AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

‘ಬಾಹುಬಲಿ’ ಸರಣಿ ಒಪ್ಪಿಕೊಂಡ ಬಳಿಕ ಪ್ರಭಾಸ್​ ಖ್ಯಾತಿ ಹೆಚ್ಚಿದೆ ನಿಜ. ಆದರೆ, ಅವರು ನೀಡುತ್ತಿರುವ ಸಿನಿಮಾ ಸಂಖ್ಯೆ ಕಡಿಮೆ ಆಗಿದೆ. ವರ್ಷಕ್ಕೆ ಒಂದು ಸಿನಿಮಾ ತೆರೆಗೆ ತರುತ್ತಿದ್ದ ಅವರಿಗೆ ಈಗ ಅದು ಸಾಧ್ಯವಾಗುತ್ತಿಲ್ಲ.

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ
ಪ್ರಭಾಸ್​-ಪ್ರಶಾಂತ್​ ನೀಲ್​
TV9 Web
| Edited By: |

Updated on:Jan 30, 2022 | 5:05 PM

Share

ಇತ್ತೀಚಿನ ವರ್ಷಗಳಲ್ಲಿ ಹಲವು ಸಿನಿಮಾಗಳು ಎರಡು ಪಾರ್ಟ್​ನಲ್ಲಿ ತೆರೆಕಾಣುತ್ತಿವೆ. ಎಸ್​.ಎಸ್​. ರಾಜಮೌಳಿ (SS Rajamouli) ನಿರ್ದೇಶನದ ‘ಬಾಹುಬಲಿ’ ಚಿತ್ರ ಎರಡು ಪಾರ್ಟ್​ನಲ್ಲಿ ಬಿಡುಗಡೆ ಆದ ನಂತರದಲ್ಲಿ ಈ ಟ್ರೆಂಡ್​ ಜೋರಾಗಿದೆ. ಕನ್ನಡದ ‘ಕೆಜಿಎಫ್​’ ಸಿನಿಮಾ ಎರಡು ಪಾರ್ಟ್​ಗಳಲ್ಲಿ ರಿಲೀಸ್​ ಆಗುತ್ತಿದೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ (Pushpa Movie) ಕೂಡ ಇದೇ ಹಾಡಿ ಹಿಡಿದಿದೆ. ಈಗ ಮತ್ತೊಂದು ಚಿತ್ರ ಇದೇ ಫಾರ್ಮುಲಾ ಅಳವಡಿಕೆಗೆ ಸಜ್ಜಾಗಿದೆ ಎಂಬ ಮಾತು ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ. ಖ್ಯಾತ ನಟ ಪ್ರಭಾಸ್ (Prabhas)​ ಹಾಗೂ ಜನಪ್ರಿಯ ನಿರ್ದೇಶಕ ಪ್ರಶಾಂತ್​ ನೀಲ್​ ಒಟ್ಟಾಗಿ ಕೆಲಸ ಮಾಡುತ್ತಿರುವ ‘ಸಲಾರ್​’ ಸಿನಿಮಾ ಕೂಡ ಎರಡು ಪಾರ್ಟ್​ಗಳಲ್ಲಿ ಬರಲಿದೆ ಎಂಬ ಸುದ್ದಿ ಜೋರಾಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

‘ಬಾಹುಬಲಿ’ ಸರಣಿ ಒಪ್ಪಿಕೊಂಡ ಬಳಿಕ ಪ್ರಭಾಸ್​ ಖ್ಯಾತಿ ಹೆಚ್ಚಿದೆ ನಿಜ. ಆದರೆ, ಅವರು ನೀಡುತ್ತಿರುವ ಸಿನಿಮಾ ಸಂಖ್ಯೆ ಕಡಿಮೆ ಆಗಿದೆ. ವರ್ಷಕ್ಕೆ ಒಂದು ಸಿನಿಮಾ ತೆರೆಗೆ ತರುತ್ತಿದ್ದ ಅವರಿಗೆ ಈಗ ಅದು ಸಾಧ್ಯವಾಗುತ್ತಿಲ್ಲ. 2013ರಿಂದ 2022ರವರೆಗೆ ಪ್ರಭಾಸ್​ ನಟನೆಯ ನಾಲ್ಕು ಸಿನಿಮಾಗಳು ಮಾತ್ರ ರಿಲೀಸ್​ ಆಗಿವೆ. ಅದರಲ್ಲಿ ‘ಸಾಹೋ’ ಚಿತ್ರ ಮಕಾಡೆ ಮಲಗಿತ್ತು. ಹೀಗಾಗಿ, ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆದರೆ, ಪ್ರಭಾಸ್​ ಎದುರು ಪ್ರಶಾಂತ್​ ನೀಲ್ ವಿಶೇಷ ಮನವಿ ಒಂದನ್ನು ಇಟ್ಟಿದ್ದರು. ಇದನ್ನು ಪ್ರಭಾಸ್​ ಒಪ್ಪಿಕೊಡಿದ್ದಾರೆ ಎನ್ನಲಾಗುತ್ತಿದೆ.

‘ಸಲಾರ್​’ ಕೆಲಸಗಳನ್ನು ಬೇಗ ಪೂರ್ಣಗೊಳಿಸುವಂತೆ ಪ್ರಭಾಸ್​ ಕೋರಿದ್ದರು. ಆದರೆ, ಇದಕ್ಕೆ ನೋ ಎಂದಿದ್ದಾರೆ ಪ್ರಶಾಂತ್​ ನೀಲ್​. ಅವರ ನಿರ್ದೇಶನದ ‘ಕೆಜಿಎಫ್​ 2’ ಇನ್ನೂ ರಿಲೀಸ್​ ಆಗಿಲ್ಲ. ಇದರ ಪ್ರಚಾರ ಕಾರ್ಯಕ್ಕೆ ಅವರು ಹೆಚ್ಚು ಒತ್ತು ನೀಡಬೇಕು. ಹೀಗಾಗಿ, ನಿಧಾನವಾಗಿ ‘ಸಲಾರ್​’ ಕೆಲಸ ಮಾಡುವುದಾಗಿ ಪ್ರಶಾಂತ್​ ನೀಲ್​ ಹೇಳಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಎರಡು ಪಾರ್ಟ್​ನಲ್ಲಿ ‘ಸಲಾರ್​’ ತೆರೆಗೆ ತರೋಕೆ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ.

‘ಸಲಾರ್​’ ಕಥೆಯನ್ನು ತುಂಬಾನೇ ವಿಸ್ತೃತವಾಗಿ ಹೇಳುವ ಅವಶ್ಯಕತೆ ಇದೆ. ಹೀಗಾಗಿ, ಒಂದೇ ಪಾರ್ಟ್​ನಲ್ಲಿ ಎಲ್ಲವನ್ನೂ ತುರುಕುವ ಬದಲು, ಎರಡು ಪಾರ್ಟ್​ಗಳಲ್ಲಿ ಸಿನಿಮಾ ತೆರೆಗೆ ತರಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಮಾಹಿತಿ ಬರಬೇಕಿದೆ. ‘ಪುಷ್ಪ’ ಚಿತ್ರತಂಡಕ್ಕೂ ಶೂಟಿಂಗ್​ ಆರಂಭವಾದ ನಂತರದಲ್ಲಿ ಎರಡು ಪಾರ್ಟ್​​ನಲ್ಲಿ ತರುವ ಆಲೋಚನೆ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

Published On - 4:59 pm, Sun, 30 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ