ವಿವಾಹೇತರ ಸಂಬಂಧ, ವಿಚ್ಛೇದನ, ಆಕರ್ಷಣೆ ಕುರಿತ ‘ಪ್ರಾಪ್ತಿ’ ಸಿನಿಮಾ ಬಿಡುಗಡೆಗೆ ಸಿದ್ಧ

‘ಪ್ರಾಪ್ತಿ’ ಸಿನಿಮಾಗೆ ಈಗಾಗಲೇ ಸೆನ್ಸಾರ್‌ ಪ್ರಕ್ರಿಯೆ ಮುಗಿದಿದೆ. ಯುಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಪ್ರಚಾರ ಕಾರ್ಯ ಆರಂಭ ಆಗಿದ್ದು, ಅದರ ಮೊದಲ ಹಂತವಾಗಿ 3 ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಜಯಸೂರ್ಯ, ಗೌರಿ ಸಾಗರ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಡಾ. ಎಸ್​. ಮಹೇಶ್​ ಬಾಬು ಅವರ ನಿರ್ಮಾಣ, ನಿರ್ದೇಶನ ಈ ಚಿತ್ರಕ್ಕಿದೆ.

ವಿವಾಹೇತರ ಸಂಬಂಧ, ವಿಚ್ಛೇದನ, ಆಕರ್ಷಣೆ ಕುರಿತ ‘ಪ್ರಾಪ್ತಿ’ ಸಿನಿಮಾ ಬಿಡುಗಡೆಗೆ ಸಿದ್ಧ
‘ಪ್ರಾಪ್ತಿ’ ಸಿನಿಮಾ ಟ್ರೇಲರ್​ ಲಾಂಚ್ ಕಾರ್ಯಕ್ರಮ
Follow us
|

Updated on: Oct 03, 2024 | 9:06 PM

ಸಿನಿಮಾಗೆ ಗಡಿ ಇಲ್ಲ. ಅಕ್ಕಪಕ್ಕದ ರಾಜ್ಯಗಳ ಮಂದಿ ಕೂಡ ಸ್ಯಾಂಡಲ್​ವುಡ್​​ನಲ್ಲಿ ಸಕ್ರಿಯರಾಗಿದ್ದಾರೆ. ಅದಕ್ಕೆ ಡಾ. ಎಸ್. ಮಹೇಶ್ ಬಾಬು ಅವರು ಕೂಡ ಉದಾಹರಣೆ. ಊಟಿ ಮೂಲದವರಾದ ಅವರಿಗೆ ಬಾಲ್ಯದಿಂದಲೂ ಸಿನಿಮಾದ ಕುರಿತು ಆಸಕ್ತಿ ಇತ್ತು. ಉನ್ನತ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಅವರು ಬೆಂಗಳೂರಿನಲ್ಲಿ ರೆರ್ಕಾಡಿಂಗ್ ಸ್ಟುಡಿಯೋ ಆರಂಭಿಸಿದರು. ಈ ಮೊದಲು ಬಡಗ ಸಮುದಾಯದ ಬಗ್ಗೆ ಅವರು ಸಿನಿಮಾ ಮಾಡಿದ್ದರು. ಈಗ ‘ಪ್ರಾಪ್ತಿ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸಂಗೀತ ಮತ್ತು ಸಂಕಲನದ ಜವಾಬ್ದಾರಿ ಕೂಡ ಅವರದ್ದೇ.

‘ಸಿಸಿ ಕ್ರಿಯೇಶನ್ಸ್’ ಮೂಲಕ ಡಾ. ಎಸ್​. ಮಹೇಶ್​ ಬಾಬು ಅವರೇ ‘ಪ್ರಾಪ್ತಿ ಸಿನಿಮಾವನ್ನು ನಿರ್ಮಿಸಿದ್ದಾರೆ. ‘ವಿಧಿ ನಿಗದಿಯಾಗಿದೆ’ ಎಂಬ ಟ್ಯಾಗ್​ಲೈನ್​ ಈ ಸಿನಿಮಾಗೆ ಇದೆ. ಸಿನಿಮಾ ಬಗ್ಗೆ ಮಹೇಶ್ ಅವರು ಮಾಹಿತಿ ನೀಡಿದರು. ‘ಈಗಿನ ಕಾಲಘಟ್ಟದಲ್ಲಿ ನಡೆಯುವ 3 ಅಂಶಗಳನ್ನು ಇಟ್ಟುಕೊಂಡು ಪ್ರೇಕ್ಷಕರಿಗೆ ಸಂದೇಶ ನೀಡುವಂತಹ ಸಿನಿಮಾ ಮಾಡಿದ್ದೇವೆ. ವಿವಾಹೇತರ ಸಂಬಂಧ. ಅದರಿಂದ ಪತಿ-ಪತ್ನಿ ನಡುವೆ ಬಿರುಕು ಮೂಡುತ್ತಿದೆ. ಅದು ವಿಚ್ಚೇದನಕ್ಕೆ ಕಾರಣ ಆಗುತ್ತದೆ. ಯುವಜನರಲ್ಲಿ ಆಕರ್ಷಣೆ ಹೆಚ್ಚಿದೆ. ಇಂಥ ಸಂಗತಿಗಳಿಂದ ಅವರು ಮಾನಸಿಕವಾಗಿ ಕುಗ್ಗುತ್ತಾರೆ. ಈ ಅಂಶಗಳ ಜೊತೆಗೆ ಸ್ಟೆಸ್ಪೆನ್ಸ್-ಥ್ರಿಲ್ಲರ್ ಕಹಾನಿ ಇದೆ. ಈಗಿನ ತಲೆಮಾರಿನವರನ್ನು ಬದಲಾಯಿಸುವ ಸಂದೇಶ ಇದೆ’ ಎಂದಿದ್ದಾರೆ.

ಈ ಸಿನಿಮಾದಲ್ಲಿ ಜಯಸೂರ್ಯ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಖ್ಯಾತ ಸಿಂಗರ್​ ಮಂಜುಳಾ ಗುರುರಾಜ್ ಅವರ ಸೊಸೆ ಗೌರಿ ಸಾಗರ್ ವೃತ್ತಿಯಲ್ಲಿ ಡ್ಯಾನ್ಸರ್ ಆಗಿದ್ದು, ಈ ಚಿತ್ರದಲ್ಲೂ ಅದೇ ಪಾತ್ರವನ್ನು ಮಾಡಿದ್ದಾರೆ. ನಿಖಿತಾ ರಾಮ್, ಮೋನಿಷಾ ಥಾಮಸ್, ಕಳಸ ಮಂಜುನಾಥ್, ಅಜಿತ್‌ ಜೈನ್, ಕಮಲ್‌ ಜಿಮಿರಾಯ್, ಮಂಜುಳಾ ರೆಡ್ಡಿ, ರಾಮಮೂರ್ತಿ, ಪ್ರಕೃತಿ, ಮೇಘರಾಜ ಕುಮಾರ್, ನಿಹಾರಿಕಾ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕುಮಾರ್‌ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಗೌರಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ ಹೊಸಬರ ‘ವೈಭೋಗ’; ಇದು ‘ಯು ಟರ್ನ್​ 2’ ನಿರ್ದೇಶಕನ ಹೊಸ ಸಿನಿಮಾ​

ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಹಿರಿಯ ನಿರ್ದೇಶಕ ಸಾಯಿ ಪ್ರಕಾಶ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ತುಣುಕುಗಳು ಕುತೂಹಲ ಮೂಡಿಸುತ್ತಿದೆ. ನಿರ್ಮಾಪಕರು ತಮಿಳಿನವರಾದರೂ ಕನ್ನಡದ ಮೇಲಿನ ಅಭಿಮಾನದಿಂದ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕರು ಎಲ್ಲಿಂದ ಬಂದರು ಎಂಬುದು ಮುಖ್ಯವಲ್ಲ. ಯಾವ ಭಾಷೆಯ ಸಿನಿಮಾವನ್ನು ಮಾಡಿದ್ದಾರೆ ಎಂಬುದನ್ನು ನೋಡಬೇಕು. ಇಂಥವರ ಅವಶ್ಯಕತೆ ಚಿತ್ರೋದ್ಯಮಕ್ಕೆ ಇದೆ’ ಎಂದರು. ಆಡುಗೋಡಿ ಶ್ರೀನಿವಾಸ್, ವಿಕ್ಟರಿ ವಾಸು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ