AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

‘ಬಾಹುಬಲಿ’ ಸರಣಿ ಒಪ್ಪಿಕೊಂಡ ಬಳಿಕ ಪ್ರಭಾಸ್​ ಖ್ಯಾತಿ ಹೆಚ್ಚಿದೆ ನಿಜ. ಆದರೆ, ಅವರು ನೀಡುತ್ತಿರುವ ಸಿನಿಮಾ ಸಂಖ್ಯೆ ಕಡಿಮೆ ಆಗಿದೆ. ವರ್ಷಕ್ಕೆ ಒಂದು ಸಿನಿಮಾ ತೆರೆಗೆ ತರುತ್ತಿದ್ದ ಅವರಿಗೆ ಈಗ ಅದು ಸಾಧ್ಯವಾಗುತ್ತಿಲ್ಲ.

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ
ಪ್ರಭಾಸ್​-ಪ್ರಶಾಂತ್​ ನೀಲ್​
TV9 Web
| Edited By: |

Updated on:Jan 30, 2022 | 5:05 PM

Share

ಇತ್ತೀಚಿನ ವರ್ಷಗಳಲ್ಲಿ ಹಲವು ಸಿನಿಮಾಗಳು ಎರಡು ಪಾರ್ಟ್​ನಲ್ಲಿ ತೆರೆಕಾಣುತ್ತಿವೆ. ಎಸ್​.ಎಸ್​. ರಾಜಮೌಳಿ (SS Rajamouli) ನಿರ್ದೇಶನದ ‘ಬಾಹುಬಲಿ’ ಚಿತ್ರ ಎರಡು ಪಾರ್ಟ್​ನಲ್ಲಿ ಬಿಡುಗಡೆ ಆದ ನಂತರದಲ್ಲಿ ಈ ಟ್ರೆಂಡ್​ ಜೋರಾಗಿದೆ. ಕನ್ನಡದ ‘ಕೆಜಿಎಫ್​’ ಸಿನಿಮಾ ಎರಡು ಪಾರ್ಟ್​ಗಳಲ್ಲಿ ರಿಲೀಸ್​ ಆಗುತ್ತಿದೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ (Pushpa Movie) ಕೂಡ ಇದೇ ಹಾಡಿ ಹಿಡಿದಿದೆ. ಈಗ ಮತ್ತೊಂದು ಚಿತ್ರ ಇದೇ ಫಾರ್ಮುಲಾ ಅಳವಡಿಕೆಗೆ ಸಜ್ಜಾಗಿದೆ ಎಂಬ ಮಾತು ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ. ಖ್ಯಾತ ನಟ ಪ್ರಭಾಸ್ (Prabhas)​ ಹಾಗೂ ಜನಪ್ರಿಯ ನಿರ್ದೇಶಕ ಪ್ರಶಾಂತ್​ ನೀಲ್​ ಒಟ್ಟಾಗಿ ಕೆಲಸ ಮಾಡುತ್ತಿರುವ ‘ಸಲಾರ್​’ ಸಿನಿಮಾ ಕೂಡ ಎರಡು ಪಾರ್ಟ್​ಗಳಲ್ಲಿ ಬರಲಿದೆ ಎಂಬ ಸುದ್ದಿ ಜೋರಾಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

‘ಬಾಹುಬಲಿ’ ಸರಣಿ ಒಪ್ಪಿಕೊಂಡ ಬಳಿಕ ಪ್ರಭಾಸ್​ ಖ್ಯಾತಿ ಹೆಚ್ಚಿದೆ ನಿಜ. ಆದರೆ, ಅವರು ನೀಡುತ್ತಿರುವ ಸಿನಿಮಾ ಸಂಖ್ಯೆ ಕಡಿಮೆ ಆಗಿದೆ. ವರ್ಷಕ್ಕೆ ಒಂದು ಸಿನಿಮಾ ತೆರೆಗೆ ತರುತ್ತಿದ್ದ ಅವರಿಗೆ ಈಗ ಅದು ಸಾಧ್ಯವಾಗುತ್ತಿಲ್ಲ. 2013ರಿಂದ 2022ರವರೆಗೆ ಪ್ರಭಾಸ್​ ನಟನೆಯ ನಾಲ್ಕು ಸಿನಿಮಾಗಳು ಮಾತ್ರ ರಿಲೀಸ್​ ಆಗಿವೆ. ಅದರಲ್ಲಿ ‘ಸಾಹೋ’ ಚಿತ್ರ ಮಕಾಡೆ ಮಲಗಿತ್ತು. ಹೀಗಾಗಿ, ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆದರೆ, ಪ್ರಭಾಸ್​ ಎದುರು ಪ್ರಶಾಂತ್​ ನೀಲ್ ವಿಶೇಷ ಮನವಿ ಒಂದನ್ನು ಇಟ್ಟಿದ್ದರು. ಇದನ್ನು ಪ್ರಭಾಸ್​ ಒಪ್ಪಿಕೊಡಿದ್ದಾರೆ ಎನ್ನಲಾಗುತ್ತಿದೆ.

‘ಸಲಾರ್​’ ಕೆಲಸಗಳನ್ನು ಬೇಗ ಪೂರ್ಣಗೊಳಿಸುವಂತೆ ಪ್ರಭಾಸ್​ ಕೋರಿದ್ದರು. ಆದರೆ, ಇದಕ್ಕೆ ನೋ ಎಂದಿದ್ದಾರೆ ಪ್ರಶಾಂತ್​ ನೀಲ್​. ಅವರ ನಿರ್ದೇಶನದ ‘ಕೆಜಿಎಫ್​ 2’ ಇನ್ನೂ ರಿಲೀಸ್​ ಆಗಿಲ್ಲ. ಇದರ ಪ್ರಚಾರ ಕಾರ್ಯಕ್ಕೆ ಅವರು ಹೆಚ್ಚು ಒತ್ತು ನೀಡಬೇಕು. ಹೀಗಾಗಿ, ನಿಧಾನವಾಗಿ ‘ಸಲಾರ್​’ ಕೆಲಸ ಮಾಡುವುದಾಗಿ ಪ್ರಶಾಂತ್​ ನೀಲ್​ ಹೇಳಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಎರಡು ಪಾರ್ಟ್​ನಲ್ಲಿ ‘ಸಲಾರ್​’ ತೆರೆಗೆ ತರೋಕೆ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ.

‘ಸಲಾರ್​’ ಕಥೆಯನ್ನು ತುಂಬಾನೇ ವಿಸ್ತೃತವಾಗಿ ಹೇಳುವ ಅವಶ್ಯಕತೆ ಇದೆ. ಹೀಗಾಗಿ, ಒಂದೇ ಪಾರ್ಟ್​ನಲ್ಲಿ ಎಲ್ಲವನ್ನೂ ತುರುಕುವ ಬದಲು, ಎರಡು ಪಾರ್ಟ್​ಗಳಲ್ಲಿ ಸಿನಿಮಾ ತೆರೆಗೆ ತರಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಮಾಹಿತಿ ಬರಬೇಕಿದೆ. ‘ಪುಷ್ಪ’ ಚಿತ್ರತಂಡಕ್ಕೂ ಶೂಟಿಂಗ್​ ಆರಂಭವಾದ ನಂತರದಲ್ಲಿ ಎರಡು ಪಾರ್ಟ್​​ನಲ್ಲಿ ತರುವ ಆಲೋಚನೆ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

Published On - 4:59 pm, Sun, 30 January 22

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ