AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ

Pranitha Subhash Marriage Photo: ನಟಿ ಪ್ರಣಿತಾ ಸುಭಾಷ್​ ಅವರ ಮದುವೆ ಫೋಟೋಗಳು ವೈರಲ್​ ಆಗಿವೆ. ಹೀಗೆ ಅವರು ಏಕಾಏಕಿ ಮದುವೆ ಆಗಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಉಂಟು ಮಾಡಿರುವುದು ನಿಜ. ಸಿಂಪಲ್​ ಆಗಿ ಮದುವೆ ಆಗಿದ್ದಕ್ಕೆ ಪ್ರಣಿತಾ ಕಾರಣ ನೀಡಿದ್ದಾರೆ.

Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ
ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಸುಭಾಷ್​ ಮದುವೆ
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on:May 31, 2021 | 4:53 PM

Share

ಸೆಲೆಬ್ರಿಟಿಗಳ ಮದುವೆ ಎಂದರೆ ಕೊಂಚ ಅದ್ದೂರಿಯಾಗಿ ಇರುತ್ತದೆ. ಅತಿಥಿಗಳ ಸಂಖ್ಯೆಯೂ ದೊಡ್ಡದಿರುತ್ತದೆ. ಭರ್ಜರಿ ಪ್ರಚಾರ ಪಡೆದುಕೊಳ್ಳುವುದು ಕೂಡ ವಾಡಿಕೆ. ಆದರೆ ನಟಿ ಪ್ರಣಿತಾ ಸುಭಾಷ್​​ ಮದುವೆ ವಿಚಾರದಲ್ಲಿ ಹಾಗಾಗಿಲ್ಲ. ಭಾನುವಾರ (ಮೇ 30) ಬೆಂಗಳೂರಿನ ಹೊರ ವಯಲದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಉದ್ಯಮಿ ನಿತಿನ್​ ರಾಜು ಎಂಬುವವರ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟಕ್ಕೂ ಪ್ರಣಿತಾ ಯಾರಿಗೂ ಹೇಳಿದೆ ಈ ರೀತಿ ಮದುವೆ ಆಗಿದ್ದು ಯಾಕೆ? ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದೇ ನಮ್ಮ ಆಸೆ ಕೂಡ ಆಗಿತ್ತು. ಆದರೆ ಕೊರೊನಾ ವೈರಸ್​ನಿಂದ ಅದು ಸಾಧ್ಯವಾಗಿಲ್ಲ. ನಾವು ಈ ರೀತಿ ಸಿಂಪಲ್​ ಆಗಿ ಮದುವೆ ಆಗಿದ್ದಕ್ಕೆ ಕೊವಿಡ್​ ಪರಿಸ್ಥಿತಿ ಮಾತ್ರ ಕಾರಣ. ಬೇರೆ ಏನೂ ಇಲ್ಲ. ಬೆಂಗಳೂರಿನ ಹೊರವಲಯದಲ್ಲಿ ಈ ವೀಕೆಂಡ್​ ಮದುವೆ ನಡೆಯಿತು. ನಮ್ಮದು ಲವ್​ ಕಮ್​ ಅರೇಂಜ್​ ಮ್ಯಾರೇಜ್​ ಎನ್ನಬಹುದು’ ಎಂದು ಪ್ರಣಿತಾ ಸುಭಾಸ್​ ಟಿವಿ9 ಜೊತೆ ಮಾತನಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಅವರ ಮದುವೆ ನಡೆದಿದೆ.

ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲೂ ನಟಿಸಿರುವ ಪ್ರಣಿತಾ ಹೀಗೆ ಏಕಾಏಕಿ ಮದುವೆ ಆಗಿದ್ದರಿಂದ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಅವರು ಯಾವುದೇ ಮಾಹಿತಿ ನೀಡುವ ಮೊದಲೇ ಅವರ ಮದುವೆ ಫೋಟೋಗಳು ವೈರಲ್​ ಆಗತೊಡಗಿದವು. ಈ ಗಡಿಬಿಡಿ ಮದುವೆಯ ಹಿಂದಿನ ಕಾರಣ ಏನು ಎಂಬ ಪ್ರಶ್ನೆ ಎಲ್ಲರಲ್ಲೂ ಉದ್ಭವ ಆಗಿತ್ತು. ಆದರೆ ಈಗ ಸ್ವತಃ ಪ್ರಣಿತಾ ಅವರೇ ಪ್ರತಿಕ್ರಿಯೆ ನೀಡಿರುವುದರಿಂದ ಎಲ್ಲ ಅನುಮಾನಗಳಿಗೆ ತೆರೆ ಎಳೆದಂತಾಗಿದೆ.

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್​ ಲೀಡರ್​ ಮುಂತಾದ ಸಿನಿಮಾಗಳಲ್ಲಿ ಸ್ಟಾರ್​ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ವಿಷ್ಣುವರ್ಧನ್​ ಓದಿದ ಕನ್ನಡ ಮಾಧ್ಯಮ ಶಾಲೆ ಉಳಿಸಲು ಪಣತೊಟ್ಟ ನಟಿ ಪ್ರಣಿತಾ ಸುಭಾಷ್​

ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!

Published On - 3:36 pm, Mon, 31 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ