Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು.

‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್
ಪ್ರಣಿತಾ ಮದುವೆ ಆದ ನಿತಿನ್
Follow us
ರಾಜೇಶ್ ದುಗ್ಗುಮನೆ
|

Updated on:May 31, 2021 | 5:20 PM

ನಟಿ ಪ್ರಣಿತಾ ಸುಭಾಷ್​ ಉದ್ಯಮಿ ನಿತಿನ್​ ರಾಜು ಜತೆ ಗುಟ್ಟಾಗಿ ಮದುವೆ ಆಗಿದ್ದಾರೆ.ಭಾನುವಾರ (ಮೇ 30) ಬೆಂಗಳೂರಿನ ಹೊರ ವಯಲದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಮದುವೆ ವಿಚಾರದ ಬಗ್ಗೆ ಎಲ್ಲಿಯೂ ಬಾಯ್ಬಿಟ್ಟಿರಲಿಲ್ಲ. ಈಗ ಪ್ರಣಿತಾ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಕ್ಷಮೆ ಕೇಳಿದ್ದಾರೆ.   

‘ತುಂಬಾ ಖುಷಿಯಿಂದ ನಾನು ನಿಮಗೆ ಈ ವಿಚಾರ ಹೇಳೋದಕ್ಕೆ ಇಷ್ಟ ಪಡ್ತೀನಿ. ಅದೇನಂದರೇ, ಮೇ 30ರಂದು, ನನ್ನ ಅತ್ಯಂತ ಹತ್ತಿರದವರ ಸಮ್ಮುಖದಲ್ಲಿ ನಾನು ವಿವಾಹವಾಗಿದ್ದೀನಿ. ನಾನು ಹಾಗೂ ನನ್ನ ಪತಿ ಇಬ್ಬರೂ ಕೂಡ ನಿಮ್ಮ ಬಳಿ ಸಾರಿ ಕೇಳೋದಕ್ಕೆ ಇಷ್ಟಪಡ್ತೀವಿ. ಕಾರಣ ಇಷ್ಟೇ, ಈಗಿರೋ ಕೋರೊನಾ ಪರಿಸ್ಥಿತಿಯಿಂದ ನಮಗೆ ಮದುವೆ ಆಗುವುದಕ್ಕೆ ಸರಿಯಾದ ದಿನಾಂಕ​ ಗೊತ್ತಿರಲಿಲ್ಲ. ನಾವು ಯಾವಾಗ ಮದುವೆ ಆಗ್ತೀವಿ, ಎಲ್ಲಿ ಮದುವೆ ಆಗ್ತೀವಿ ಅನ್ನೋದು ನಮಗೇ ಗೊತ್ತಿರಲಿಲ್ಲ. ತುಂಬಾ ಕನ್​ಫ್ಯೂಷನ್ಸ್​ ಇತ್ತು. ಹೀಗಾಗಿ, ಈ ಗೊಂದಲಕ್ಕೆ ನಿಮ್ಮನ್ನೂ ಸಿಲುಕಿಸೋದು ನನಗೆ ಇಷ್ಟ ಇರಲಿಲ್ಲ. ದಯವಿಟ್ಟು, ನಮ್ಮನ್ನ ಕ್ಷಮಿಸಿ’ ಎಂದು ಪ್ರಣಿತಾ ಕೋರಿದ್ದಾರೆ.

‘ಆಗಲೆ ಹೇಳಿದಂತೆ, ತುಂಬಾ ಹತ್ತಿರದವರ ಸಮ್ಮುಖದಲ್ಲಿ ನನ್ನ ಮದುವೆ ಕಾರ್ಯ ನಡೆದಿರೋದು ನನಗೆ ತುಂಬಾ ಖುಷಿ ತಂದಿದೆ. ನೀವೆಲ್ಲರೂ ನನಗೆ ತುಂಬಾ ಬೇಕಾದವರು, ಈ ಸಾಂಕ್ರಾಮಿಕ ಎಲ್ಲ ಮುಗಿದ ಮೇಲೆ ನಾವೆಲ್ಲರೂ ಈ ಖುಷಿಯ ದಿನವನ್ನ ಒಟ್ಟಿಗೆ ಸಂಭ್ರಮಿಸೋಣ’ ಎಂದು ಪ್ರಣಿತಾ ಬರೆದುಕೊಂಡಿದ್ದಾರೆ.

View this post on Instagram

A post shared by Bhuvi (@bujji5749)

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್​ ಲೀಡರ್​ ಮುಂತಾದ ಸಿನಿಮಾಗಳಲ್ಲಿ ಸ್ಟಾರ್​ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ

Published On - 5:17 pm, Mon, 31 May 21

ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ