AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್​ ನೀಲ್​ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳ ಕಡೆಗೆ ಗಮನ ಹರಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ಬೇರೆ ಬೇರೆ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಈ ಮೂವರು ಒಂದಾಗಿ ‘ಕೆಜಿಎಫ್​ 3’ ಸಿನಿಮಾ ಮಾಡುವುದು ಯಾವಾಗ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​
ಪ್ರಶಾಂತ್​ ನೀಲ್​, ಯಶ್​
ಮದನ್​ ಕುಮಾರ್​
|

Updated on: May 08, 2024 | 6:21 PM

Share

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆದ ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಕನ್ನಡ ಚಿತ್ರರಂಗಕ್ಕೆ ಹೊಸ ಮೆರುಗು ತಂದುಕೊಟ್ಟವು. ಈ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಪ್ರಶಾಂತ್​ ನೀಲ್​ (Prashanth Neel) ಅವರ ಖ್ಯಾತಿ ದೇಶಾದ್ಯಂತ ಹಬ್ಬಿತು. ನಟ ಯಶ್​ (Yash) ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೊರಹೊಮ್ಮಿದರು. ಈಗ ‘ಕೆಜಿಎಫ್​ 3’ (KGF 3) ಸಿನಿಮಾ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ನೀಲ್​ ಅವರು ಈ ಬಗ್ಗೆ ಮಾತನಾಡಿದ್ದಾರೆ. ಆ ಕುರಿತು ಪಿಂಕ್​ವಿಲ್ಲಾ ವರದಿ ಪ್ರಕಟ ಮಾಡಿದೆ.

‘ಕೆಜಿಎಫ್​ 3 ಸಿನಿಮಾ ಖಂಡಿತಾ ಆಗುತ್ತದೆ. ಅದರ ಸ್ಕ್ರಿಪ್ಟ್​ ಮಾಡಲಾಗಿದೆ. ಸ್ಕ್ರಿಪ್ಟ್​ ಬರೆದಿರಲಿಲ್ಲ ಎಂದಿದ್ದರೆ ಕೆಜಿಎಫ್​ 2ನಲ್ಲಿ ಅದನ್ನು ಹಾಕುತ್ತಿರಲಿಲ್ಲ. ನಾವು ಕೆಜಿಎಫ್​ ಪಾರ್ಟ್​ 3 ಮಾಡುತ್ತೇವೆ ಎಂಬುದು ಕೊನೆಗೆ ಎಲ್ಲರಿಗೂ ತಿಳಿದಿತ್ತು’ ಎಂದು ಪ್ರಶಾಂತ್​ ನೀಲ್​ ಹೇಳಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಸೂಪರ್​ ಹಿಟ್​ ಆಗಿದ್ದರಿಂದ 3ನೇ ಪಾರ್ಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.

ಅಷ್ಟಕ್ಕೂ ‘ಕೆಜಿಎಫ್​ 3’ ಸಿನಿಮಾ ಸೆಟ್ಟೇರುವುದು ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಈಗ ಪ್ರಶಾಂತ್​ ನೀಲ್ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳತ್ತ ಗಮನ ಹರಿಸಿದ್ದಾರೆ. ‘ರಾಕಿಂಗ್​ ಸ್ಟಾರ್​’ ಯಶ್​ ಅವರು ‘ಟಾಕ್ಸಿಕ್​’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ ಕೂಡ ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದೆ. ಸೂಕ್ತ ಸಮಯಲ್ಲಿ ಈ ಮೂವರೂ ಒಂದಾಗಬೇಕಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್​ ಜೊತೆ ನಟಿಸ್ತಾರಾ ನಯನತಾರಾ?

ಪ್ರಶಾಂತ್​ ನೀಲ್​ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ‘ಸಲಾರ್​ 2’ ಮುಗಿದ ಬಳಿಕ ಅವರು ಜೂನಿಯರ್​ ಎನ್​ಟಿಆರ್​ ಜೊತೆಗೆ ಸಿನಿಮಾ ಮಾಡಬೇಕಿದೆ. ಇತ್ತೀಚೆಗೆ ಅವರು ವಿಜಯ್​ ದೇವರಕೊಂಡ ನಿವಾಸಕ್ಕೆ ಭೇಟಿ ನೀಡಿದ್ದರು. ಆ ಭೇಟಿಯ ಉದ್ದೇಶ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಹೊಸ ಸಿನಿಮಾ ಕುರಿತು ಮಾತುಕತೆ ಮಾಡಲು ಅವರು ಅಲ್ಲಿಗೆ ಹೋಗಿರಬಹುದು ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ