AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹೇತರ ಸಂಬಂಧ, ವಿಚ್ಛೇದನ, ಆಕರ್ಷಣೆ ಕುರಿತ ‘ಪ್ರಾಪ್ತಿ’ ಸಿನಿಮಾ ಬಿಡುಗಡೆಗೆ ಸಿದ್ಧ

‘ಪ್ರಾಪ್ತಿ’ ಸಿನಿಮಾಗೆ ಈಗಾಗಲೇ ಸೆನ್ಸಾರ್‌ ಪ್ರಕ್ರಿಯೆ ಮುಗಿದಿದೆ. ಯುಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಪ್ರಚಾರ ಕಾರ್ಯ ಆರಂಭ ಆಗಿದ್ದು, ಅದರ ಮೊದಲ ಹಂತವಾಗಿ 3 ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಜಯಸೂರ್ಯ, ಗೌರಿ ಸಾಗರ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಡಾ. ಎಸ್​. ಮಹೇಶ್​ ಬಾಬು ಅವರ ನಿರ್ಮಾಣ, ನಿರ್ದೇಶನ ಈ ಚಿತ್ರಕ್ಕಿದೆ.

ವಿವಾಹೇತರ ಸಂಬಂಧ, ವಿಚ್ಛೇದನ, ಆಕರ್ಷಣೆ ಕುರಿತ ‘ಪ್ರಾಪ್ತಿ’ ಸಿನಿಮಾ ಬಿಡುಗಡೆಗೆ ಸಿದ್ಧ
‘ಪ್ರಾಪ್ತಿ’ ಸಿನಿಮಾ ಟ್ರೇಲರ್​ ಲಾಂಚ್ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Oct 03, 2024 | 9:06 PM

Share

ಸಿನಿಮಾಗೆ ಗಡಿ ಇಲ್ಲ. ಅಕ್ಕಪಕ್ಕದ ರಾಜ್ಯಗಳ ಮಂದಿ ಕೂಡ ಸ್ಯಾಂಡಲ್​ವುಡ್​​ನಲ್ಲಿ ಸಕ್ರಿಯರಾಗಿದ್ದಾರೆ. ಅದಕ್ಕೆ ಡಾ. ಎಸ್. ಮಹೇಶ್ ಬಾಬು ಅವರು ಕೂಡ ಉದಾಹರಣೆ. ಊಟಿ ಮೂಲದವರಾದ ಅವರಿಗೆ ಬಾಲ್ಯದಿಂದಲೂ ಸಿನಿಮಾದ ಕುರಿತು ಆಸಕ್ತಿ ಇತ್ತು. ಉನ್ನತ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಅವರು ಬೆಂಗಳೂರಿನಲ್ಲಿ ರೆರ್ಕಾಡಿಂಗ್ ಸ್ಟುಡಿಯೋ ಆರಂಭಿಸಿದರು. ಈ ಮೊದಲು ಬಡಗ ಸಮುದಾಯದ ಬಗ್ಗೆ ಅವರು ಸಿನಿಮಾ ಮಾಡಿದ್ದರು. ಈಗ ‘ಪ್ರಾಪ್ತಿ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸಂಗೀತ ಮತ್ತು ಸಂಕಲನದ ಜವಾಬ್ದಾರಿ ಕೂಡ ಅವರದ್ದೇ.

‘ಸಿಸಿ ಕ್ರಿಯೇಶನ್ಸ್’ ಮೂಲಕ ಡಾ. ಎಸ್​. ಮಹೇಶ್​ ಬಾಬು ಅವರೇ ‘ಪ್ರಾಪ್ತಿ ಸಿನಿಮಾವನ್ನು ನಿರ್ಮಿಸಿದ್ದಾರೆ. ‘ವಿಧಿ ನಿಗದಿಯಾಗಿದೆ’ ಎಂಬ ಟ್ಯಾಗ್​ಲೈನ್​ ಈ ಸಿನಿಮಾಗೆ ಇದೆ. ಸಿನಿಮಾ ಬಗ್ಗೆ ಮಹೇಶ್ ಅವರು ಮಾಹಿತಿ ನೀಡಿದರು. ‘ಈಗಿನ ಕಾಲಘಟ್ಟದಲ್ಲಿ ನಡೆಯುವ 3 ಅಂಶಗಳನ್ನು ಇಟ್ಟುಕೊಂಡು ಪ್ರೇಕ್ಷಕರಿಗೆ ಸಂದೇಶ ನೀಡುವಂತಹ ಸಿನಿಮಾ ಮಾಡಿದ್ದೇವೆ. ವಿವಾಹೇತರ ಸಂಬಂಧ. ಅದರಿಂದ ಪತಿ-ಪತ್ನಿ ನಡುವೆ ಬಿರುಕು ಮೂಡುತ್ತಿದೆ. ಅದು ವಿಚ್ಚೇದನಕ್ಕೆ ಕಾರಣ ಆಗುತ್ತದೆ. ಯುವಜನರಲ್ಲಿ ಆಕರ್ಷಣೆ ಹೆಚ್ಚಿದೆ. ಇಂಥ ಸಂಗತಿಗಳಿಂದ ಅವರು ಮಾನಸಿಕವಾಗಿ ಕುಗ್ಗುತ್ತಾರೆ. ಈ ಅಂಶಗಳ ಜೊತೆಗೆ ಸ್ಟೆಸ್ಪೆನ್ಸ್-ಥ್ರಿಲ್ಲರ್ ಕಹಾನಿ ಇದೆ. ಈಗಿನ ತಲೆಮಾರಿನವರನ್ನು ಬದಲಾಯಿಸುವ ಸಂದೇಶ ಇದೆ’ ಎಂದಿದ್ದಾರೆ.

ಈ ಸಿನಿಮಾದಲ್ಲಿ ಜಯಸೂರ್ಯ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಖ್ಯಾತ ಸಿಂಗರ್​ ಮಂಜುಳಾ ಗುರುರಾಜ್ ಅವರ ಸೊಸೆ ಗೌರಿ ಸಾಗರ್ ವೃತ್ತಿಯಲ್ಲಿ ಡ್ಯಾನ್ಸರ್ ಆಗಿದ್ದು, ಈ ಚಿತ್ರದಲ್ಲೂ ಅದೇ ಪಾತ್ರವನ್ನು ಮಾಡಿದ್ದಾರೆ. ನಿಖಿತಾ ರಾಮ್, ಮೋನಿಷಾ ಥಾಮಸ್, ಕಳಸ ಮಂಜುನಾಥ್, ಅಜಿತ್‌ ಜೈನ್, ಕಮಲ್‌ ಜಿಮಿರಾಯ್, ಮಂಜುಳಾ ರೆಡ್ಡಿ, ರಾಮಮೂರ್ತಿ, ಪ್ರಕೃತಿ, ಮೇಘರಾಜ ಕುಮಾರ್, ನಿಹಾರಿಕಾ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕುಮಾರ್‌ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಗೌರಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ ಹೊಸಬರ ‘ವೈಭೋಗ’; ಇದು ‘ಯು ಟರ್ನ್​ 2’ ನಿರ್ದೇಶಕನ ಹೊಸ ಸಿನಿಮಾ​

ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಹಿರಿಯ ನಿರ್ದೇಶಕ ಸಾಯಿ ಪ್ರಕಾಶ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ತುಣುಕುಗಳು ಕುತೂಹಲ ಮೂಡಿಸುತ್ತಿದೆ. ನಿರ್ಮಾಪಕರು ತಮಿಳಿನವರಾದರೂ ಕನ್ನಡದ ಮೇಲಿನ ಅಭಿಮಾನದಿಂದ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕರು ಎಲ್ಲಿಂದ ಬಂದರು ಎಂಬುದು ಮುಖ್ಯವಲ್ಲ. ಯಾವ ಭಾಷೆಯ ಸಿನಿಮಾವನ್ನು ಮಾಡಿದ್ದಾರೆ ಎಂಬುದನ್ನು ನೋಡಬೇಕು. ಇಂಥವರ ಅವಶ್ಯಕತೆ ಚಿತ್ರೋದ್ಯಮಕ್ಕೆ ಇದೆ’ ಎಂದರು. ಆಡುಗೋಡಿ ಶ್ರೀನಿವಾಸ್, ವಿಕ್ಟರಿ ವಾಸು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು