AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel Birthday: ಪ್ರಶಾಂತ್ ನೀಲ್​ಗೆ​ ಹುಟ್ಟುಹಬ್ಬದ ಸಂಭ್ರಮ; ಸ್ಟಾರ್​ ಡೈರೆಕ್ಟರ್​ ಈ ಬಾರಿ ಜನ್ಮದಿನ ಸೆಲೆಬ್ರೇಟ್​ ಮಾಡಿದ್ದು ಯಾರ ಜೊತೆ?

Happy Birthday Prashanth Neel: ಎಲ್ಲರೂ ಒಟ್ಟಾಗಿ ಕೇಕ್​ ಕಟ್​ ಮಾಡುತ್ತಿರುವ ಫೋಟೋ ವೈರಲ್​ ಆಗಿದೆ. ಅಭಿಮಾನಿಗಳು ಪ್ರಶಾಂತ್​ ನೀಲ್​ಗೆ ವಿಶ್​ ಮಾಡುತ್ತಿದ್ದಾರೆ.

Prashanth Neel Birthday: ಪ್ರಶಾಂತ್ ನೀಲ್​ಗೆ​ ಹುಟ್ಟುಹಬ್ಬದ ಸಂಭ್ರಮ; ಸ್ಟಾರ್​ ಡೈರೆಕ್ಟರ್​ ಈ ಬಾರಿ ಜನ್ಮದಿನ ಸೆಲೆಬ್ರೇಟ್​ ಮಾಡಿದ್ದು ಯಾರ ಜೊತೆ?
ಪ್ರಶಾಂತ್​ ನೀಲ್​ ಬರ್ತ್​ಡೇ ಸೆಲೆಬ್ರೇಷನ್​
ಮದನ್​ ಕುಮಾರ್​
|

Updated on: Jun 04, 2023 | 7:27 AM

Share

ಕನ್ನಡದ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರು ದೇಶಾದ್ಯಂತ ಖ್ಯಾತಿ ಹೊಂದಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಅವರಿಗೆ ಈ ಪರಿ ಪ್ರಸಿದ್ಧಿ ಸಿಕ್ಕಿದೆ. ಇಂದು (ಜೂನ್​ 4) ಅವರ ಜನ್ಮದಿನವನ್ನು (Prashanth Neel Birthday) ಅಭಿಮಾನಿಗಳು ಸೆಲೆಬ್ರೇಟ್​ ಮಾಡುತ್ತಿದ್ದಾರೆ. ನಿನ್ನೆ ರಾತ್ರಿಯೇ ಸೆಲೆಬ್ರೇಷನ್​ ಶುರುವಾಗಿದೆ. ವಿಶೇಷ ಎಂದರೆ, ಈ ಬಾರಿ ಪ್ರಶಾಂತ್ ನೀಲ್​ ಅವರು ಪ್ಯಾನ್ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಜೊತೆ ‘ಹೊಂಬಾಳೆ ಫಿಲ್ಮ್ಸ್​’ನ ವಿಜಯ್​ ಕಿರಗಂದೂರು ಕೂಡ ಸಾಥ್​ ನೀಡಿದ್ದಾರೆ. ಎಲ್ಲರೂ ಒಟ್ಟಾಗಿ ಕೇಕ್​ ಕಟ್​ ಮಾಡುತ್ತಿರುವ ಫೋಟೋ ವೈರಲ್​ ಆಗಿದೆ. ಅಭಿಮಾನಿಗಳು ಪ್ರಶಾಂತ್​ ನೀಲ್​ಗೆ ವಿಶ್​ ಮಾಡುತ್ತಿದ್ದಾರೆ. ಪ್ರಸ್ತುತ ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

‘ಕೆಜಿಎಫ್​’ ಸಿನಿಮಾ ಬಾಕ್ಲ್​ ಬಸ್ಟರ್​ ಹಿಟ್​ ಆಗುತ್ತಿದ್ದಂತೆಯೇ ಪ್ರಶಾಂತ್​ ನೀಲ್​ ಅವರಿಗೆ ಟಾಲಿವುಡ್​ನಿಂದ ಸಾಕಷ್ಟು ಆಫರ್​ ಬರಲು ಆರಂಭ ಆಯಿತು. ಆ ಪೈಕಿ ಅವರು ಕೆಲವೇ ಪ್ರಾಜೆಕ್ಟ್​ಗಳಿಗೆ ಸಹಿ ಮಾಡಿದರು. ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಸಲಾರ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಂಡ ಬಳಿಕ ಜೂನಿಯರ್​ ಎನ್​ಟಿಆರ್​ ನಟನೆಯ 31ನೇ ಸಿನಿಮಾಗೆ ಅವರು ನಿರ್ದೇಶನ ಮಾಡಲಿದ್ದಾರೆ. ಸದ್ಯಕ್ಕೆ ‘ಸಲಾರ್​’ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ. ಕೆಲಸದ ಮಧ್ಯೆ ಬ್ರೇಕ್​ ಪಡೆದು ಈ ಚಿತ್ರತಂಡದವರು ಪ್ರಶಾಂತ್​ ನೀಲ್​ ಅವರ ಬರ್ತ್​ಡೇ ಸೆಲೆಬ್ರೇಟ್​ ಮಾಡಿದ್ದಾರೆ.

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಡಿವಿವಿ ಎಂಟರ್​ಟೇನ್​ಮೆಂಟ್ಸ್​’ ಕೂಡ ಪ್ರಭಾಸ್​ಗೆ ವಿಶ್​ ಮಾಡಿದೆ. ಜೂನಿಯರ್​ ಎನ್​ಟಿಆರ್​ ಹಾಗೂ ಪ್ರಭಾಸ್​ ಫ್ಯಾನ್ಸ್​ ಪೇಜ್​ಗಳಲ್ಲಿ ಪ್ರಶಾಂತ್​ ನೀಲ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹರಿದುಬಂದಿದೆ. ತೆಲುಗು ಚಿತ್ರರಂಗದಲ್ಲಿ ಪ್ರಶಾಂತ್​ ನೀಲ್​ ಅವರಿಗೆ ಸಖತ್​ ಬೇಡಿಕೆ ಇದೆ. ‘ಕೆಜಿಎಫ್​: ಚಾಪ್ಟರ್​ 2’ ಗೆದ್ದ ಬಳಿಕ ಪ್ರಭಾಸ್​ ಅವರು ಪರಭಾಷೆಯ ಹೀರೋಗಳ ಜೊತೆ ಸಿನಿಮಾ ಮಾಡಲು ಮುಂದಾಗಿದ್ದರಿಂದ ಕೆಲವರು ಟೀಕೆ ಮಾಡಿದ್ದರು. ಅವರು ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗಬಾರದು ಎಂದು ಬಹುತೇಕರು ಅಭಿಪ್ರಾಯಪಟ್ಟರು. ಈ ಬಗ್ಗೆ ಈಗಲೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಲೇ ಇದೆ.

ಇದನ್ನೂ ಓದಿ: ನಿರ್ದೇಶಕ ಪ್ರಶಾಂತ್ ನೀಲ್​ರ ಸಲಾರ್ ಸಿನಿಮಾದ 100ರ ಸೀಕ್ರೇಟ್ ಏನು?

ಇನ್ನು, ‘ಕೆಜಿಎಫ್​: ಚಾಪ್ಟರ್​ 3’ ಬಗ್ಗೆ ಬಹಳ ನಿರೀಕ್ಷೆ ಇದೆ. ಆ ಬಗ್ಗೆ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಅದಕ್ಕೂ ಮುನ್ನ ‘ಸಲಾರ್​’ ಟೀಸರ್​ ನೋಡಲು ಕಾತುರು ಹೆಚ್ಚಿದೆ. ಶೀಘ್ರದಲ್ಲೇ ಈ ಟೀಸರ್​ ಬಿಡುಗಡೆ ಆಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ಪ್ರಶಾಂತ್​ ನೀಲ್​ ಅವರ ಹುಟ್ಟುದ ಪ್ರಯುಕ್ತ ಹಳೇ ಸಂದರ್ಶನದ ತುಣುಕುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕವೂ ನೆಚ್ಚಿನ ನಿರ್ದೇಶಕನಿಗೆ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್