AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಫಿಂಗ್ ಬುದ್ಧ’ ಬಿಡುಗಡೆ ಬೆನ್ನಲ್ಲೆ ಮತ್ತೊಂದು ಸಿನಿಮಾ ಘೋಷಿದ ಪ್ರಮೋದ್ ಶೆಟ್ಟಿ

Pramod Shetty: ಪ್ರಮೋದ್ ಶೆಟ್ಟಿಯ ‘ಲಾಫಿಂಗ್ ಬುದ್ಧ’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿ ಧನಾತ್ಮಕ ವಿಮರ್ಶೆಗಳನ್ನು ಪಡೆದಿದೆ. ಅದರ ಬೆನ್ನಲ್ಲೆ ಇದೀಗ ಪ್ರಮೋದ್ ಶೆಟ್ಟಿ ತಮ್ಮ ನಟನೆಯ ಹೊಸ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

‘ಲಾಫಿಂಗ್ ಬುದ್ಧ’ ಬಿಡುಗಡೆ ಬೆನ್ನಲ್ಲೆ ಮತ್ತೊಂದು ಸಿನಿಮಾ ಘೋಷಿದ ಪ್ರಮೋದ್ ಶೆಟ್ಟಿ
ಮಂಜುನಾಥ ಸಿ.
|

Updated on:Sep 01, 2024 | 10:12 AM

Share

ಕನ್ನಡ ಚಿತ್ರರಂಗದ ಶೆಟ್ಟಿ ಗೆಳೆಯರ ಗುಂಪಿನ ಪ್ರಮುಖ ಸದಸ್ಯರ ಪ್ರಮೋದ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು, ಬಳಿಕ ಚಿತ್ರರಂಗದ ಪ್ರಮುಖ ಪೋಷಕ ನಟನಾಗಿ ಗುರುತಿಸಿಕೊಂಡರು. ಈಗ ನಾಯಕನಾಗಿಯೂ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೆ (ಆಗಸ್ಟ್ 30) ಪ್ರಮೋದ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಬಿಡುಗಡೆ ಆಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾಕ್ಕೆ ಸಕಾರಾತ್ಮಕ ವಿಮರ್ಶೆಗಳು ವ್ಯಕ್ತವಾದ ಬೆನ್ನಲ್ಲೆ ಪ್ರಮೋದ್ ಶೆಟ್ಟಿ ಮತ್ತೊಂದು ಸಿನಿಮಾ ಘೋಷಿಸಿದ್ದಾರೆ.

ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ’ ಸಿನಿಮಾದ ಪೋಸ್ಟರ್ ಬಿಡುಗಡೆ. ಪ್ರಮೋದ್ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಸಿನಿಮಾದ ಟೀಸರ್ ಅತ್ಯಂತ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ ಎಂದು ಪೋಸ್ಟರ್​ನಲ್ಲಿ ಹೇಳಲಾಗಿದೆ. ಅಲ್ಲದೆ ಪೋಸ್ಟರ್ ಸಹ ಗಮನ ಸೆಳೆಯುತ್ತಿದ್ದು, ಇದೊಂದು ಹಾಸ್ಯಮಯ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಎಂದು ಪೋಸ್ಟರ್​ನಿಂದ ತಿಳಿದು ಬರುತ್ತಿದೆ.

ಮ್ಮೂರಿನ ಕಥೆಗಳು ಎಲ್ಲಾ ಊರುಗಳಲ್ಲೂ ತಲುಪಬೇಕೆಂಬ ಆಶಯವುಳ್ಳ ಅನೀಶ್ ಎಸ್ ಶರ್ಮಾ ಈಗಾಗಲೇ ‘ವಡ್ಡಾರಾಧಕ’ , ‘ಶಬರಿ’ ಅಂಥಹ ಕಿರುಚಿತ್ರಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಈಗ ಅವರೇ ಈ ‘ಕರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ತರಂಜನ್ ಕಶ್ಯಪ್, ವಲ್ಲಭ ಸೂರಿ ಮತ್ತು ಸುನೀತ್ ಹಲಗೇರಿ ತಮ್ಮ ಸಂಸ್ಥೆ ಗನ್ನಿಬ್ಯಾಗ್ ಸ್ಟುಡಿಯೋಸ್ ಸಿನಿಮಾಕ್ಕೆ ಬಂಡವಾಳ ತೊಡಗಿಸಿದ್ದಾರೆ.

ಇದನ್ನೂ ಓದಿ:ರಿಷಬ್ ಶೆಟ್ಟಿ​ ಹೀಗೆ ಇರೋದು ಏಕೆ? ವಿವರಿಸಿದ ಪ್ರಮೋದ್ ಶೆಟ್ಟಿ

ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರನ್ನು ಹೊರತುಪಡಿಸಿ ರಾಘು ಶಿವಮೊಗ್ಗ, ಕಿರಣ್ ನಾಯ್ಕ್, ಮಂಜುನಾಥ್ ಹೆಗ್ಡೆ, ಚಂದ್ರಕಲಾ, ಕೆ ಜಿ ಕೃಷ್ಣಮೂರ್ತಿ ಮತ್ತು ಮುಂತಾದವರು ಬಣ್ಣ ಹಚ್ಚಿದ್ದಾರೆ. ಸುಮಂತ್ ಶರ್ಮಾ ಅವರ ಛಾಯಾಗ್ರಹಣ, ಚೇತನ್ ಕುಮಾರ್ ಸಂಗೀತ, ಸಂಜೀವ್ ಜಾಗಿರ್ದರ್ ಅವರ ಸಂಕಲನ ಈ ಚಿತ್ರಕ್ಕೆ ಶಕ್ತಿ ತುಂಬಿದೆ. ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಮುಗಿಸಿ ಇನ್ನೇನು ತಮ್ಮ ಮೊದಲ ಟೀಸರ್ ಬಿಡುಗಡೆ ಮಾಡಲು ಸಿದ್ಧರಾಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Sat, 31 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ