AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ

Pranitha Subhash Marriage Photo: ನಟಿ ಪ್ರಣಿತಾ ಸುಭಾಷ್​ ಅವರ ಮದುವೆ ಫೋಟೋಗಳು ವೈರಲ್​ ಆಗಿವೆ. ಹೀಗೆ ಅವರು ಏಕಾಏಕಿ ಮದುವೆ ಆಗಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಉಂಟು ಮಾಡಿರುವುದು ನಿಜ. ಸಿಂಪಲ್​ ಆಗಿ ಮದುವೆ ಆಗಿದ್ದಕ್ಕೆ ಪ್ರಣಿತಾ ಕಾರಣ ನೀಡಿದ್ದಾರೆ.

Pranitha Marriage: ಉದ್ಯಮಿ ಜೊತೆ ಪ್ರಣಿತಾ ಗುಟ್ಟಾಗಿ ಮದುವೆ ಆಗಿದ್ದೇಕೆ? ಅಸಲಿ ಕಾರಣ ತಿಳಿಸಿದ ನಟಿ
ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಸುಭಾಷ್​ ಮದುವೆ
ಮದನ್​ ಕುಮಾರ್​
| Edited By: |

Updated on:May 31, 2021 | 4:53 PM

Share

ಸೆಲೆಬ್ರಿಟಿಗಳ ಮದುವೆ ಎಂದರೆ ಕೊಂಚ ಅದ್ದೂರಿಯಾಗಿ ಇರುತ್ತದೆ. ಅತಿಥಿಗಳ ಸಂಖ್ಯೆಯೂ ದೊಡ್ಡದಿರುತ್ತದೆ. ಭರ್ಜರಿ ಪ್ರಚಾರ ಪಡೆದುಕೊಳ್ಳುವುದು ಕೂಡ ವಾಡಿಕೆ. ಆದರೆ ನಟಿ ಪ್ರಣಿತಾ ಸುಭಾಷ್​​ ಮದುವೆ ವಿಚಾರದಲ್ಲಿ ಹಾಗಾಗಿಲ್ಲ. ಭಾನುವಾರ (ಮೇ 30) ಬೆಂಗಳೂರಿನ ಹೊರ ವಯಲದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಉದ್ಯಮಿ ನಿತಿನ್​ ರಾಜು ಎಂಬುವವರ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟಕ್ಕೂ ಪ್ರಣಿತಾ ಯಾರಿಗೂ ಹೇಳಿದೆ ಈ ರೀತಿ ಮದುವೆ ಆಗಿದ್ದು ಯಾಕೆ? ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದೇ ನಮ್ಮ ಆಸೆ ಕೂಡ ಆಗಿತ್ತು. ಆದರೆ ಕೊರೊನಾ ವೈರಸ್​ನಿಂದ ಅದು ಸಾಧ್ಯವಾಗಿಲ್ಲ. ನಾವು ಈ ರೀತಿ ಸಿಂಪಲ್​ ಆಗಿ ಮದುವೆ ಆಗಿದ್ದಕ್ಕೆ ಕೊವಿಡ್​ ಪರಿಸ್ಥಿತಿ ಮಾತ್ರ ಕಾರಣ. ಬೇರೆ ಏನೂ ಇಲ್ಲ. ಬೆಂಗಳೂರಿನ ಹೊರವಲಯದಲ್ಲಿ ಈ ವೀಕೆಂಡ್​ ಮದುವೆ ನಡೆಯಿತು. ನಮ್ಮದು ಲವ್​ ಕಮ್​ ಅರೇಂಜ್​ ಮ್ಯಾರೇಜ್​ ಎನ್ನಬಹುದು’ ಎಂದು ಪ್ರಣಿತಾ ಸುಭಾಸ್​ ಟಿವಿ9 ಜೊತೆ ಮಾತನಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಅವರ ಮದುವೆ ನಡೆದಿದೆ.

ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲೂ ನಟಿಸಿರುವ ಪ್ರಣಿತಾ ಹೀಗೆ ಏಕಾಏಕಿ ಮದುವೆ ಆಗಿದ್ದರಿಂದ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಅವರು ಯಾವುದೇ ಮಾಹಿತಿ ನೀಡುವ ಮೊದಲೇ ಅವರ ಮದುವೆ ಫೋಟೋಗಳು ವೈರಲ್​ ಆಗತೊಡಗಿದವು. ಈ ಗಡಿಬಿಡಿ ಮದುವೆಯ ಹಿಂದಿನ ಕಾರಣ ಏನು ಎಂಬ ಪ್ರಶ್ನೆ ಎಲ್ಲರಲ್ಲೂ ಉದ್ಭವ ಆಗಿತ್ತು. ಆದರೆ ಈಗ ಸ್ವತಃ ಪ್ರಣಿತಾ ಅವರೇ ಪ್ರತಿಕ್ರಿಯೆ ನೀಡಿರುವುದರಿಂದ ಎಲ್ಲ ಅನುಮಾನಗಳಿಗೆ ತೆರೆ ಎಳೆದಂತಾಗಿದೆ.

2010ರಲ್ಲಿ ದರ್ಶನ್​ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್​ ಲೀಡರ್​ ಮುಂತಾದ ಸಿನಿಮಾಗಳಲ್ಲಿ ಸ್ಟಾರ್​ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ವಿಷ್ಣುವರ್ಧನ್​ ಓದಿದ ಕನ್ನಡ ಮಾಧ್ಯಮ ಶಾಲೆ ಉಳಿಸಲು ಪಣತೊಟ್ಟ ನಟಿ ಪ್ರಣಿತಾ ಸುಭಾಷ್​

ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!

Published On - 3:36 pm, Mon, 31 May 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ