramod Shetty: ರಿಷಬ್ ಶೆಟ್ಟಿ ಬಗ್ಗೆ ಯಾರಿಗೂ ಗೊತ್ತಿರದ ವಿಷಯ ಹಂಚಿಕೊಂಡ ಗೆಳೆಯ ಪ್ರಮೋದ್ ಶೆಟ್ಟಿ
ರಿಷಬ್ ಶೆಟ್ಟಿ-ಪ್ರಮೋದ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on: Jul 08, 2023 | 10:16 AM

ರಿಷಬ್ ಶೆಟ್ಟಿ (Rishab Shetty) ನಿನ್ನೆ (ಜುಲೈ 7) ಅದ್ಧೂರಿಯಾಗಿ ತಮ್ಮ ಅಭಿಮಾನಿಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ನಂದಿ ಲಿಂಕ್ ಗ್ರೌಂಡ್ಸ್​ನಲ್ಲಿ ಆಯೋಜಿಸಲಾಗಿದ್ದ ರಿಷಬ್​ರ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಹಲವು ಅಭಿಮಾನಿಗಳು ಆಗಮಿಸಿ ನೆಚ್ಚಿನ ನಟನಿಗೆ ಖುದ್ದಾಗಿ ಹುಟ್ಟುಹಬ್ಬದ ಶುಭಾಷಯಗಳನ್ನು ತಿಳಿಸಿದ್ದಾರೆ. ಇದೇ ಕಾರ್ಯಕ್ರಮದ ವೇದಿಕೆಯಲ್ಲಿ ರಿಷಬ್​ರ ಪತ್ನಿ ಪ್ರಗತಿ ಶೆಟ್ಟಿ, ರಿಷಬ್ ಶೆಟ್ಟಿ ಫೌಂಡೇಶನ್​ಗೆ (Rishab Shetty Foundation) ಚಾಲನೆ ನೀಡಿದ್ದು ವಿಶೇಷವಾಗಿತ್ತು. ಫೌಂಡೇಶನ್​ಗೆ ಚಾಲನೆ ನೀಡಿದ ಬೆನ್ನಲ್ಲೆ ಮೈಕ್ ಕೈಗೆತ್ತಿಕೊಂಡ ರಿಷಬ್​ರ ಆತ್ಮೀಯ ಗೆಳೆಯ ಪ್ರಮೋದ್ ಶೆಟ್ಟಿ (Pramod Shetty), ರಿಷಬ್​ ಬಗ್ಗೆ ಯಾರಿಗೂ ತಿಳಿಯದ ವಿಷಯವೊಂದನ್ನು ಹಂಚಿಕೊಂಡರು.

”ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು’ ಸಿನಿಮಾದ ಬಳಿಕ ರಿಷಬ್ ಶೆಟ್ಟಿ ಪ್ರಚಾರವಿಲ್ಲದೆ ಸರ್ಕಾರಿ ಶಾಲೆಗಳಿಗೆ ಸಹಾಯ ಮಾಡುತ್ತಾ ಬಂದಿದ್ದಾನೆ. ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾನೆ. ಶಿಕ್ಷಕರ ವ್ಯವಸ್ಥೆ ಮಾಡಿಕೊಟ್ಟಿದ್ದಾನೆ. ಆದರೆ ಇದ್ಯಾರಿಗೂ ಗೊತ್ತಿಲ್ಲ, ಯಾರಿಗೂ ಹೇಳಿಕೊಳ್ಳುವ ಜಾಯಮಾನವೂ ನಮ್ಮದಲ್ಲ. ಆದರೆ ನಾನು ಈ ಸತ್ಯವನ್ನು ಹೇಳಬಹುದು. ಆದರೆ ಈ ಎಲ್ಲ ಕಾರ್ಯಗಳಲ್ಲಿಯೂ ಒಂದು ಶಿಸ್ತು, ನಿಯಮಿತತೆ ತರಲೆಂದು ಫೌಂಡೇಶನ್ ಪ್ರಾರಂಭ ಮಾಡಿದ್ದೀವಿ” ಎಂದರು ಪ್ರಮೋದ್ ಶೆಟ್ಟಿ.

”ಪ್ರಗತಿ ಶೆಟ್ಟಿ ಅವರು ಫೌಂಡೇಶನ್ ಮಾಡುವ ಯೋಜನೆ ಹಾಕಿದರು. ನಾನೂ ಸಹ ಅದಕ್ಕೆ ಸಾಥ್ ಕೊಟ್ಟಿದ್ದೇನೆ. ನಮ್ಮ ಉದ್ದೇಶ ಅಗತ್ಯ ಮಕ್ಕಳಿಗೆ ಶಿಕ್ಷಣ ನೀಡುವುದು, ಸರ್ಕಾರೆ ಶಾಲೆಗಳ ಉನ್ನತೀಕರಣಕ್ಕೆ ಸಹಾಯ ಮಾಡುವುದು. ಕಾಡುಜನರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವುದು. ಯಾವುದಾದರೂ ಮಕ್ಕಳಿಗೆ ನಮ್ಮ ನೆರವಿನ ಅಗತ್ಯ ಬಿದ್ದರೆ ನಮ್ಮ ಗಮನಕ್ಕೆ ತನ್ನಿ ನಾವು ಅವರಿಗೆ ಸಹಾಯ ಮಾಡುತ್ತೇವೆ” ಎಂದರು ಪ್ರಮೋದ್ ಶೆಟ್ಟಿ.

ಇದನ್ನೂ ಓದಿ:Kantara Movie: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ತಲೆಯಲ್ಲಿ ಏನು ಓಡ್ತಿದೆ? ಪ್ರಮೋದ್​ ಶೆಟ್ಟಿ ಕೊಟ್ರು ಉತ್ತರ

ಮುಂದುವರೆದು, ”ಯಾವುದೋ ಫೌಂಡೇಶನ್ ಮಾಡಿದ್ದಾರೆ, ನಾನೂ ಮನೆಗೆ ಫೌಂಡೇಶನ್ ಹಾಕಿದ್ದೀನಿ, ರೂಫ್​ ಕಟ್ಟಲು ಹಣ ಕೊಡಿ ಎಂದೋ ಕುಡಿದು ಕಿಡ್ನಿ ಹಾಳಾಗಿದೆ ಹಣ ಕೊಡಿ ಎಂದೆಲ್ಲ ಮನೆಯ ಬಳಿ ಬರಬೇಡಿ, ನಾವು ಹಣ ಅಂಥಹದ್ದಕ್ಕೆಲ್ಲ ಹಣ ಕೊಡುವುದಿಲ್ಲ. ಅದಕ್ಕೆ ಸಹಾಯ ಮಾಡುವ ಬೇರೆ ಸಂಸ್ಥೆಗಳು ಇದ್ದಾವೆ. ನಾವು ಕೆಲಸ ಮಾಡಲು ಉದ್ದೇಶಿಸಿರುವುದು ಶಿಕ್ಷಣ ಕ್ಷೇತ್ರದಲ್ಲಿ. ಬಡಮಕ್ಕಳಿಗೆ ಶಿಕ್ಷಣ ಒದಗಿಸುವುದು ನಮ್ಮ ಫೌಂಡೇಶನ್​ನ ಉದ್ದೇಶ” ಎಂದರು.

ರಿಷಬ್ ಶೆಟ್ಟಿ ಫೌಂಡೇಶನ್ ಅನ್ನು ಪ್ರಗತಿ ಶೆಟ್ಟಿ ರಿಷಬ್​ರ ಹುಟ್ಟುಹಬ್ಬ ಆಯೋಜಿಸಿದ್ದ ವೇದಿಕೆಯಲ್ಲಿ ಅನಾವರಣ ಮಾಡಿದರು. ಮೊದಲಿನಿಂದಲೂ ನಮ್ಮ ಕೈಲಾದ ಸೇವೆ ಮಾಡುತ್ತಲೇ ಬಂದಿದ್ದೇವೆ ಆದರೆ ಅದನ್ನು ವ್ಯವಸ್ಥಿತ ರೀತಿಯಲ್ಲಿ ಮಾಡುವ ಉದ್ದೇಶಿದಿಂದ ಫೌಂಡೇಶನ್ ಪ್ರಾರಂಭಿಸಿದ್ದೇವೆ. ಸಮಾಜ ಸೇವೆ ರಿಷಬ್​ ಶೆಟ್ಟಿಯವರಿಗೆ ಖುಷಿ ಕೊಡುವ ಕೆಲಸ, ಹಾಗಾಗಿ ಅವರ ಹುಟ್ಟುಹಬ್ಬದಂದೇ ಈ ಉಡುಗೊರೆಯನ್ನು ಅವರಿಗೆ ನೀಡುತ್ತಿದ್ದೇವೆ. ದೇವರು ನಮಗೆ ಶಕ್ತಿ ಕೊಟ್ಟಷ್ಟು ದಿವಸ ನಾವು ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ಬಡಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ