AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel Birthday: ಸಾವಿರ ಕೋಟಿ ರೂ. ಬಿಸ್ನೆಸ್​ ಮಾಡಿಕೊಟ್ಟ ಪ್ರಶಾಂತ್​ ನೀಲ್​ಗೆ ಈ ವರ್ಷದ ಹುಟ್ಟುಹಬ್ಬ ಸಿಕ್ಕಾಪಟ್ಟೆ ಸ್ಪೆಷಲ್​

Happy Birthday Prashanth Neel: ಪ್ರಶಾಂತ್​ ನೀಲ್​ ಜನ್ಮದಿನಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

Prashanth Neel Birthday: ಸಾವಿರ ಕೋಟಿ ರೂ. ಬಿಸ್ನೆಸ್​ ಮಾಡಿಕೊಟ್ಟ ಪ್ರಶಾಂತ್​ ನೀಲ್​ಗೆ ಈ ವರ್ಷದ ಹುಟ್ಟುಹಬ್ಬ ಸಿಕ್ಕಾಪಟ್ಟೆ ಸ್ಪೆಷಲ್​
ಪ್ರಶಾಂತ್ ನೀಲ್
TV9 Web
| Edited By: |

Updated on: Jun 04, 2022 | 7:20 AM

Share

ಭಾರತೀಯ ಚಿತ್ರರಂಗದ ಸ್ಟಾರ್​ ನಿರ್ದೇಶಕರ ಪಟ್ಟಿಯಲ್ಲಿ ಕನ್ನಡಿಗ ಪ್ರಶಾಂತ್​ ನೀಲ್​ (Prashanth Neel) ಕೂಡ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಅವರ ಜೊತೆ ಸಿನಿಮಾ ಮಾಡಲು ಅನೇಕ ಘಟಾನುಘಟಿ ನಟರೆಲ್ಲ ಕಾದಿದ್ದಾರೆ. ಅಂಥ ಬಹುಬೇಡಿಕೆಯ ನಿರ್ದೇಶಕನಿಗೆ ಇಂದು (ಜೂನ್​ 4) ಜನ್ಮದಿನದ ಸಂಭ್ರಮ. ಪ್ರಶಾಂತ್​ ನೀಲ್​ ಅವರ ಹುಟ್ಟುಹಬ್ಬದ (Prashanth Neel Birthday) ಪ್ರಯುಕ್ತ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಫ್ಯಾನ್ಸ್ ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅವರಿಗೆ ವಿಶ್​ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಗೆಲುವಿನ ಬಳಿಕ ಪ್ರಶಾಂತ್​ ನೀಲ್​ ಅವರನ್ನು ಜನರು ನೋಡುವ ರೀತಿಯೇ ಬದಲಾಗಿದೆ. ಓರ್ವ ಮಾಂತ್ರಿಕನ ರೀತಿಯಲ್ಲಿ ಅವರು ಬಾಕ್ಸ್ ಆಫೀಸ್​ನಲ್ಲಿ ಮೋಡಿ ಮಾಡಿ ತೋರಿಸಿದ್ದಾರೆ. ಪರಭಾಷೆಯ ಮಂದಿಯೆಲ್ಲ ಕನ್ನಡ ಚಿತ್ರರಂಗದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಖ್ಯಾತಿ ಪ್ರಶಾಂತ್​ ನೀಲ್​ ಅವರಿಗೆ ಸಲ್ಲುತ್ತದೆ. ಈ ಬಾರಿಯ ಬರ್ತ್​ಡೇ ಅವರಿಗೆ ತುಂಬಾನೇ ಸ್ಪೆಷಲ್​. ಯಾಕೆಂದರೆ ‘ಕೆಜಿಎಫ್​ 2’ ಸಿನಿಮಾ ಮೂಲಕ ಅವರು 1200 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್​ ಮಾಡಿಕೊಟ್ಟು ಮಹಾನ್​ ಸಾಧನೆ ಮಾಡಿದ್ದಾರೆ. ಚಿತ್ರಮಂದಿರಗಳಲ್ಲಿ ಇನ್ನೂ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಆ ಖುಷಿಯ ಜೊತೆಯಲ್ಲೇ ಪ್ರಶಾಂತ್​ ನೀಲ್​ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಿದ ಸಾಧನೆ ಸಣ್ಣದಲ್ಲ. ಇಡೀ ಭಾರತೀಯ ಚಿತ್ರರಂಗವೇ ಪ್ರಶಾಂತ್ ನೀಲ್​ ಕಾರ್ಯವನ್ನು ಕೊಂಡಾಡುತ್ತಿದೆ. ಬಾಲಿವುಡ್​ ಮಂದಿಗೂ ಭಯ ಹುಟ್ಟಿಸುವ ರೀತಿಯಲ್ಲಿ ಕನ್ನಡದ ಈ ಸಿನಿಮಾ ಗೆದ್ದು ತೋರಿಸಿದೆ. ಕ್ಯಾಪ್ಟನ್​ ಆಫ್​ ದಿ ಶಿಪ್​ ಆಗಿರುವ ಪ್ರಶಾಂತ್​ ನೀಲ್​ ಅವರಿಗೆ ಈ ಗೆಲುವಿನ ಕ್ರೆಡಿಟ್​ ಸಲ್ಲಬೇಕು. ಈಗ ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಕೂಡ ಈ ಸಿನಿಮಾ ಪ್ರಸಾರ ಆಗುತ್ತಿದೆ. ಒಟ್ಟಿನಲ್ಲಿ ಎಲ್ಲೆಲ್ಲೂ ಪ್ರಶಾಂತ್​ ನೀಲ್​ ಅವರ ಗುಣಗಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ನಾಯಕಿ ಪ್ರಧಾನ ಸಿನಿಮಾ ಮಾಡ್ತಾರಾ ಪ್ರಶಾಂತ್​ ನೀಲ್​? ಇಂಥ ಗಾಸಿಪ್​ ಹರಡಲು ಕಾರಣ ಇಲ್ಲಿದೆ..

ಇದನ್ನೂ ಓದಿ
Image
3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ
Image
‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ
Image
‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​
Image
ಪ್ರಶಾಂತ್​ ನೀಲ್​ ಕಣ್ಣು ತಪ್ಪಿಸಿ ಪ್ರಭಾಸ್​ ವಿಡಿಯೋ ಲೀಕ್​? ಸಲಾರ್​ ಸೆಟ್​​ನಲ್ಲಿ ಕಿತಾಪತಿ

ಒಂದು ಸಿನಿಮಾ ಮೂಲಕ ಗೆಲುವು ಪಡೆದು ಜನರ ಅಭಿಮಾನ ಗಳಿಸುವುದು ಎಷ್ಟು ಮುಖ್ಯವೋ ಆ ಅಭಿಮಾನವನ್ನು ಉಳಿಸಿಕೊಂಡು ಹೋಗುವುದು ಅದಕ್ಕಿಂತಲೂ ಹೆಚ್ಚು ಮುಖ್ಯ. ಹಾಗಾಗಿ ಪ್ರಶಾಂತ್​ ನೀಲ್ ಅವರು ಮುಂಬರುವ ಸಿನಿಮಾಗಳ ಮೇಲೆ ಹೆಚ್ಚು ಶ್ರಮ ಹಾಕಬೇಕಿದೆ. ಈಗ ಅವರು ಪ್ರಭಾಸ್​ ಜೊತೆ ‘ಸಲಾರ್​’ ಸಿನಿಮಾ ಮಾಡುತ್ತಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್​’ ಮೂಲಕ ಸೋಲುಂಡಿರುವ ಪ್ರಭಾಸ್​ಗೆ ಗೆಲುವು ಕೊಡಿಸುವ ದೊಡ್ಡ ಜವಾಬ್ದಾರಿ ಪ್ರಶಾಂತ್ ನೀಲ್​ ಹೆಗಲ ಮೇಲಿದೆ.

ಇದನ್ನೂ ಓದಿ: ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು

ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರಲ್ಲಿ ಪ್ರಶಾಂತ್​ ನೀಲ್​ ಕೂಡ ಒಬ್ಬರಾಗಿದ್ದಾರೆ. ಮುಂಬರುವ ಸಿನಿಮಾಗಳಿಗೆ ಅವರು ಬಹುಕೋಟಿ ರೂಪಾಯಿ ಸಂಬಳ ಪಡೆಯಲಿದ್ದಾರೆ. ಇತ್ತೀಚೆಗಷ್ಟೇ ಅವರು ಜ್ಯೂ. ಎನ್​ಟಿಆರ್​ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಪ್ರಾಜೆಕ್ಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇನ್ನು, ‘ಕೆಜಿಎಫ್​ 3’ ಯಾವಾಗ ಸೆಟ್ಟೇರಲಿದೆ ಎಂಬ ಕೌತುಕ ಕೂಡ ಅಭಿಮಾನಿಗಳ ಮನದಲ್ಲಿ ಮೂಡಿದೆ.

ಇದನ್ನೂ ಓದಿ: 3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

ಎಷ್ಟೋ ಮಂದಿ ಯುವ ನಿರ್ದೇಶಕರಿಗೆ ಪ್ರಶಾಂತ್​ ನೀಲ್​ ಮಾದರಿ ಆಗಿದ್ದಾರೆ. ಮೇಕಿಂಗ್​ ವಿಚಾರದಲ್ಲಿ ಅವರನ್ನು ನೋಡಿ ಇತರರು ಕಲಿಯುವುದು ಸಾಕಷ್ಟಿದೆ. ‘ಹೊಂಬಾಳೆ ಫಿಲ್ಮ್ಸ್​’, ‘ಮೈತ್ರಿ ಮೂವೀ ಮೇಕರ್ಸ್​’ ಮುಂತಾದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳು ಪ್ರಶಾಂತ್​ ನೀಲ್​ ಜನ್ಮದಿನಕ್ಕೆ ಶುಭ ಕೋರುತ್ತಿವೆ. ಕನ್ನಡ ಚಿತ್ರರಂಗಕ್ಕೆ ಅವರು ಇನ್ನಷ್ಟು ಕೊಡುಗೆ ನೀಡುವಂತಾಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್