AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸಿ ಹೆಸರಲ್ಲ.. ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?

ಪ್ರಣಿತಾ ಸುಭಾಷ್ ಮತ್ತು ನಿತಿನ್ ರಾಜು ದಂಪತಿಗಳು ತಮ್ಮ ಗಂಡು ಮಗುವಿಗೆ ನಾಮಕರಣ ಮಾಡಿದ್ದಾರೆ. ಮಹಾಭಾರತದಲ್ಲಿ ಬರೋ ಈ ಪಾತ್ರದ ಹೆಸರನ್ನು ಅವರು ಇಟ್ಟಿದ್ದಾರೆ. ತಮ್ಮ ಮಗುವಿಗೆ ಸಾಂಪ್ರದಾಯಿಕ ಹೆಸರಿಡುವ ಮೂಲಕ ಅವರು ಎಲ್ಲರಿಂದ ಮೆಚ್ಚುಗೆಯನ್ನು ಗಳಿಸಿದ್ದಾರೆ. ಈ ಹೆಸರಿನ ಹಿಂದಿನ ಕಾರಣಗಳನ್ನು ಅವರು ವಿವರಿಸಿದ್ದಾರೆ.

ಫ್ಯಾನ್ಸಿ ಹೆಸರಲ್ಲ.. ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?
ಪ್ರಣಿತಾ
ರಾಜೇಶ್ ದುಗ್ಗುಮನೆ
|

Updated on: Apr 21, 2025 | 7:00 AM

Share

ನಟಿ ಪ್ರಣಿತಾ ಸುಭಾಷ್ (Pranitha Subhash) ಹಾಗೂ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಂಡು ಮಗು ಜನಿಸಿದೆ. ಈ ಮಗುವಿಗೆ ಈಗ ನಾಮಕರಣ ಶಾಸ್ತ್ರ ನಡೆದಿದೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದರೆ ಪ್ರಣಿತಾ ಮಾತ್ರ ಮಹಾಭಾರತದಲ್ಲಿ ಬರೋ ಈ ಪ್ರಮುಖ ವ್ಯಕ್ತಿಯ ಹೆಸರು ಇಟ್ಟಿದ್ದಾರೆ. ಹೌದು, ತಮ್ಮ ಮಗುವಿಗೆ ಪ್ರಣಿತಾ ಅವರು ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಇಡೀ ಮಹಾಭಾರತದ ಸಾರಥಿ ಎನಿಸಿಕೊಂಡಿದ್ದಾರೆ ಕೃಷ್ಣ. ಇದೇ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾರಣ ವಿವರಿಸಿದ್ದಾರೆ.

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ತಮ್ಮ ಮಕ್ಕಳಿಗೆ ಫ್ಯಾನ್ಸಿ ಹೆಸರನ್ನು ಇಡಲು ಬಯಸುತ್ತಾರೆ. ಅದರಲ್ಲೂ ಪೌರಾಣಿಕ ಪಾತ್ರಗಳ ಹೆಸರನ್ನು ಇಡಬೇಕು ಎಂದು ಯಾರೂ ಬಯಸುವುದಿಲ್ಲ. ಆದರೆ, ಪ್ರಣಿತಾ ಅವರು ಈ ವಿಚಾರದಲ್ಲಿ ಭಿನ್ನ. ತಮ್ಮ ಮಗನಿಗೆ ಅವರು ಜೈ ಕೃಷ್ಣ ಎಂದು ನಾಮಕರಣ ಮಾಡಿದ್ದಾರೆ. ಅವರು ಸಾಂಪ್ರದಾಯಿಕ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಎಲ್ಲರಿಂದ ಮೆಚ್ಚುಗೆ ಪಡೆದಿದ್ದಾರೆ.

ಇದನ್ನೂ ಓದಿ
Image
ಭೀಕರ ಅಪಘಾತಕ್ಕೆ ಒಳಗಾದ ನಟ ಅಜಿತ್ ಕುಮಾರ್; ಶಾಕಿಂಗ್ ವಿಡಿಯೋ ವೈರಲ್
Image
ಉಪೇಂದ್ರ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?
Image
ಬಿಗ್ ಬಾಸ್ ಮನೆಯಲ್ಲಿದ್ದಾಗ ವೋಟ್ ಹಾಕಿದ ಫ್ಯಾನ್ಸ್​ಗೆ ತ್ರಿವಿಕ್ರಂ ಅವಮಾನ
Image
ಪ್ರಿಯಾಂಕಾ ಪತಿ ನಿಕ್ ಜೋನಸ್​ನ ಭೇಟಿ ಮಾಡಿದ ಸಿತಾರಾ ಕುಟುಂಬ

‘ನನ್ನ ತಂದೆಯ ತಂದೆ ಹೆಸರು ಬಾಲಕೃಷ್ಣ ಅಂತ. ನಮ್ಮ ಹಾಸ್ಪಿಟಲ್ ಹೆಸರು ಶ್ರೀಕೃಷ್ಣ. ನನ್ನ ಪತಿಯ ತಂದೆಯ ಹೆಸರು ವಾಸುದೇವ ಅಂತ. ಎಲ್ಲಾ ಒಟ್ಟಿಗೆ ಸೇರಿ ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದೇವೆ’ ಎಂದಿದ್ದಾರೆ ಪ್ರಣಿತಾ.

ಪ್ರಣಿತಾ ಹಾಗೂ ಉದ್ಯಮಿ ನಿತಿನ್ ಜೋಡಿ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿತ್ತು. ಈ ದಂಪತಿಗೆ 2022ರಲ್ಲಿ ಹೆಣ್ಣು ಮಗು ಜನಿಸಿತು. ಅವಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಸೆಪ್ಟೆಂಬರ್​​ನಲ್ಲಿ ಪ್ರಣಿತಾ ಗಂಡು ಮಗುವನ್ನು ಬರಮಾಡಿಕೊಂಡಿದ್ದು, ಈಗ ನಾಮಕರಣ ಶಾಸ್ತ್ರ ನಡೆದಿದೆ.

ಪ್ರಣಿತಾ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರವೇ ಇದ್ದಾರೆ. ಸದ್ಯ ಅವರು ಎರಡನೇ ಮಗುವಿನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಹೊಸ ಸಿನಿಮಾ ಘೋಷಣೆ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಎರಡನೇ ಮಗುವಿಗೆ ಜನ್ಮಕೊಟ್ಟ ಪ್ರಣಿತಾ ಸುಭಾಷ್; ಒಂದೇ ದಿನ ಎರಡು ನಟಿಯರಿಂದ ಗುಡ್​ನ್ಯೂಸ್

ಮಿಲನಾಗೆ ಮಗು

ಪ್ರಣಿತಾ ಅವರಿಗೆ ಮಗು ಜನಿಸಿದ ದಿನವೇ ಮಿಲನಾ ನಾಗರಾಜ್​ಗೆ ಮಗು ಜನಿಸಿತ್ತು. ಅವರಿಗೆ ಹೆಣ್ಣು ಮಗು ಜನಿಸಿದ್ದು, ಪರಿ ಎಂದು ಹೆಸರು ಇಡಲಾಗಿದೆ. ಕಳೆದ ವರ್ಷ ಬಾಲಿವುಡ್​ನ ದೀಪಿಕಾ ಪಡುಕೋಣೆ, ಕನ್ನಡದ ಕಿರುತೆರೆ ನಟಿಯರಾದ ನೇಹಾ ಗೌಡ, ಕವಿತಾ ಗೌಡ ಅವರಿಗೂ ಮಗು ಜನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು