AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ

Pranitha Subhash Marriage Photo: ನಟಿ ಪ್ರಣಿತಾ ಸುಭಾಷ್​ ಅವರ ಮದುವೆ ಫೋಟೋಗಳು ವೈರಲ್​ ಆಗಿವೆ. ಹೀಗೆ ಅವರು ಏಕಾಏಕಿ ಮದುವೆ ಆಗಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಉಂಟು ಮಾಡಿರುವುದು ನಿಜ. ಸಿಂಪಲ್​ ಆಗಿ ಮದುವೆ ಆಗಿದ್ದಕ್ಕೆ ಪ್ರಣಿತಾ ಕಾರಣ ನೀಡಿದ್ದಾರೆ.

Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ
ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಸುಭಾಷ್​ ಮದುವೆ
ಮದನ್​ ಕುಮಾರ್​
| Edited By: |

Updated on:May 31, 2021 | 4:53 PM

Share

ಸೆಲೆಬ್ರಿಟಿಗಳ ಮದುವೆ ಎಂದರೆ ಕೊಂಚ ಅದ್ದೂರಿಯಾಗಿ ಇರುತ್ತದೆ. ಅತಿಥಿಗಳ ಸಂಖ್ಯೆಯೂ ದೊಡ್ಡದಿರುತ್ತದೆ. ಭರ್ಜರಿ ಪ್ರಚಾರ ಪಡೆದುಕೊಳ್ಳುವುದು ಕೂಡ ವಾಡಿಕೆ. ಆದರೆ ನಟಿ ಪ್ರಣಿತಾ ಸುಭಾಷ್​​ ಮದುವೆ ವಿಚಾರದಲ್ಲಿ ಹಾಗಾಗಿಲ್ಲ. ಭಾನುವಾರ (ಮೇ 30) ಬೆಂಗಳೂರಿನ ಹೊರ ವಯಲದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಉದ್ಯಮಿ ನಿತಿನ್​ ರಾಜು ಎಂಬುವವರ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟಕ್ಕೂ ಪ್ರಣಿತಾ ಯಾರಿಗೂ ಹೇಳಿದೆ ಈ ರೀತಿ ಮದುವೆ ಆಗಿದ್ದು ಯಾಕೆ? ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದೇ ನಮ್ಮ ಆಸೆ ಕೂಡ ಆಗಿತ್ತು. ಆದರೆ ಕೊರೊನಾ ವೈರಸ್​ನಿಂದ ಅದು ಸಾಧ್ಯವಾಗಿಲ್ಲ. ನಾವು ಈ ರೀತಿ ಸಿಂಪಲ್​ ಆಗಿ ಮದುವೆ ಆಗಿದ್ದಕ್ಕೆ ಕೊವಿಡ್​ ಪರಿಸ್ಥಿತಿ ಮಾತ್ರ ಕಾರಣ. ಬೇರೆ ಏನೂ ಇಲ್ಲ. ಬೆಂಗಳೂರಿನ ಹೊರವಲಯದಲ್ಲಿ ಈ ವೀಕೆಂಡ್​ ಮದುವೆ ನಡೆಯಿತು. ನಮ್ಮದು ಲವ್​ ಕಮ್​ ಅರೇಂಜ್​ ಮ್ಯಾರೇಜ್​ ಎನ್ನಬಹುದು’ ಎಂದು ಪ್ರಣಿತಾ ಸುಭಾಸ್​ ಟಿವಿ9 ಜೊತೆ ಮಾತನಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಅವರ ಮದುವೆ ನಡೆದಿದೆ.

ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲೂ ನಟಿಸಿರುವ ಪ್ರಣಿತಾ ಹೀಗೆ ಏಕಾಏಕಿ ಮದುವೆ ಆಗಿದ್ದರಿಂದ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಅವರು ಯಾವುದೇ ಮಾಹಿತಿ ನೀಡುವ ಮೊದಲೇ ಅವರ ಮದುವೆ ಫೋಟೋಗಳು ವೈರಲ್​ ಆಗತೊಡಗಿದವು. ಈ ಗಡಿಬಿಡಿ ಮದುವೆಯ ಹಿಂದಿನ ಕಾರಣ ಏನು ಎಂಬ ಪ್ರಶ್ನೆ ಎಲ್ಲರಲ್ಲೂ ಉದ್ಭವ ಆಗಿತ್ತು. ಆದರೆ ಈಗ ಸ್ವತಃ ಪ್ರಣಿತಾ ಅವರೇ ಪ್ರತಿಕ್ರಿಯೆ ನೀಡಿರುವುದರಿಂದ ಎಲ್ಲ ಅನುಮಾನಗಳಿಗೆ ತೆರೆ ಎಳೆದಂತಾಗಿದೆ.

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್​ ಲೀಡರ್​ ಮುಂತಾದ ಸಿನಿಮಾಗಳಲ್ಲಿ ಸ್ಟಾರ್​ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ವಿಷ್ಣುವರ್ಧನ್​ ಓದಿದ ಕನ್ನಡ ಮಾಧ್ಯಮ ಶಾಲೆ ಉಳಿಸಲು ಪಣತೊಟ್ಟ ನಟಿ ಪ್ರಣಿತಾ ಸುಭಾಷ್​

ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!

Published On - 3:36 pm, Mon, 31 May 21

Follow Us
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!