Prashanth Neel Birthday: ಸಾವಿರ ಕೋಟಿ ರೂ. ಬಿಸ್ನೆಸ್​ ಮಾಡಿಕೊಟ್ಟ ಪ್ರಶಾಂತ್​ ನೀಲ್​ಗೆ ಈ ವರ್ಷದ ಹುಟ್ಟುಹಬ್ಬ ಸಿಕ್ಕಾಪಟ್ಟೆ ಸ್ಪೆಷಲ್​

Happy Birthday Prashanth Neel: ಪ್ರಶಾಂತ್​ ನೀಲ್​ ಜನ್ಮದಿನಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

Prashanth Neel Birthday: ಸಾವಿರ ಕೋಟಿ ರೂ. ಬಿಸ್ನೆಸ್​ ಮಾಡಿಕೊಟ್ಟ ಪ್ರಶಾಂತ್​ ನೀಲ್​ಗೆ ಈ ವರ್ಷದ ಹುಟ್ಟುಹಬ್ಬ ಸಿಕ್ಕಾಪಟ್ಟೆ ಸ್ಪೆಷಲ್​
ಪ್ರಶಾಂತ್ ನೀಲ್
Follow us
| Updated By: ಮದನ್​ ಕುಮಾರ್​

Updated on: Jun 04, 2022 | 7:20 AM

ಭಾರತೀಯ ಚಿತ್ರರಂಗದ ಸ್ಟಾರ್​ ನಿರ್ದೇಶಕರ ಪಟ್ಟಿಯಲ್ಲಿ ಕನ್ನಡಿಗ ಪ್ರಶಾಂತ್​ ನೀಲ್​ (Prashanth Neel) ಕೂಡ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಅವರ ಜೊತೆ ಸಿನಿಮಾ ಮಾಡಲು ಅನೇಕ ಘಟಾನುಘಟಿ ನಟರೆಲ್ಲ ಕಾದಿದ್ದಾರೆ. ಅಂಥ ಬಹುಬೇಡಿಕೆಯ ನಿರ್ದೇಶಕನಿಗೆ ಇಂದು (ಜೂನ್​ 4) ಜನ್ಮದಿನದ ಸಂಭ್ರಮ. ಪ್ರಶಾಂತ್​ ನೀಲ್​ ಅವರ ಹುಟ್ಟುಹಬ್ಬದ (Prashanth Neel Birthday) ಪ್ರಯುಕ್ತ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಫ್ಯಾನ್ಸ್ ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅವರಿಗೆ ವಿಶ್​ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಗೆಲುವಿನ ಬಳಿಕ ಪ್ರಶಾಂತ್​ ನೀಲ್​ ಅವರನ್ನು ಜನರು ನೋಡುವ ರೀತಿಯೇ ಬದಲಾಗಿದೆ. ಓರ್ವ ಮಾಂತ್ರಿಕನ ರೀತಿಯಲ್ಲಿ ಅವರು ಬಾಕ್ಸ್ ಆಫೀಸ್​ನಲ್ಲಿ ಮೋಡಿ ಮಾಡಿ ತೋರಿಸಿದ್ದಾರೆ. ಪರಭಾಷೆಯ ಮಂದಿಯೆಲ್ಲ ಕನ್ನಡ ಚಿತ್ರರಂಗದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಖ್ಯಾತಿ ಪ್ರಶಾಂತ್​ ನೀಲ್​ ಅವರಿಗೆ ಸಲ್ಲುತ್ತದೆ. ಈ ಬಾರಿಯ ಬರ್ತ್​ಡೇ ಅವರಿಗೆ ತುಂಬಾನೇ ಸ್ಪೆಷಲ್​. ಯಾಕೆಂದರೆ ‘ಕೆಜಿಎಫ್​ 2’ ಸಿನಿಮಾ ಮೂಲಕ ಅವರು 1200 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್​ ಮಾಡಿಕೊಟ್ಟು ಮಹಾನ್​ ಸಾಧನೆ ಮಾಡಿದ್ದಾರೆ. ಚಿತ್ರಮಂದಿರಗಳಲ್ಲಿ ಇನ್ನೂ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಆ ಖುಷಿಯ ಜೊತೆಯಲ್ಲೇ ಪ್ರಶಾಂತ್​ ನೀಲ್​ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಿದ ಸಾಧನೆ ಸಣ್ಣದಲ್ಲ. ಇಡೀ ಭಾರತೀಯ ಚಿತ್ರರಂಗವೇ ಪ್ರಶಾಂತ್ ನೀಲ್​ ಕಾರ್ಯವನ್ನು ಕೊಂಡಾಡುತ್ತಿದೆ. ಬಾಲಿವುಡ್​ ಮಂದಿಗೂ ಭಯ ಹುಟ್ಟಿಸುವ ರೀತಿಯಲ್ಲಿ ಕನ್ನಡದ ಈ ಸಿನಿಮಾ ಗೆದ್ದು ತೋರಿಸಿದೆ. ಕ್ಯಾಪ್ಟನ್​ ಆಫ್​ ದಿ ಶಿಪ್​ ಆಗಿರುವ ಪ್ರಶಾಂತ್​ ನೀಲ್​ ಅವರಿಗೆ ಈ ಗೆಲುವಿನ ಕ್ರೆಡಿಟ್​ ಸಲ್ಲಬೇಕು. ಈಗ ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಕೂಡ ಈ ಸಿನಿಮಾ ಪ್ರಸಾರ ಆಗುತ್ತಿದೆ. ಒಟ್ಟಿನಲ್ಲಿ ಎಲ್ಲೆಲ್ಲೂ ಪ್ರಶಾಂತ್​ ನೀಲ್​ ಅವರ ಗುಣಗಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ನಾಯಕಿ ಪ್ರಧಾನ ಸಿನಿಮಾ ಮಾಡ್ತಾರಾ ಪ್ರಶಾಂತ್​ ನೀಲ್​? ಇಂಥ ಗಾಸಿಪ್​ ಹರಡಲು ಕಾರಣ ಇಲ್ಲಿದೆ..

ಇದನ್ನೂ ಓದಿ
Image
3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ
Image
‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ
Image
‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​
Image
ಪ್ರಶಾಂತ್​ ನೀಲ್​ ಕಣ್ಣು ತಪ್ಪಿಸಿ ಪ್ರಭಾಸ್​ ವಿಡಿಯೋ ಲೀಕ್​? ಸಲಾರ್​ ಸೆಟ್​​ನಲ್ಲಿ ಕಿತಾಪತಿ

ಒಂದು ಸಿನಿಮಾ ಮೂಲಕ ಗೆಲುವು ಪಡೆದು ಜನರ ಅಭಿಮಾನ ಗಳಿಸುವುದು ಎಷ್ಟು ಮುಖ್ಯವೋ ಆ ಅಭಿಮಾನವನ್ನು ಉಳಿಸಿಕೊಂಡು ಹೋಗುವುದು ಅದಕ್ಕಿಂತಲೂ ಹೆಚ್ಚು ಮುಖ್ಯ. ಹಾಗಾಗಿ ಪ್ರಶಾಂತ್​ ನೀಲ್ ಅವರು ಮುಂಬರುವ ಸಿನಿಮಾಗಳ ಮೇಲೆ ಹೆಚ್ಚು ಶ್ರಮ ಹಾಕಬೇಕಿದೆ. ಈಗ ಅವರು ಪ್ರಭಾಸ್​ ಜೊತೆ ‘ಸಲಾರ್​’ ಸಿನಿಮಾ ಮಾಡುತ್ತಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್​’ ಮೂಲಕ ಸೋಲುಂಡಿರುವ ಪ್ರಭಾಸ್​ಗೆ ಗೆಲುವು ಕೊಡಿಸುವ ದೊಡ್ಡ ಜವಾಬ್ದಾರಿ ಪ್ರಶಾಂತ್ ನೀಲ್​ ಹೆಗಲ ಮೇಲಿದೆ.

ಇದನ್ನೂ ಓದಿ: ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು

ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರಲ್ಲಿ ಪ್ರಶಾಂತ್​ ನೀಲ್​ ಕೂಡ ಒಬ್ಬರಾಗಿದ್ದಾರೆ. ಮುಂಬರುವ ಸಿನಿಮಾಗಳಿಗೆ ಅವರು ಬಹುಕೋಟಿ ರೂಪಾಯಿ ಸಂಬಳ ಪಡೆಯಲಿದ್ದಾರೆ. ಇತ್ತೀಚೆಗಷ್ಟೇ ಅವರು ಜ್ಯೂ. ಎನ್​ಟಿಆರ್​ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಪ್ರಾಜೆಕ್ಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇನ್ನು, ‘ಕೆಜಿಎಫ್​ 3’ ಯಾವಾಗ ಸೆಟ್ಟೇರಲಿದೆ ಎಂಬ ಕೌತುಕ ಕೂಡ ಅಭಿಮಾನಿಗಳ ಮನದಲ್ಲಿ ಮೂಡಿದೆ.

ಇದನ್ನೂ ಓದಿ: 3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

ಎಷ್ಟೋ ಮಂದಿ ಯುವ ನಿರ್ದೇಶಕರಿಗೆ ಪ್ರಶಾಂತ್​ ನೀಲ್​ ಮಾದರಿ ಆಗಿದ್ದಾರೆ. ಮೇಕಿಂಗ್​ ವಿಚಾರದಲ್ಲಿ ಅವರನ್ನು ನೋಡಿ ಇತರರು ಕಲಿಯುವುದು ಸಾಕಷ್ಟಿದೆ. ‘ಹೊಂಬಾಳೆ ಫಿಲ್ಮ್ಸ್​’, ‘ಮೈತ್ರಿ ಮೂವೀ ಮೇಕರ್ಸ್​’ ಮುಂತಾದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳು ಪ್ರಶಾಂತ್​ ನೀಲ್​ ಜನ್ಮದಿನಕ್ಕೆ ಶುಭ ಕೋರುತ್ತಿವೆ. ಕನ್ನಡ ಚಿತ್ರರಂಗಕ್ಕೆ ಅವರು ಇನ್ನಷ್ಟು ಕೊಡುಗೆ ನೀಡುವಂತಾಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ