AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು.

‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್
ಪ್ರಣಿತಾ ಮದುವೆ ಆದ ನಿತಿನ್
ರಾಜೇಶ್ ದುಗ್ಗುಮನೆ
|

Updated on:May 31, 2021 | 5:20 PM

Share

ನಟಿ ಪ್ರಣಿತಾ ಸುಭಾಷ್​ ಉದ್ಯಮಿ ನಿತಿನ್​ ರಾಜು ಜತೆ ಗುಟ್ಟಾಗಿ ಮದುವೆ ಆಗಿದ್ದಾರೆ.ಭಾನುವಾರ (ಮೇ 30) ಬೆಂಗಳೂರಿನ ಹೊರ ವಯಲದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಮದುವೆ ವಿಚಾರದ ಬಗ್ಗೆ ಎಲ್ಲಿಯೂ ಬಾಯ್ಬಿಟ್ಟಿರಲಿಲ್ಲ. ಈಗ ಪ್ರಣಿತಾ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಕ್ಷಮೆ ಕೇಳಿದ್ದಾರೆ.   

‘ತುಂಬಾ ಖುಷಿಯಿಂದ ನಾನು ನಿಮಗೆ ಈ ವಿಚಾರ ಹೇಳೋದಕ್ಕೆ ಇಷ್ಟ ಪಡ್ತೀನಿ. ಅದೇನಂದರೇ, ಮೇ 30ರಂದು, ನನ್ನ ಅತ್ಯಂತ ಹತ್ತಿರದವರ ಸಮ್ಮುಖದಲ್ಲಿ ನಾನು ವಿವಾಹವಾಗಿದ್ದೀನಿ. ನಾನು ಹಾಗೂ ನನ್ನ ಪತಿ ಇಬ್ಬರೂ ಕೂಡ ನಿಮ್ಮ ಬಳಿ ಸಾರಿ ಕೇಳೋದಕ್ಕೆ ಇಷ್ಟಪಡ್ತೀವಿ. ಕಾರಣ ಇಷ್ಟೇ, ಈಗಿರೋ ಕೋರೊನಾ ಪರಿಸ್ಥಿತಿಯಿಂದ ನಮಗೆ ಮದುವೆ ಆಗುವುದಕ್ಕೆ ಸರಿಯಾದ ದಿನಾಂಕ​ ಗೊತ್ತಿರಲಿಲ್ಲ. ನಾವು ಯಾವಾಗ ಮದುವೆ ಆಗ್ತೀವಿ, ಎಲ್ಲಿ ಮದುವೆ ಆಗ್ತೀವಿ ಅನ್ನೋದು ನಮಗೇ ಗೊತ್ತಿರಲಿಲ್ಲ. ತುಂಬಾ ಕನ್​ಫ್ಯೂಷನ್ಸ್​ ಇತ್ತು. ಹೀಗಾಗಿ, ಈ ಗೊಂದಲಕ್ಕೆ ನಿಮ್ಮನ್ನೂ ಸಿಲುಕಿಸೋದು ನನಗೆ ಇಷ್ಟ ಇರಲಿಲ್ಲ. ದಯವಿಟ್ಟು, ನಮ್ಮನ್ನ ಕ್ಷಮಿಸಿ’ ಎಂದು ಪ್ರಣಿತಾ ಕೋರಿದ್ದಾರೆ.

‘ಆಗಲೆ ಹೇಳಿದಂತೆ, ತುಂಬಾ ಹತ್ತಿರದವರ ಸಮ್ಮುಖದಲ್ಲಿ ನನ್ನ ಮದುವೆ ಕಾರ್ಯ ನಡೆದಿರೋದು ನನಗೆ ತುಂಬಾ ಖುಷಿ ತಂದಿದೆ. ನೀವೆಲ್ಲರೂ ನನಗೆ ತುಂಬಾ ಬೇಕಾದವರು, ಈ ಸಾಂಕ್ರಾಮಿಕ ಎಲ್ಲ ಮುಗಿದ ಮೇಲೆ ನಾವೆಲ್ಲರೂ ಈ ಖುಷಿಯ ದಿನವನ್ನ ಒಟ್ಟಿಗೆ ಸಂಭ್ರಮಿಸೋಣ’ ಎಂದು ಪ್ರಣಿತಾ ಬರೆದುಕೊಂಡಿದ್ದಾರೆ.

View this post on Instagram

A post shared by Bhuvi (@bujji5749)

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್​ ಲೀಡರ್​ ಮುಂತಾದ ಸಿನಿಮಾಗಳಲ್ಲಿ ಸ್ಟಾರ್​ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ

Published On - 5:17 pm, Mon, 31 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!