‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು.

‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್
ಪ್ರಣಿತಾ ಮದುವೆ ಆದ ನಿತಿನ್

Updated on: May 31, 2021 | 5:20 PM

ನಟಿ ಪ್ರಣಿತಾ ಸುಭಾಷ್​ ಉದ್ಯಮಿ ನಿತಿನ್​ ರಾಜು ಜತೆ ಗುಟ್ಟಾಗಿ ಮದುವೆ ಆಗಿದ್ದಾರೆ.ಭಾನುವಾರ (ಮೇ 30) ಬೆಂಗಳೂರಿನ ಹೊರ ವಯಲದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಮದುವೆ ವಿಚಾರದ ಬಗ್ಗೆ ಎಲ್ಲಿಯೂ ಬಾಯ್ಬಿಟ್ಟಿರಲಿಲ್ಲ. ಈಗ ಪ್ರಣಿತಾ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಕ್ಷಮೆ ಕೇಳಿದ್ದಾರೆ.   

‘ತುಂಬಾ ಖುಷಿಯಿಂದ ನಾನು ನಿಮಗೆ ಈ ವಿಚಾರ ಹೇಳೋದಕ್ಕೆ ಇಷ್ಟ ಪಡ್ತೀನಿ. ಅದೇನಂದರೇ, ಮೇ 30ರಂದು, ನನ್ನ ಅತ್ಯಂತ ಹತ್ತಿರದವರ ಸಮ್ಮುಖದಲ್ಲಿ ನಾನು ವಿವಾಹವಾಗಿದ್ದೀನಿ. ನಾನು ಹಾಗೂ ನನ್ನ ಪತಿ ಇಬ್ಬರೂ ಕೂಡ ನಿಮ್ಮ ಬಳಿ ಸಾರಿ ಕೇಳೋದಕ್ಕೆ ಇಷ್ಟಪಡ್ತೀವಿ. ಕಾರಣ ಇಷ್ಟೇ, ಈಗಿರೋ ಕೋರೊನಾ ಪರಿಸ್ಥಿತಿಯಿಂದ ನಮಗೆ ಮದುವೆ ಆಗುವುದಕ್ಕೆ ಸರಿಯಾದ ದಿನಾಂಕ​ ಗೊತ್ತಿರಲಿಲ್ಲ. ನಾವು ಯಾವಾಗ ಮದುವೆ ಆಗ್ತೀವಿ, ಎಲ್ಲಿ ಮದುವೆ ಆಗ್ತೀವಿ ಅನ್ನೋದು ನಮಗೇ ಗೊತ್ತಿರಲಿಲ್ಲ. ತುಂಬಾ ಕನ್​ಫ್ಯೂಷನ್ಸ್​ ಇತ್ತು. ಹೀಗಾಗಿ, ಈ ಗೊಂದಲಕ್ಕೆ ನಿಮ್ಮನ್ನೂ ಸಿಲುಕಿಸೋದು ನನಗೆ ಇಷ್ಟ ಇರಲಿಲ್ಲ. ದಯವಿಟ್ಟು, ನಮ್ಮನ್ನ ಕ್ಷಮಿಸಿ’ ಎಂದು ಪ್ರಣಿತಾ ಕೋರಿದ್ದಾರೆ.

‘ಆಗಲೆ ಹೇಳಿದಂತೆ, ತುಂಬಾ ಹತ್ತಿರದವರ ಸಮ್ಮುಖದಲ್ಲಿ ನನ್ನ ಮದುವೆ ಕಾರ್ಯ ನಡೆದಿರೋದು ನನಗೆ ತುಂಬಾ ಖುಷಿ ತಂದಿದೆ. ನೀವೆಲ್ಲರೂ ನನಗೆ ತುಂಬಾ ಬೇಕಾದವರು, ಈ ಸಾಂಕ್ರಾಮಿಕ ಎಲ್ಲ ಮುಗಿದ ಮೇಲೆ ನಾವೆಲ್ಲರೂ ಈ ಖುಷಿಯ ದಿನವನ್ನ ಒಟ್ಟಿಗೆ ಸಂಭ್ರಮಿಸೋಣ’ ಎಂದು ಪ್ರಣಿತಾ ಬರೆದುಕೊಂಡಿದ್ದಾರೆ.

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್​ ಲೀಡರ್​ ಮುಂತಾದ ಸಿನಿಮಾಗಳಲ್ಲಿ ಸ್ಟಾರ್​ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ

Published On - 5:17 pm, Mon, 31 May 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us